ಛತ್ತೀಸ್‌ಗಢ | ಎನ್‌ಕೌಂಟರ್; ಹಿರಿಯ ಮಾವೋವಾದಿ ನಾಯಕ ಸೇರಿ 18 ನಕ್ಸಲರು ಹತ

Date:

Advertisements

ಕಳೆದ ಗುರುವಾರ ಬಿಜಾಪುರ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಹನ್ನೆರಡು ನಕ್ಸಲರ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಇದಾದ ಎರಡು ದಿನಗಳ ಬಳಿಕ ತೆಲಂಗಾಣ ರಾಜ್ಯ ಸಮಿತಿಯ ಹಿರಿಯ ನಾಯಕ ದಾಮೋದರ್ ಸೇರಿದಂತೆ 18 ಕಾರ್ಯಕರ್ತರನ್ನು ಕಳೆದುಕೊಂಡಿರುವುದಾಗಿ ನಕ್ಸಲ್ ಸಂಘಟನೆ ಹೇಳಿಕೆ ನೀಡಿದೆ.

ದಾಮೋದರ್ ಅಲಿಯಾಸ್ ಚೋಕಾ ರಾವ್ ಅವರ ತಲೆಗೆ 50 ಲಕ್ಷ ರೂಪಾಯಿಗಳ ಬಹುಮಾನವನ್ನು ಘೋಷಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ನಕ್ಸಲೀಯ ಬಿಕ್ಕಟ್ಟಿಗೆ ಪರಿಹಾರದ ಹೊಸ ಮಾದರಿಯನ್ನು ಕಟ್ಟಿಕೊಟ್ಟ ಕರ್ನಾಟಕ : ಶಾಂತಿಗಾಗಿ ನಾಗರಿಕರ ವೇದಿಕೆ ಮೆಚ್ಚುಗೆ

Advertisements

ಸಿಪಿಐ (ಮಾವೋವಾದಿ) ದಕ್ಷಿಣ ಬಸ್ತಾರ್ ವಿಭಾಗೀಯ ಸಮಿತಿಯ ಕಾರ್ಯದರ್ಶಿ ಗಂಗಾ ಈ ಬಗ್ಗೆ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ದಾಮೋದರ್ ಹತ್ಯೆಯು ನಮ್ಮ ಸಂಘಟನೆ ದೊಡ್ಡ ನಷ್ಟವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇನ್ನು ಗುಂಡಿನ ಚಕಮಕಿಯಲ್ಲಿ ಐದು ಭದ್ರತಾ ಸಿಬ್ಬಂದಿಯೂ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

“ಬಸ್ತರ್ ಈಗ ದೇಶದ ಅತ್ಯಂತ ಮಿಲಿಟರಿ ವಲಯವಾಗಿ ಮಾರ್ಪಟ್ಟಿದೆ. ಮಾವೋವಾದಿ ವಿರೋಧಿ ಅಭಿಯಾನದ ನೆಪದಲ್ಲಿ ಬುಡಕಟ್ಟು ಸಮುದಾಯಗಳನ್ನು ಪದೇ ಪದೇ ಗುರಿಯಾಗಿಸಲಾಗುತ್ತಿದೆ” ಎಂದು ಕೂಡಾ ಹೇಳಿಕೆಯಲ್ಲಿ ಸೇರಿಸಲಾಗಿದೆ.

ಇನ್ನು ಬಸ್ತರ್ ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಸುಂದರರಾಜ್ ಪಿ, “ನಕ್ಸಲರು ತಮ್ಮ ಕಾರ್ಯಕರ್ತರ ಸಾವು ಮತ್ತು ಗ್ರಾಮಸ್ಥರ ಮೇಲೆ ದೌರ್ಜನ್ಯದ ಬಗ್ಗೆ ಆಧಾರರಹಿತವಾದ ಆರೋಪವನ್ನು ಮಾಡುತ್ತಿದ್ದಾರೆ. ನಿಷೇಧಿತ ಮಾವೋವಾದಿ ಸಂಘಟನೆಯನ್ನು ನಿರ್ಮೂಲನೆ ಮಾಡಲು ನಾವು ಈ ಕಾರ್ಯಾಚರಣೆ ಮುಂದುವರೆಸುತ್ತೇವೆ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X