ದಲ್ಲೇವಾಲ್ ಉಪವಾಸ – ದೆಹಲಿ ಚಲೋಗೆ ಮಂಡಿಯೂರಿದ ಪ್ರಧಾನಿ ಮೋದಿ; ರೈತರಿಗೆ ಪ್ರಸ್ತಾವನೆ ಸಲ್ಲಿಸಿದ ಕೇಂದ್ರ ಸರ್ಕಾರ

Date:

Advertisements

ಕಳೆದ 55 ದಿನಗಳಿಂದ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಆಮರಣಾಂತ ಉಪವಾಸ ನಡೆಸುತ್ತಿದ್ದಾರೆ. ರೈತರು ಜನವರಿ ಜನವರಿ 21ರಂದು ದೆಹಲಿ ಚಲೋ ನಡೆಸುವುದಾಗಿ ಘೋಷಿಸಿದ್ದಾರೆ. ರೈತ ಹೋರಾಟಕ್ಕೆ ಸ್ಪಂದಿಸದೆ ಮೊಂಡು ಧೋರಣೆ ತಳೆದಿದ್ದ ಕೇಂದ್ರ ಸರ್ಕಾರ, ಇದೀಗ ರೈತ ಹೋರಾಟದ ಎದುರು ಮಂಡಿಯೂರಿದೆ. ಪ್ರತಿಭಟನಾನಿರತ ರೈತರಿಗೆ ಪ್ರಸ್ತಾವನೆ ಕಳಿಸಿದೆ.

ಪ್ರಸ್ತಾವನೆಯ ಬಗ್ಗೆ ಮಾಹಿತಿ ನೀಡಿರುವ ಖನೌರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು, “ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಪ್ರಿಯ ರಂಜನ್ ನೇತೃತ್ವದ ಕೇಂದ್ರ ಸರ್ಕಾರದ ತಂಡವು ಶನಿವಾರ ನಮಗೆ ಪ್ರಸ್ತಾವನೆಯೊಂದನ್ನು ನೀಡಿದೆ. ಅದನ್ನು ನಾವು ಪರಿಶೀಲಿಸುತ್ತಿದ್ದೇವೆ. ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದಲ್ಲೇವಾಲ್ ಅವರನ್ನು ಕೂಡ ತಂಡವು ಭೇಟಿ ಮಾಡಿದೆ” ಎಂದು ತಿಳಿಸಿದ್ದಾರೆ.

“ದಲ್ಲೆವಾಲ್ ಅವರ ಆರೋಗ್ಯದ ಬಗ್ಗೆ ಸರ್ಕಾರ ಕಾಳಜಿ ಇದ್ದು, ಅವರ ಸ್ಥಿತಿಯ ಬಗ್ಗೆ ವಿಚಾರಿಸಲು ಬಂದಿರುವುದಾಗಿ ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಸರ್ಕಾರದೊಂದಿಗೆ ಮಾತುಕತೆ ನಡೆಸಲು ರೈತ ಸಂಘಟನೆಗಳಾದ ಎಸ್‌ಕೆಎಂ ಮತ್ತು ಕೆಎಂಎಂ ನಾಯಕರನ್ನು ಕೇಳಿಕೊಂಡಿದ್ದಾರೆ. ರೈತ ನಾಯಕರೊಂದಿಗೆ ಸುಮಾರು 2 ಗಂಟೆಗಳ ಕಾಲ ಸಭೆ ನಡೆಸಿದ್ದಾರೆ” ಎಂದು ರೈತ ನಾಯಕ ಅಭಿಮನ್ಯು ಕೊಹರ್ ಹೇಳಿದ್ದಾರೆ.

Advertisements

ಈ ವರದಿ ಓದಿದ್ದೀರಾ?: ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

ಇನ್ನು, ಎಸ್‌ಕೆಎಂ ಮತ್ತು ಕೆಎಂಎಂ ನಡುವೆ ಒಗ್ಗಟ್ಟು ಮೂಡಿಸಲು ಸಭೆಗಳು ನಡೆಯುತ್ತಿವೆ. ಅವರು (ಎಸ್‌ಕೆಎಂ) ಕನಿಷ್ಠ ಏಕತೆಯತ್ತ ಹೆಜ್ಜೆ ಇಟ್ಟಿದ್ದಾರೆ. ಆದರೆ, ನಮ್ಮ ಉದ್ದೇಶ ಗರಿಷ್ಠ ಏಕತೆ ಎಂದು ಕೆಎಂಎಂ ಸಂಯೋಜಕ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ. ದಲ್ಲೆವಾಲ್ ಅವರ ಆರೋಗ್ಯ ಕ್ಷೀಣಿಸುತ್ತಿರುವುದನ್ನು ಪರಿಗಣಿಸಿ ಮುಂದಿನ ಸಭೆ ಮುಂದೂಡುವಂತೆ ಅವರು ಎಸ್‌ಕೆಎಂ ಮುಖಂಡರು ಒತ್ತಾಯಿಸಿದ್ದಾರೆ. ಜನವರಿ 24 ರಂದು ನಡೆಯಲಿರುವ ಎಸ್‌ಕೆಎಂ ಸಾಮಾನ್ಯ ಸಭೆಯ ನಂತರ ಮುಂದಿನ ಸಭೆಯ ದಿನಾಂಕವನ್ನು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X