ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣ; ಶಂಕಿತ ಆರೋಪಿ ಮಧ್ಯಪ್ರದೇಶದಲ್ಲಿ ಬಂಧನ

Date:

Advertisements

ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಮಧ್ಯಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. 54 ವರ್ಷದ ನಟನ ಮೇಲೆ ಮುಂಬೈನಲ್ಲಿರುವ ನಿವಾಸದಲ್ಲಿ ವ್ಯಕ್ತಿಯೋರ್ವ ಚಾಕುವಿನಿಂದ ಇರಿದಿದ್ದ. ಸದ್ಯ ಸೈಫ್ ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.

ಮುಂಬೈನಿಂದ ಹೌರಾಕ್ಕೆ ತೆರಳುವ ಜ್ಞಾನೇಶ್ವರಿ ಎಕ್ಸ್‌ಪ್ರೆಸ್‌ನಲ್ಲಿ ತೆರಳುತ್ತಿದ್ದ ಶಂಕಿತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ರೈಲ್ವೆ ತಂಡ (ಆರ್‌ಪಿಎಫ್) ತಿಳಿಸಿದರುವುದಾಗಿ ವರದಿಯಾಗಿದೆ. ಇನ್ನು ಆರೋಪಿಯನ್ನು ಆಕಾಶ್ ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ಸೈಫ್ ಅಲಿ ಖಾನ್ ಚೇತರಿಕೆ, ಮೂರು ದಿನಗಳಲ್ಲಿ ಡಿಸ್ಚಾರ್ಜ್: ವೈದ್ಯರು

Advertisements

“ಮುಂಬೈ ಪೊಲೀಸರು ಶಂಕಿತ ಆರೋಪಿಯ ಚಿತ್ರ, ರೈಲು ಸಂಖ್ಯೆ, ಸ್ಥಳದ ವಿವರವನ್ನು ಆರ್‌ಪಿಎಫ್‌ಗೆ ಕಳುಹಿಸಿದ್ದರು. ಪ್ರಸ್ತುತ ಆರೋಪಿ ಆಕಾಶ್ ಆರ್‌ಪಿಎಫ್‌ ವಶದಲ್ಲಿದ್ದಾನೆ. ಮುಂಬೈ ಪೊಲೀಸರು ಬಂದು ಆತನೇ ಆರೋಪಿಯೇ ಎಂಬುದನ್ನು ವಿಚಾರಣೆ ನಡೆಸಿ ಖಚಿತಪಡಿಸಲಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಟ ಸೈಫ್ ಆರೋಗ್ಯ ಸುಧಾರಿಸುತ್ತಿದ್ದು, ಇನ್ನೆರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು ಎಂದು ವೈದ್ಯರು ಶನಿವಾರ ತಿಳಿಸಿದ್ದಾರೆ.

ಸೈಫ್ ಪತ್ನಿ ನಟಿ ಕರೀನಾ ಕಪೂರ್ ವಿಚಾರಣೆಯನ್ನು ಪೊಲೀಸರು ಮಾಡಿದ್ದು, “ಆರೋಪಿ ಸೈಫ್ ಮೇಲೆ ಹಲವು ಬಾರಿ ಚಾಕುವಿನಿಂದ ಇರಿದನು. ಆತ ಆಕ್ರೋಶದಲ್ಲಿದ್ದ. ಸೈಫ್ ಅನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವುದೇ ನಮ್ಮ ಆದ್ಯತೆಯಾಗಿತ್ತು” ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

Download Eedina App Android / iOS

X