ಬೆಂಗಳೂರು | ಬ್ರೇಕ್‌ ವಿಫಲವಾಗಿ ಅಡ್ಡಾದಿಡ್ಡಿಯಾಗಿ ಓಡಾಡಿದ ಬಿಎಂಟಿಸಿ ಬಸ್‌

Date:

Advertisements

ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಬ್ರೇಕ್ ವಿಫಲವಾಗಿ ಬೀಡಾ ಅಂಗಡಿ ಹಾಗೂ ಡಾಬಾ ಗೋಡೆಗೆ ಡಿಕ್ಕಿಯಾದ ಘಟನೆ ಕೆಂಗೇರಿಯ ನಾಗದೇವನಹಳ್ಳಿ ರಸ್ತೆಯಲ್ಲಿ ನಡೆದಿದೆ. 

ಬೆಳಗ್ಗೆ 6.27ರ ಸುಮಾರಿಗೆ ಬಸ್ ಶಿರ್ಕೆ ಸರ್ಕಲ್‌ನಿಂದ ನಾಗರಭಾವಿ ಕಡೆ ಹೊರಟಿತ್ತು. ಈ ಸಮಯದಲ್ಲಿ ಬಸ್ ಅಪಘಾತ ನಡೆದಿದೆ. ಅಪಘಾತದ ವೇಳೆ ರಸ್ತೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ.

ಅವಘಡದಿಂದ ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರು ಕೆಲ ಸಮಯ ಆತಂಕಕ್ಕೆ ಒಳಗಾಗಿದ್ದರು.ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

ಒಂದು ದಿನದ ಹಿಂದಷ್ಟೆ ಚಾಮರಾಜ ನಗರ ಅಜ್ಜೀಪುರ – ಹನೂರು ಮಾರ್ಗಮಧ್ಯೆ ಕೆಎಸ್‌ಆರ್‌ಟಿಸಿ ಬಸ್‌ ಬ್ರೇಕ್ ವಿಫಲವಾಗಿ, ಚಾಲಕನ ಸಮಯಪ್ರ ಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದರು.

ಬೆಳಗ್ಗೆ 10 ಗಂಟೆಯಲ್ಲಿ ಬಸ್ ರಾಮಾಪುರದಿಂದ ಹನೂರಿನತ್ತ ತೆರಳುತ್ತಿತ್ತು . 60 ಜನ ಪ್ರಯಾಣಿಸುತ್ತಿದ್ದರು. ಈ ವೇಳೆ ಅಜ್ಜೀ ಪುರ ಗ್ರಾಮ ಸಮೀಪದ ಆಂಜನೇಯಸ್ವಾಮಿ ದೇಗುಲದ ಬಳಿ ಬಸ್‌ನ ಬ್ರೇಕ್ ವಿಫಲಗೊಂಡಿತು. ಇದನ್ನು ಅರಿತ ಚಾಲಕ ರಸ್ತೆ ಬದಿಯಲ್ಲಿ ನಿಧಾನವಾಗಿ ಬಸ್ ನಿಲ್ಲಿಸುವ ಮೂಲಕ ಸಮಯಪ್ರಜ್ಞೆಯನ್ನು ಮೆರೆದಿದ್ದರು. ನಂತರ ಬೇರೊಂದು ಬಸ್ಸಿನಲ್ಲಿ ಎಲ್ಲರೂ ನಿಗದಿತ ಸ್ಥಳಕ್ಕೆ ತೆರಳಲು ಅನುವು ಮಾಡಿಕೊಡಲಾಯಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X