ಕೇಂದ್ರ ಫೆ.14ರವರೆಗೆ ಕಾಯಬಾರದು, ರೈತರೊಂದಿಗೆ ಆದಷ್ಟು ಬೇಗ ಮಾತನಾಡಬೇಕು: ಪಂಜಾಬ್ ಸಚಿವ

Date:

Advertisements

ಕೇಂದ್ರ ಸರ್ಕಾರವು ಉತ್ತಮ ಉದ್ದೇಶವನ್ನು ಹೊಂದಿದ್ದರೆ ಫೆಬ್ರವರಿ 14ರವರೆಗೆ ಕಾಯುವ ಬದಲಾಗಿ ಪ್ರತಿಭಟನಾ ನಿರತ ರೈತರೊಂದಿಗೆ ಆದಷ್ಟು ಬೇಗ ಸಭೆ ನಡೆಸಬೇಕು ಎಂದು ಪಂಜಾಬ್ ಕೃಷಿ ಸಚಿವ ಗುರ್ಮೀತ್ ಸಿಂಗ್ ಖುಡಿಯನ್ ಭಾನುವಾರ ಹೇಳಿದ್ದಾರೆ.

ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ಸುಮಾರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಸುಮಾರು 50ಕ್ಕೂ ಅಧಿಕ ದಿನಗಳಿಂದ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇತ್ತೀಚೆಗೆ ಅವರೊಂದಿಗೆ 111 ರೈತರು ಕೂಡಾ ಉಪವಾಸ ಆರಂಭಿಸಿದ್ದಾರೆ.

ಇದನ್ನು ಓದಿದ್ದೀರಾ? ದಲ್ಲೇವಾಲ್ ಉಪವಾಸ – ದೆಹಲಿ ಚಲೋಗೆ ಮಂಡಿಯೂರಿದ ಪ್ರಧಾನಿ ಮೋದಿ; ರೈತರಿಗೆ ಪ್ರಸ್ತಾವನೆ ಸಲ್ಲಿಸಿದ ಕೇಂದ್ರ ಸರ್ಕಾರ

Advertisements

ಈಗಾಗಲೇ ದಲ್ಲೇವಾಲ್ ಸ್ಥಿತಿ ಚಿಂತಾಜನಕವಾಗಿದೆ. ಇತರೆ ರೈತರ ಆರೋಗ್ಯವೂ ಕೂಡಾ ಹದಗೆಡುತ್ತಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ರೈತರ ಜೀವಕ್ಕೆ ಬೆಲೆಯೇ ಇಲ್ಲದಂತೆ ವರ್ತಿಸುತ್ತಿದೆ. ವಿಪಕ್ಷಗಳು ಮತ್ತು ರೈತರ ಒತ್ತಡದ ಬಳಿಕ ಕೊನೆಗೂ ಮಾತುಕತೆಗೆ ಒಪ್ಪಿಕೊಂಡಿದೆ. ಆದರೆ ಫೆಬ್ರವರಿ 14ರಂದು ಮಾತುಕತೆಗೆ ದಿನಾಂಕ ನಿಗದಿ ಮಾಡಿದೆ. ಪ್ರತಿಭಟನಾನಿರತ ರೈತರ ಸ್ಥಿತಿ ಶೋಚನೀಯವಾಗಿದ್ದರೂ ತಕ್ಷಣ ಸ್ಪಂದಿಸದೆ ಸುಮಾರು ಒಂದು ತಿಂಗಳ ನಂತರ ಮಾತುಕತೆಗೆ ಆಹ್ವಾನಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕೇಂದ್ರವು ಫೆಬ್ರವರಿ 14ರಂದು ಚಂಡೀಗಢದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ವನ್ನು ಮಾತುಕತೆಗೆ ಆಹ್ವಾನಿಸಿದೆ.

ಶನಿವಾರ ಕೃಷಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಪ್ರಿಯ ರಂಜನ್ ನೇತೃತ್ವದ ಉನ್ನತ ಮಟ್ಟದ ಕೇಂದ್ರ ನಿಯೋಗವು ಖಾನೌರಿ ಗಡಿಗೆ ಭೇಟಿ ನೀಡಿದ್ದು, ದಲ್ಲೇವಾಲ್ ಮತ್ತು ಇತರೆ ನಾಯಕರುಗಳನ್ನು ಫೆಬ್ರವರಿ 14ರಂದು ಮಾತುಕತೆಗೆ ಆಹ್ವಾನಿಸಿದರು. ಒಂದು ತಿಂಗಳ ನಂತರ ದಿನಾಂಕ ನಿಗದಿಪಡಿಸಿರುವುದಕ್ಕೆ ಪಂಜಾವ್ ಸಚಿವರೂ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಎಂಎಸ್‌ಪಿ | 43ನೇ ದಿನಕ್ಕೆ ಕಾಲಿಟ್ಟ ದಲ್ಲೇವಾಲ್ ಉಪವಾಸ; ರೈತರ ಬಲಿಗೆ ಕಾಯುತ್ತಿದೆಯೇ ಕೇಂದ್ರ?

“ನವೆಂಬರ್ 26 ರಿಂದ ಆಮರಣಾಂತ ಉಪವಾಸ ನಡೆಸುತ್ತಿರುವ ದಲ್ಲೆವಾಲ್ ಅವರ ಆರೋಗ್ಯ ಚಿಂತಾಜನಕವಾಗಿದೆ. ಕೇಂದ್ರ ಸಚಿವಾಲಯವು ಪ್ರತಿಭಟನಾ ನಿರತ ರೈತರೊಂದಿಗೆ ಆದಷ್ಟು ಬೇಗ ಸಭೆ ನಡೆಸಬೇಕು. ಕೇಂದ್ರವು ಉತ್ತಮ ಉದ್ದೇಶದಿಂದ ಸಭೆ ನಡೆಸುವುದಾದರೆ ಒಂದು ಅಥವಾ ಎರಡು ದಿನಗಳಲ್ಲಿ ಮಾತುಕತೆ ನಡೆಸಬೇಕು” ಎಂದು ಹೇಳಿದ್ದಾರೆ.

ಇನ್ನು ಈ ಸಭೆಗೆ ಒಪ್ಪಿದ ಬಳಿಕ ದಲ್ಲೇವಾಲ್ ವೈದ್ಯಕೀಯ ನೆರವು ಪಡೆಯಲು ಒಪ್ಪಿಕೊಂಡಿದ್ದಾರೆ. ಆದರೆ ಆಹಾರ ಇನ್ನೂ ಸೇವಿಸಿಲ್ಲ ಎಂದು ಹೇಳಲಾಗಿದೆ. ನವೆಂಬರ್ 26ರಂದು ಆಮರಣಾಂತ ಉಪವಾಸ ಕುಳಿತಾಗಿನಿಂದ 70 ವರ್ಷದ ದಲ್ಲೇವಾಲ್ ಯಾವುದೇ ವೈದ್ಯಕೀಯ ನೆರವು ಪಡೆಯಲು ನಿರಾಕರಿಸಿದ್ದರು. ರೈತರೊಂದಿಗೆ ಮಾತುಕತೆಗೆ ದಿನಾಂಕ ನಿಗದಿಯಾದ ಬಳಿಕ ಔಷಧಿಯನ್ನು ಡ್ರಿಪ್ ಮೂಲಕ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X