ವಿಜಯಪುರ | ಬಗರ್‌ಹುಕುಂ ಭೂರಹಿತರಿಗೆ ಹಕ್ಕುಪತ್ರ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ

Date:

Advertisements

ಬಗರ್‌ಹುಕುಂ ಭೂಸಾಗುವಳಿ ಮಾಡುತ್ತಿರುವ ಭೂರಹಿತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಬಗರಹುಕುಂ ಸಾಗುವಳಿದಾರರ ಭೂ ಕಾರ್ಯಕಾರಿ ಮಂಡಳಿ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದಿಂದ ವಿಜಯಪುರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸೋಮಲಿಂಗ್ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಭೀಮರಾಯ ಪೂಜಾರಿ ಹಾಗೂ ಬಗರ ಹುಕುಂ ಭೂಸಾಗುವಳಿದಾರ ಕಾರ್ಯಕಾರಿ ಮಂಡಳಿ ಅಧ್ಯಕ್ಷ ಹೇಮಲು ಜಾದವ್ ಮಾತನಾಡಿ, “1998-99ರಲ್ಲಿ ಬಗರ್‌ಹುಕುಂ ಭೂಹಂಚಿಕೆ ಅಡಿಯಲ್ಲಿ ಸಂಬಂಧಪಟ್ಟ ಸರ್ವೇ ನಂಬ‌ರ್‌ರಗಳಲ್ಲಿ ಅರ್ಜಿ ನಮೂನೆ ಫಾರ್ಮ್ ನಂ:52/53/57ರ ಮುಖಾಂತರ ಜಾಲಗೇರಿ ಗ್ರಾಮದ ಭೂರಹಿತರು ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು” ಎಂದು ಹೇಳಿದರು.

“ಬಗರ್‌ಹುಕುಂ ಹಕ್ಕುಪತ್ರ ನೀಡುವಂತೆ 1998ರಲ್ಲಿಯೇ ಅರ್ಜಿ ಸಲ್ಲಿಸಲಾಗಿತ್ತು. ಅಲ್ಲಿಂದ ಈವರೆಗೆ ರೈತರು ಸಾಗುವಳಿ ಮಾಡುತ್ತ ಬಂದಿದ್ದಾರೆ. ಸಾಗುವಳಿ ಮಾಡುತ್ತಿರುವ ರೈತರಿಗೆ ಜಮೀನುಗಳ ಹಕ್ಕುಪತ್ರ ನೀಡಿಲ್ಲ. ಸಂಬಂಧಪಟ್ಟ ತಹಶೀಲ್ದಾರರಿಗೆ 2024ರ ನವೆಂಬರ್‌ 20ರ ಹಾಗೂ ಡಿಸೆಂಬರ್‌ 30ರಂದು ಮನವಿ ಸಲ್ಲಿಸಲಾಗಿದೆ. ಆದ್ದರಿಂದ ಹಕ್ಕುಪತ್ರ ನೀಡಬೇಕು” ಎಂದು ಆಗ್ರಹಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಗೋಣಿಕೊಪ್ಪ | ಹ್ಯೂಮಾನಿಟಿ ರಿಲೀಪ್ ಸೊಸೈಟಿ ಲೋಗೋ ಉದ್ಘಾಟನೆ

ಈ ಸಂದರ್ಭದಲ್ಲಿ ಸಾಬು ವಿಜಯಪುರ, ಗೋವಿಂದ ಲಮಾಣಿ, ಹೇಮು ಜಾದವ್, ವೇಣು ಲಮಾಣಿ‌, ಬಿಕ್ಕು ರಾಠೋಡ್, ಜಗಪ್ ರಾಥೋಡ್, ಲಾವು ರಾಠೋಡ, ಬಾಬು ಲಮಾಣಿ, ಸುರೇಶ್ ಚೌಹಾಣ, ಅಪ್ಪು ಜಾದವ್, ಹುನ್ನೂ ರಾಠೋಡ, ಗೋವಿಂದ ರಾಥೋಡ್, ಅಮಿನಾ ಪಿತೋಳಿ, ದುಖದೇವ ಜಾದವ್‌, ಸಂತೋಷ ರಾಠೋಡ್‌, ಸಯ್ಯಾಬಾಯಿ ಜಾದವ್, ತುಳಸಬಾಯಿ ಜಾದವ್‌, ರಾಗು ಪವಾರ್ ಕೃಷ್ಣ ಕೋರೆ, ಶ್ರೀಶೈಲ ಬಸನಾಳ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X