7 ಇನ್ನಿಂಗ್ಸ್‌ನಲ್ಲಿ 752 ರನ್, 6 ಬಾರಿ ನಾಟ್‌ಔಟ್‌; ಹೊಸ ದಾಖಲೆಯ ಅಂಚಿನಲ್ಲಿ ಕರುಣ್ ನಾಯರ್

Date:

Advertisements

ವಿದರ್ಭ ತಂಡದ ಬ್ಯಾಟರ್‌ ಕರುಣ್ ನಾಯರ್ ಅವರು ಇತ್ತೀಚೆಗೆ ಆಡಿದ 7 ಇನ್ನಿಂಗ್ಸ್‌ಗಳಲ್ಲಿ 5 ಶತಕಗಳೊಂದಿಗೆ 752 ರನ್‌ ಗಳಿಸಿದ್ದಾರೆ. ಮಾತ್ರವಲ್ಲದೆ, ಆರು ಇನ್ನಿಂಗ್ಸ್‌ಗಳಲ್ಲಿ ಔಟ್‌ ಆಗದೇ ಉಳಿದಿದ್ದಾರೆ. ಆ ಮೂಲಕ ಹೊಸ ದಾಖಲೆ ಬರೆಯುವತ್ತ ಹೆಜ್ಜೆ ಇಟ್ಟಿದ್ದಾರೆ.’

ವಿಜಯ್ ಹಜಾರೆ ಟ್ರೋಫಿಯಲ್ಲಿ ವಿದರ್ಭ ತಂಡವನ್ನು ಮುನ್ನಡೆಸುತ್ತಿರುವ ನಾಯರ್, ಆ ಟೂರ್ನಿಯ 7 ಪಂದ್ಯಗಳಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಟೂರ್ನಿಯ ಪಂದ್ಯವೊಂದರಲ್ಲಿ ಅಜೇಯ 163 ರನ್ ಕಲೆ ಹಾಕಿ ಗರಿಷ್ಠ ಮೊತ್ತ ದಾಖಲಿಸಿದ್ದಾರೆ.

ಗುರುವಾರ, ಮಹಾರಾಷ್ಟ್ರದ ವಿರುದ್ಧ ನಡೆದ ಸೆಮಿಫೈನಲ್‌ನಲ್ಲಿ ನಾಯರ್ 44 ಎಸೆತಗಳಲ್ಲಿ 9 ಬೌಂಡರಿಗಳು ಮತ್ತು 5 ಸಿಕ್ಸರ್‌ಗಳೊಂದಿಗೆ 88* ರನ್ ಗಳಿಸಿದರು. ವಿದರ್ಭ ತಂಡವು 380 ರನ್‌ಗಳನ್ನು ಪೇರಿಸಿ, ಸೆಮಿಫೈನಲ್‌ನಲ್ಲಿ ಗೆಲುವು ಸಾಧಿಸಿತು.

Advertisements

ಶನಿವಾರ, ವಿದರ್ಭ ಮತ್ತು ಕರ್ನಾಟಕದ ನಡುವೆ ಗುಜರಾತ್‌ನ ವಡೋದರಾದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಪಂದ್ಯದಲ್ಲಿ ಎಲ್ಲರ ಚಿತ್ತವೂ ನಾಯರ್ ಅವರು ಅಬ್ಬರದ ಬ್ಯಾಟಿಂಗ್‌ ಮೇಲೆಯೇ ಕೇಂದ್ರೀಕರಿಸಲಿದೆ.

ಈ ಪಂದ್ಯದಲ್ಲಿ ನಾಯರ್ ಉತ್ತಮ ಪ್ರದರ್ಶನ ನೀಡಿದರೆ, ಹಜಾರೆ ಟ್ರೋಫಿಯಲ್ಲಿ ಸಾರ್ವಕಾಲಿಕ ದಾಖಲೆ ಮುರಿದು, ಹೊಸ ದಾಖಲೆ ನಿರ್ಮಿಸಲಾಗಿದ್ದಾರೆ. ಅವರು ಫೈನಲ್‌ ಪಂದ್ಯದಲ್ಲಿ 79 ರನ್ ಗಳಿಸಿದರೂ, ಟ್ರೋಫಿಯಲ್ಲಿ ಅತೀ ಹೆಚ್ಚು ರನ್‌ ಗಳಿಸಿದ ನ್ಯಾಟರ್‌ ಎಂಬ ಖ್ಯಾತಿಗೆ ಪಾತ್ರರಾಗಲಿದ್ದಾರೆ.

ಈ ಹಿಂದೆ, 2022/23ರಲ್ಲಿ ನಡೆದಿದ್ದ, ಹಜಾರೆ ಟ್ರೋಫಿಯಲ್ಲಿ ತಮಿಳುನಾಡಿನ ಬ್ಯಾಟರ್ ನಾರಾಯಣ್ ಜಗದೀಶನ್ ಅವರು ಒಟ್ಟು 8 ಪಂದ್ಯಗಳಿಂದ 830 ರನ್‌ ಗಳಿಸಿದ್ದರು. ಇಗ, ನಾಯರ್ 79 ರನ್‌ಗಳಿಸಿದರೆ, ನಾರಾಯಣ್ ಅವರ ದಾಖಲೆಯನ್ನು ಮುರಿಯಬಹುದು.

ನಾಯರ್ ಅವರ ಪ್ರದರ್ಶನದ ಬಗ್ಗೆ ಟ್ವೀಟ್ ಮಾಡಿರುವ ಸಚಿನ್ ತೆಂಡೂಲ್ಕರ್, “7 ಇನ್ನಿಂಗ್ಸ್‌ಗಳಲ್ಲಿ 5 ಶತಕಗಳೊಂದಿಗೆ 752 ರನ್ ಗಳಿಸುವುದು ಅಸಾಧಾರಣ. ಈ ರೀತಿಯ ಪ್ರದರ್ಶನಗಳು ಕೇವಲ ಸಂಭವಿಸುವುದಿಲ್ಲ. ಕಠಿಣ ಪರಿಶ್ರಮದಿಂದ ಬರುತ್ತವೆ. ಬಲಿಷ್ಠವಾಗಿ ಮುಂದುವರಿಯಿರಿ ಮತ್ತು ಪ್ರತಿಯೊಂದು ಅವಕಾಶವನ್ನೂ ಗಣನೆಗೆ ತೆಗೆದುಕೊಳ್ಳಿ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X