ರಾಯಚೂರು | ಬ್ಯಾಂಕ್‌ಗಳಲ್ಲಿ ಸಿಸಿಟಿವಿ, ಅಲಾರ್ಮ್ ಅಳವಡಿಸಬೇಕು: ಎಸ್‌ಪಿ ಪುಟ್ಟಮಾದಯ್ಯ

Date:

Advertisements

ರಾಜ್ಯದಲ್ಲಿ ಹಗಲು ದರೋಡೆ ಕಳ್ಳತನ ಪ್ರಯತ್ನಕ್ಕೆ ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ರಾಯಚೂರು ತಾಲೂಕು ವ್ಯಾಪ್ತಿಯ ಬ್ಯಾಂಕ್ ಅಧಿಕಾರಿಗಳೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.

“ಬೀದರ್ ನಗರದಲ್ಲಿ ಎಟಿಎಂನಲ್ಲಿ ಹಣ ತುಂಬಲು ತೆಗದುಕೊಂಡು ಹೋಗುತ್ತಿರುವಾಗ ದರೋಡೆ ಮಾಡಿ ಒಬ್ಬ ಬ್ಯಾಂಕ್ ಸಿಬ್ಬಂದಿಯನ್ನು ಗುಂಡಿಕ್ಕಿ ಕೊಲೆ ಮಾಡಿದ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಬ್ಯಾಂಕ್‌ನಲ್ಲಿ ಹಗಲು ದರೋಡೆ ಪ್ರಕರಣಗಳು ದಾಖಲಾಗಿದ್ದು, ಸಿಬ್ಬಂದಿಗಳು ಎಚ್ಚೆತ್ತುಕೊಳ್ಳಬೇಕು” ಎಂದರು.

“ಬ್ಯಾಂಕ್‌ನಲ್ಲಿ ಇರುವ ಸಿಸಿಟಿವಿಗಳು ಸುವ್ಯಸ್ಥೆಯಲ್ಲಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಬ್ಯಾಂಕ್‌ನಲ್ಲಿರುವ ಸೆಕ್ಯೂರಿಟಿ ಸಿಬ್ಬಂದಿಗಳಿಗೆ ಬ್ಯಾಂಕ್ ಸೆಕ್ಯೂರಿಟಿಯ ಬಗ್ಗೆ ಸರಿಯಾಗಿ ನಿಗಾವಹಿಸುವಂತೆ ಖಡಕ್ ಸೂಚಿಸುವುದು. ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಹತ್ತಿರದ ಠಾಣೆಗೆ, ಸರಹದ್ದಿನ ಠಾಣೆಗೆ ಮಾಹಿತಿ ನೀಡಬೇಕು” ಎಂದು ಹೇಳಿದರು.

Advertisements

“ಬ್ಯಾಂಕ್ ಆವರಣದ ಸುತ್ತಮುತ್ತ ಇರುವ ಏರಿಯಾವನ್ನು ಸೆರೆಹಿಡಿಯುವ ಹಾಗೆ ಒಳ್ಳೆಯ ಗುಣಮಟ್ಟದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಬ್ಯಾಂಕ್‌ನಲ್ಲಿ ಹೆಚ್ಚಿನ ಮೊತ್ತದ ಹಣ, ಚಿನ್ನವನ್ನು ಡ್ರಾ ಮಾಡಿಕೊಂಡು ಹೋಗುವ ಗ್ರಾಹಕರಿಗೆ ಕಳ್ಳರಿಂದ, ಅಪರಿಚಿತರಿಂದ ಜಾಗೃತತೆಯಿಂದ ಇರಲು ತಿಳಿಸಬೇಕು. ಬ್ಯಾಂಕ್‌ನಲ್ಲಿ ಹತ್ತಿರದ ಪೊಲೀಸ್ ಠಾಣೆಯ, ಪೊಲೀಸ್ ಅಧಿಕಾರಿಗಳ ಫೋನ್ ನಂಬರ್‌ಗಳನ್ನು ಬ್ಯಾಂಕ್‌ನಲ್ಲಿ ಕಾಣುವಂತೆ ಹಾಕಬೇಕು” ಎಂದು ಹೇಳಿದರು.

“ಎಟಿಎಂಗಳಲ್ಲಿ ಸಿಸಿಟಿವಿ, ಅಲಾರ್ಮ್‌ ಹಾಗೂ 24ಗಂಟೆಯೂ ಸೆಕ್ಯೂರಿಟಿ ಗಾರ್ಡ್ ವ್ಯವಸ್ಥೆಯನ್ನು ಮಾಡುವುದು. ಒಂದು ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ಬ್ಯಾಂಕ್‌ನಿಂದ ವಿತ್ ಡ್ರಾ ಹಿಂತೆಗೆದುಕೊಳ್ಳುವಾಗ ಮಾಡುವ ಗ್ರಾಹಕರೊಂದಿಗೆ ಅವರ ಸುರಕ್ಷತೆಗಾಗಿ ಜತೆಗೆ ಇನ್ನೊಬ್ಬರನ್ನು ಕರೆದುಕೊಂಡು ಬರುವಂತೆ ಬ್ಯಾಂಕ್ ಸಿಬ್ಬಂದಿಗಳು ತಿಳಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವೆಲ್ಫೇರ್ ಪಾರ್ಟಿ ಮೌಲ್ಯಾಧಾರಿತ ವಿಚಾರಗಳ ಮೇಲೆ ಶ್ರಮಿಸುತ್ತಿದೆ: ತಾಹೇರ್ ಹುಸೇನ್

“ಬ್ಯಾಂಕ್‌ನಲ್ಲಿ ಹಣವಿಡುವ ಭದ್ರತಾ ಕೋಣೆಗೆ ಸಿಸಟಿವಿ ವ್ಯವಸ್ಥೆ ಮಾಡುವುದು. ಪ್ರೈವೇಟ್ ಏಜೆನ್ಸಿಯವರು ಬ್ಯಾಂಕ್‌ನಿಂದ ಹಣವನ್ನು ವಾಹನದಲ್ಲಿ ತೆಗೆದುಕೊಂಡು ಹೋಗುವಾಗ ಸೂಕ್ತ ಭದ್ರತೆ ಬಗ್ಗೆ ದೃಢಪಡಿಸಿಕೊಳ್ಳುವುದು. ಒಂದು ವೇಳೆ ಇಲ್ಲದೇ ಇದ್ದಲ್ಲಿ ಹೆಚ್ಚಿನ ಭದ್ರತೆ ನೇಮಿಸುವುದು. ಬ್ಯಾಂಕ್‌ಗಳ ಭದ್ರತೆಗಾಗಿ ಅಧಿಕಾರಿ/ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವಾಗ ನಿವೃತ್ತ ಸೈನಿಕರು, ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಅದ್ಯತೆ ನೀಡಬೇಕು” ಎಂಬುದು ಸೇರಿದಂತೆ ಇತರೆ ಭದ್ರತಾ ವಿಚಾರಗಳ ಕುರಿತು ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಮುಂಜಾಗೃತಾ ಕ್ರಮಗಳನ್ನು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ, ಡಿವೈಎಸ್‌ಪಿ ಸತ್ಯನಾರಾಯಣರಾವ್ ಸೇರಿದಂತೆ ಇತರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X