ಮೂರು ವರ್ಷಗಳ ನಂತರ ಮೆಹಬೂಬಾ ಮುಫ್ತಿಗೆ ಪಾಸ್‌ಪೋರ್ಟ್‌ ನೀಡಿಕೆ

Date:

Advertisements
  • ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದ ಮೆಹಬೂಬಾ ಮುಫ್ತಿ
  • ಜಮ್ಮು- ಕಾಶ್ಮೀರ ಹೈಕೋರ್ಟ್‌ನಲ್ಲಿ ಮೆಹಬೂಬಾ ಪುತ್ರಿ ಅರ್ಜಿ

ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರಿಗೆ 10 ವರ್ಷಗಳ ಅವಧಿಯ ಮಾನ್ಯತೆಯೊಂದಿಗೆ ಪಾಸ್‌ಪೋರ್ಟ್‌ ಅನ್ನು ನೀಡಲಾಗಿದೆ ಎಂದು ಶ್ರೀನಗರದ ಸ್ಥಳೀಯ ಮಾಧ್ಯಮಗಳು ಭಾನುವಾರ (ಜೂನ್‌ 4) ವರದಿ ಮಾಡಿವೆ.

ದೆಹಲಿ ಹೈಕೋರ್ಟ್‌ನಲ್ಲಿಯ ಸುದೀರ್ಘ ಕಾನೂನು ಹೋರಾಟದ ನಂತರ ಮೆಹಬೂಬಾ ಅವರಿಗೆ ಪಾಸ್‌ಪೋರ್ಟ್‌ ಅನ್ನು ತಲುಪಿಸಲಾಗಿದೆ ಎಂದು ವರದಿ ಹೇಳಿದೆ.

ಮೆಹಬೂಬಾ ಮುಫ್ತಿ ಅವರ ಪ್ರಯಾಣದ ದಾಖಲೆಯು 2019ರಲ್ಲಿ ಅವಧಿ ಪೂರ್ಣಗೊಂಡಿತ್ತು. ಈ ಹಿನ್ನೆಲೆ ಅವರು ಪ್ರಯಾಣದ ದಾಖಲೆಯ ನವೀಕರಣದ ನಿರೀಕ್ಷೆಯಲ್ಲಿದ್ದರು.

Advertisements

ಮೆಹಬೂಬಾ ಅವರಿಗೆ ನಿರ್ದಿಷ್ಟ ಅವಧಿಯ ಪ್ರಯಾಣದ ದಾಖಲೆ ನೀಡುವ ಪಾಸ್‌ಪೋರ್ಟ್‌ ಕಚೇರಿ ನಿರ್ಧಾರ ಪ್ರಶ್ನಿಸಿ ಅವರ ಪುತ್ರಿ ಇಲ್ತಿಜಾ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಇನ್ನೂ ಎರಡು ದಿನ ಬಾಕಿ ಇರುವಾಗ ಈ ಬೆಳವಣಿಗೆ ನಡೆದಿದೆ.

“2019ರಲ್ಲಿ ವಿಭಜನೆಗೂ ಮುನ್ನ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಕೊನೆಯ ಮುಖ್ಯಮಂತ್ರಿ ಆಗಿದ್ದ ಮೆಹಬೂಬಾ ಅವರಿಗೆ ಪಾಸ್‌ಪೋರ್ಟ್‌ ನೀಡಲಾಗಿದೆ. ಇದು 2023ರ ಜೂನ್‌ 1 ರಿಂದ 2033ರ ಮೇ 31ರವರೆಗೆ ಮಾನ್ಯತೆ ಹೊಂದಿರುತ್ತದೆ” ಎಂದು ಪಾಸ್‌ಪೋರ್ಟ್‌ ಕಚೇರಿ ಹೇಳಿದೆ.

ಮೆಹಬೂಬಾ ಅವರಿಗೆ ನೂತನ ಪಾಸ್‌ಪೋರ್ಟ್‌ ನೀಡುವ ಬಗ್ಗೆ ಮೂರು ತಿಂಗಳ ಒಳಗೆ ನಿರ್ಧರಿಸುವಂತೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಪ್ರತಿಭಾ ಎಂ.ಸಿಂಗ್‌ ಅವರು ಮಾರ್ಚ್ನಲ್ಲಿ ನೀಡಿದ ಆದೇಶದಲ್ಲಿ ಪಾಸ್‌ಪೋರ್ಟ್‌ ಪ್ರಾಧಿಕಾರಕ್ಕೆ ಸೂಚಿಸಿದ್ದರು.

ಇದಕ್ಕೂ ಮುನ್ನ ಮೆಹಬೂಬಾ ಅವರು ತಮಗೆ ಹೊಸ ಪಾಸ್‌ಪೋರ್ಟ್‌ ನೀಡುವ ಬಗ್ಗೆ ಪಾಸ್‌ಪೊರ್ಟ್‌ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕಡು ಬಡತನದಲ್ಲಿಯೂ 10ನೇ ತರಗತಿ ಪಾಸು ಮಾಡಿದ ಅಮ್ಮ-ಮಗ

ಮೆಹಬೂಬಾ ಮುಫ್ತಿ ಅವರು ತಮ್ಮ ಅರ್ಜಿಯಲ್ಲಿ, ಜ್ಞಾಪನೆಗಳ ಹೊರತಾಗಿಯೂ ತಮ್ಮ ಹೊಸ ಪಾಸ್‌ಪೋರ್ಟ್‌ ವಿತರಣೆಗೆ ಗಣನೀಯ ವಿಳಂಬ ಮಾಡಲಾಗಿದೆ ಎಂದು ಆರೋಪಿಸಿದ್ದರು.

ಮೆಹಬೂಬಾ ಅವರ ಹೊಸ ಪಾಸ್‌ಪೋರ್ಟ್ ಕುರಿತು ಮರುಪರಿಶೀಲನೆ ನಡೆಸುವಂತೆ ಜಮ್ಮು ಮತ್ತು ಕಾಶ್ಮೀರದ ಪಾಸ್‌ಪೋರ್ಟ್‌ ಕಚೇರಿಗೆ ಸೂಚಿಸಿ ಮಾರ್ಚ್ 2 ರಂದು ಆದೇಶ ಹೊರಡಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಪರ ವಕೀಲ ನ್ಯಾಯಾಲಯಕ್ಕೆ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

Download Eedina App Android / iOS

X