ಯಾದಗಿರಿ | ಜ.24ರಂದು ಸನ್ನತಿ ಪಂಚಶೀಲ ಪಾದಯಾತ್ರೆ ಸಮಾರೋಪ ಸಮಾರಂಭ

Date:

Advertisements

ಬೌದ್ಧ ಐತಿಹಾಸಿಕ ಕ್ಷೇತ್ರ ಸನ್ನತಿ ಅಭಿವೃದ್ಧಿ ಮಂಡಳಿ ಪೂರ್ಣ ಪ್ರಮಾಣದಲ್ಲಿ ರಚಿಸಿ ತೆಲಂಗಾಣದ ಬುದ್ಧವನ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಆಗ್ರಹಿಸಿ ಮತ್ತು ಬೌದ್ಧ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನ.15 ರಿಂದ ನಡೆದ ಸನ್ನತಿ ಪಂಚಶೀಲ ಪಾದಯಾತ್ರೆ ಸಮಾರೋಪ ಸಮಾರಂಭ ಜ.24ರಂದು ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ನಡೆಯಲಿದೆ ಎಂದು ಬೌದ್ಧ ಸಾಹಿತಿ ದೇವೇಂದ್ರ ಹೆಗ್ಗಡೆ ಹೇಳಿದರು

ಯಾದಗಿರಿ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ವಿಶ್ವಶಾಂತಿ, ಸನ್ನತಿ ಪ್ರದೇಶ ಅಭಿವೃದ್ಧಿಗೆ ಅನುದಾನ ಮತ್ತು ಬೌದ್ಧ ಧಮ್ಮ ಅಭಿವೃದ್ಧಿ ನಿಗಮ ಸ್ಥಾಪನೆ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸುಮಾರು 800 ಕಿ.ಮೀ. ಪಾದಯಾತ್ರೆಯನ್ನು ಆಯೋಜಿಸಲಾಗಿದ್ದು, ಬೌದ್ಧ ಐತಿಹಾಸಿಕ ಕ್ಷೇತ್ರ ಸನ್ನತಿ ಅಭಿವೃದ್ಧಿ ಮಂಡಳಿ ಪೂರ್ಣ ಪ್ರಮಾಣದಲ್ಲಿ ರಚಿಸಿ, ಸನ್ನತಿ ಅಭಿವೃದ್ಧಿ ಪ್ರಾಧಿಕಾರದ ಯೋಜನೆಯನ್ನು ಆಂಧ್ರದ ಬುದ್ಧವನ ಮಾದರಿಯಲ್ಲಿ ಕನಿಷ್ಟ 200 ಎಕರೆ ಪ್ರದೇಶದಲ್ಲಿ ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿಪಡಿಸಬೇಕು’ ಎಂದು ಹೇಳಿದರು.

ದಲಿತ ಮುಖಂಡ ಮಲ್ಲಿಕಾರ್ಜುನ ಪೂಜಾರಿ, ‘ಸನ್ನತ್ತಿಯನ್ನು 7 ಸ್ಟಾರ್ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಮಾಡಬೇಕು. ಪರಿಶಿಷ್ಟ ಜಾತಿಯ ಬೌದ್ದರ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗಾಗಿ ಕರ್ನಾಟಕ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು. ಬೌದ್ಧರ ಸರ್ವಾಂಗೀಣ ಅಭಿವೃದ್ಧಿ ಹಾಗೂ ಬೌದ್ಧ ಕ್ಷೇತ್ರಗಳ ಅಭಿವೃದ್ಧಿಗಾಗಿ ಕನಿಷ್ಠ 1000 ಕೋಟಿ ಅನುದಾನ ಈ ಬಜೆಟ್‌ನಲ್ಲಿ ಒದಗಿಸುವುದು ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗುತ್ತಿದೆ’ ಎಂದು ತಿಳಿಸಿದರು.

Advertisements

ನೀಲಕಂಠ ಬಡಿಗೇರ ಮಾತನಾಡಿ, ‘ಈ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯದ ಸಮಸ್ತ ಬಿಕ್ಕು ಸಂಘ, ಬೌದ್ಧ ಸಂಘ ಸಂಸ್ಥೆಗಳು. ಎಲ್ಲಾ ದಲಿತ ಸಂಘರ್ಷ ಸಮಿತಿಗಳ ರಾಜ್ಯ ಸಂಚಾಲಕರು, ಮುಖಂಡರು. ನೌಕರರು, ವಿದ್ಯಾರ್ಥಿ ಯುವಜನರು, ಕಾರ್ಮಿಕರು, ಮಹಿಳೆಯರು ಮತ್ತು ಪ್ರಗತಿಪರ ಚಿಂತಕರು ಸೇರಿದಂತೆ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ. ವಿವಿಧ ಬೇಡಿಕೆಗಳ ಹಕ್ಕೊತ್ತಾಯ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರು ಸ್ವೀಕರಿಸಲಿದ್ದಾರೆ’ ಎಂದು ತಿಳಿಸಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬೌದ್ಧ ಉಪಾಸಕರು, ಉಪಾಸಿಕರು ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಅವರ ಅನುಯಾಯಿಗಳು, ದಲಿತ ಸಂಘಟನೆಗಳ ಮುಖಂಡರು, ಪ್ರಗತಿಪರ ಚಿಂತಕರು ಸನ್ನತಿ ಪಂಚಶೀಲ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಯಶ್ವಸ್ವಿಗೊಳಿಸಬೇಕು ಎಂದು ವಿನಂತಿಸಿದರು.

ಹಿರಿಯ ದಲಿತ ಮುಖಂಡರಾದ ಮರೆಪ್ಪ ಚಟ್ರೇಕರ, ಮರೆಪ್ಪ ಬುಕ್ಕಲ್, ಡಾ.ಭಗವಂತ ಅನ್ವರ್, ಬಾಬುರಾವ್ ಭೂತಾಳೆ, ವೆಂಕಟೇಶ ಹೊಸಮನಿ, ಶ್ರೀನಿವಾಸ ನಾಯಕ್, ರಾಮಣ್ಣ ಕಲ್ಲದೇವನಹಳ್ಳಿ, ಶರಣು ನಾಟೇಕರ್, ಸೈದಪ್ಪ ಕೂಲ್ಲೂರು, ಮಾಳಪ್ಪ ಕಿರದಳ್ಳಿ, ಗೋಪಾಲ ತೆಲಗೇರ, ನಿಂಗಪ್ಪ, ಕೊಲ್ಲೂರ, ಸುರೇಶ್ವರ, ಶಿವರಾಮ ಹೊಸ್ನಿ, ಆದಪ್ಪ ನಿಂಗಣ್ಣ ಬೀರನಾಳ, ಹೊಸಮನಿ, ಚಂದ್ರಕಾಂತ ಚಲವಾದಿ, ಹೊನ್ನಪ್ಪ ನಾಟೇಕರ್, ಗಿರೀಶ್ ಚಟ್ಟೇರಕರ ಸೇರಿದಂತೆ ದಲಿತ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X