ಬಿಹಾರ ಜಾತಿ ಸಮೀಕ್ಷೆ ನಕಲಿ, ದೇಶಾದ್ಯಂತ ಗಣತಿ ನಡೆಯಬೇಕಿದೆ: ರಾಹುಲ್ ಗಾಂಧಿ

Date:

Advertisements

ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನಡೆಸಿದ ಜಾತಿ ಸಮೀಕ್ಷೆಯನ್ನು ‘ನಕಲಿ’ ಎಂದು ಕರೆದಿರುವ ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ದೇಶಾದ್ಯಂತ ಗಣತಿ ನಡೆಯುವ ಅಗತ್ಯವಿದೆ ಎಂದು ಹೇಳಿದ್ದಾರೆ. ಬಿಹಾರದಲ್ಲಿ 2022-2023ರಲ್ಲಿ ಜಾತಿ ಸಮೀಕ್ಷೆಯನ್ನು ನಡೆಸಲಾಗಿದೆ.

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಹೇಗಾದರೂ ದೇಶಾದ್ಯಂತ ಜಾತಿ ಗಣತಿ ನಡೆಸಲು ಕಾಂಗ್ರೆಸ್ ಸಕಲ ಪ್ರಯತ್ನವನ್ನು ನಡೆಸಲಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ನಮ್ಮ ಮುಂದಿನ ಗುರಿ ‘ಜಾತಿ ಗಣತಿ’ ಜಾರಿ ಮಾಡುವಂತೆ ಮಾಡುವುದು: ರಾಹುಲ್‌ ಗಾಂಧಿ

Advertisements

“ರಾಜಕೀಯವಾಗಿ ನಾವು ನಷ್ಟವನ್ನು ಅನುಭವಿಸಬೇಕಾದ ಸ್ಥಿತಿ ಎದುರಾದರೂ ಕೂಡಾ ನಾವು ಜಾತಿ ಗಣತಿ ಮಾಡಿಸುತ್ತೇವೆ. ಇದು ಬಿಹಾರದಲ್ಲಿ ನಡೆಸಿದ ನಕಲಿ ಜಾತಿ ಸಮೀಕ್ಷೆಯಂತೆ ಇರಲಾರದು. ಬಿಹಾರದ ಜನರನ್ನು ಜಾತಿ ಸಮೀಕ್ಷೆ ಹೆಸರಲ್ಲಿ ಜನರನ್ನು ಮುರ್ಖರನ್ನಾಗಿಸಲಾಗುತ್ತಿದೆ” ಎಂದು ಹೇಳಿದರು.

ಇನ್ನು ದೇಶಾದ್ಯಂತ ಜಾತಿ ಗಣತಿ ನಡೆಸಬೇಕು ಎಂಬ ತನ್ನ ಬೇಡಿಕೆಯನ್ನು ರಾಹುಲ್ ಗಾಂಧಿ ಪುನರುಚ್ಛರಿಸಿದರು. ಹಾಗೆಯೇ ದಲಿತ, ಹಿಂದುಳಿದ ವರ್ಗ, ಆದಿವಾಸಿ ಮತ್ತು ಅಲ್ಪಸಂಖ್ಯಾತ ಸಮುದಾಯದ ಹಿತಾಸಕ್ತಿಯಿಂದ ದೇಶಾದ್ಯಂತ ಜಾತಿ ಗಣತಿ ನಡೆಸಬೇಕು” ಎಂದು ರಾಹುಲ್ ಆಗ್ರಹಿಸಿದರು.

“ಈ ಎಲ್ಲಾ ಸಮುದಾಯಗಳ ಜನಸಂಖ್ಯೆ, ಶಾಸಕಾಂಗದಲ್ಲಿ ಅವರ ಭಾಗಿತ್ವ, ಶೈಕ್ಷಣಿಕ ಕ್ಷೇತ್ರದಲ್ಲಿ, ಖಾಸಗಿ ಸಂಸ್ಥೆಗಳಲ್ಲಿ ಈ ಸಮುದಾಯದ ಭಾಗಿತ್ವವನ್ನು ಕೂಡಾ ಈ ಜಾತಿ ಗಣತಿ ಅಥವಾ ಸಮೀಕ್ಷೆ ಒಳಗೊಂಡಿರುತ್ತದೆ” ಎಂದು ಕಾಂಗ್ರೆಸ್ ಸಂಸದ ತಿಳಿಸಿದರು.

ಇದನ್ನು ಓದಿದ್ದೀರಾ? ಬಿಹಾರದ ಜಾತಿ ಗಣತಿಯನ್ನು ಸ್ವಾಗತಿಸಿದ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’

ಇನ್ನು ಈ ಸಮುದಾಯಗಳ ಸಾಮಾಜಿಕ- ಆರ್ಥಿಕ ಪರಿಸ್ಥಿತಿಯ ಆಧಾರದಲ್ಲಿ ಅಭಿವೃದ್ಧಿ ನೀತಿಗಳನ್ನು ರೂಪಿಸಬೇಕು. ದೇಶದ ಸಂಪತ್ತು ಕೆಲವೇ ಜನರ ಕೈಯಲ್ಲಿದೆ. ಬಡವರು ಮತ್ತು ರೈತರು ಅತೀ ಕೆಟ್ಟ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಹೇಳಿದರು.

ಖಾಸಗಿ ಕ್ಷೇತ್ರದಲ್ಲಿ ದಲಿತ ಸಮುದಾಯದ ಸಹಭಾಗಿತ್ವದ ಬಗ್ಗೆಯೂ ಕಾಂಗ್ರೆಸ್ ಸಂಸದ ಮಾತನಾಡಿದ್ದಾರೆ. “500 ಖಾಸಗಿ ಸಂಸ್ಥೆಗಳ ಪಟ್ಟಿಯನ್ನು ಮಾಡಿದರೆ ಆ ಸಂಸ್ಥೆಗಳಲ್ಲಿ ದಲಿತ ಸಮುದಾಯಕ್ಕೆ ಸೇರಿದವರು ಇರುವುದು ಅತೀ ಕಡಿಮೆ” ಎಂದು ಅಭಿಪ್ರಾಯಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X