ಸೈಫ್ ಅಲಿ ಖಾನ್ ಚೇತರಿಕೆ, ಮೂರು ದಿನಗಳಲ್ಲಿ ಡಿಸ್ಚಾರ್ಜ್: ವೈದ್ಯರು

Date:

Advertisements

ಮುಂಬೈನಲ್ಲಿರುವ ತನ್ನ ನಿವಾಸದಲ್ಲಿ ಚಾಕು ಇರಿತಕ್ಕೆ ಒಳಗಾದ ನಟ ಸೈಫ್ ಅಲಿ ಖಾನ್ ಚೇತರಿಸಿಕೊಳ್ಳುತ್ತಿದ್ದು, ಇನ್ನೆರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಬಹುದು ಎಂದು ಶನಿವಾರ ವೈದ್ಯರು ಹೇಳಿದ್ದಾರೆ.

ಕುತ್ತಿಗೆ, ಬೆನ್ನು ಮೂಳೆ ಸೇರಿದಂತೆ ದೇಹದ ಹಲವು ಕಡೆ ಸೈಫ್ ಅಲಿ ಖಾನ್‌ಗೆ ಗುರುವಾರ ಚಾಕುವಿನಿಂದ ಇರಿಯಲಾಗಿದೆ. ಕಳ್ಳತನ ಮಾಡಲು ಬಂದಾತ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಸದ್ಯ ಸೈಫ್ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನು ಓದಿದ್ದೀರಾ? ನಟ ಶಿವರಾಜ್‌ಕುಮಾರ್‌ಗೆ ಕ್ಯಾನ್ಸರ್: ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿ; ವೈದ್ಯರು ಹೇಳಿದ್ದೇನು?

Advertisements

ಸದ್ಯ ಸೈಫ್ ಅವರನ್ನು ತುರ್ತು ನಿಗಾ ಘಟಕದಿಂದ ಸ್ಥಳಾಂತರಿಸಲಾಗುತ್ತಿದ್ದು, ಆರೋಗ್ಯ ಸುಧಾರಿಸುತ್ತಿದೆ ಎಂದು ಹೇಳಲಾಗಿದೆ.

“ನಾವೆಲ್ಲರೂ ಸೈಫ್ ಅಲಿ ಖಾನ್‌ನ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಿದ್ದೇವೆ. ಚಿಕಿತ್ಸೆಗೆ ಉತ್ತಮ ಪ್ರತಿಕ್ರಿಯೆಯಿದೆ. ಸದ್ಯ ಅವರು ಕೊಂಚ ಸಮಯ ವಿಶ್ರಾಂತಿ ಪಡೆಯಬೇಕು. ಇನ್ನು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದು” ಎಂದು ಲೀಲಾವತಿ ಆಸ್ಪತ್ರೆಯ ವೈದ್ಯ ಡಾ. ನಿತಿನ್ ಡಂಗೆ ಹೇಳಿದ್ದಾರೆ.

ಇನ್ನು ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಮಾಡಿದ ಆರೋಪಿಯ ಪತ್ತೆಗಾಗಿ ಪೊಲೀಸರು 30 ತಂಡಗಳನ್ನು ರಚಿಸಿದೆ. ಶಂಕಿತ ಆರೋಪಿಯ ಸಿಸಿಟಿವಿ ಚಿತ್ರ ಬಿಡುಗಡೆ ಮಾಡಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X