ಗದಗ | ಜಿಲ್ಲಾ ಸಾಹಿತ್ಯ ಸಮ್ಮೇಳನ ರಾಜಕೀಯ ಸುಮಾವೇಶ ಆಗದಿರಲಿ: ಎಸ್ ಎಫ್ ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ್

Date:

Advertisements

“ಗಜೇಂದ್ರಗಡ ಪಟ್ಟಣದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವತ್ತಿರುವ ೧೦ನೇ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ನಡೆಯುತ್ತಿದ್ದು, ಸಮ್ಮೇಳನದ ಆಮಂತ್ರಣಿಕೆಯಲ್ಲಿ ಸಾಹಿತಿಗಳು, ಚಿಂತಕರು, ಕಲಾವಿದರು, ಹೋರಾಟಗಾರರು, ವಿದ್ವಾಂಸರು, ತುಂಬಿರದೆ ಕೇವಲ ರಾಜಕೀಯ ನಾಯಕರುಗಳೇ ತುಂಬಿದೆ. ಜಿಲ್ಲಾ ಸಾಹಿತ್ಯ ಸಮ್ಮೇಳನ ರಾಜಕೀಯ ಸುಮಾವೇಶ ಆಗದಿರಲಿ ” ಎಂದು ಎಸ್ ಎಫ್ ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ್ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಎಸ್ ಎಫ್ ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ್ ಈದಿನ.ಕಾಮ್ ಪ್ರತಿಕ್ರಿಯೆ ನೀಡಿದ್ದು, “೧೦ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೋ ಚಂದ್ರಶೇಖರ ವಸ್ತ್ರದ ಅವರ ಸರ್ವಾಧ್ಯಕ್ಷತೆಯಲ್ಲಿ ಒಳ್ಳೆಯ ಗೋಷ್ಠಿಗಳನ್ನು ಆಯೋಜಿಸಿ ಜನರ ಅಭಿವೃದ್ಧಿ, ಕನ್ನಡ ಅಭಿವೃದ್ಧಿಯ ಕುರಿತು  ಚರ್ಚೆ ನಡೆಯಬೇಕಾಗಿತ್ತು. ಆದರೆ ಎಲ್ಲಾ ಗೋಷ್ಠಿಗಳಲ್ಲಿ ಮಹಿಳೆ, ಮಕ್ಕಳ, ಯುವಜನತೆ, ಅಭಿವೃದ್ಧಿ, ಕನ್ನಡದ ಅಸ್ಮೀತೆ ಮತ್ತು ಸ್ಥಳೀಯ ಜನತೆಯ ಸಮಸ್ಯೆಗಳನ್ನು ಚರ್ಚಿಸದೇ ಕೇವಲ ವಿಜೃಂಭಣೆಯಿಂದ  ನಗರವನ್ನು ಅಲಂಕರಿಸಿ ರಾಜಕೀಯ ನಾಯಕರ ಬ್ಯಾನರ್ಗಳು ರಾರಾಜಿಸಲು ಸೀಮಿತವಾಗಿರುವುದು ಸರಿಯಲ್ಲ.” ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?

Advertisements

“ಈಗಲೂ ಕಾಲ ಮಿಂಚಿಲ್ಲ ಜನತೆಯ ಕನ್ನಡದ ಅಸ್ಮೀತೆಯ ಪ್ರಶ್ನೆಗಳ ಕುರಿತು , ಮಕ್ಕಳ, ಮಹಿಳೆಯರು, ಕನ್ನಡ ಶಾಲೆಗಳ ಉಳಿವಿನ ಕುರಿತು ಗೋಷ್ಠಿಗಳನ್ನು ಆಯೋಜಿಸಿ ಮತ್ತು ಜಿಲ್ಲೆಯ ಹಿರಿಯ ಸಾಹಿತಿಗಳನ್ನು, ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರನ್ನು ಹಾಗೂ ಹೋರಾಟಗಾರರನ್ನು, ಕಲಾವಿದರನ್ನು, ಚಿಂತಕರನ್ನು, ಸಾಹಿತ್ಯಾಭಿಮಾನಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಹಿತ್ಯ ಸಮ್ಮೇಳನ ನಡೆಸಬೇಕು. ಜನರ ಪರವಾದ ನಿಲುವು ನಿರ್ಣಯಗಳನ್ನು ಜಾರಿಗೆ ಮುಂದಾಗಬೇಕು. ಸಾಹಿತ್ಯ ಸಮ್ಮೇಳನವು ಜನರ ನುಡಿಯಾಗಬೇಕೇ ವಿನಹ ರಾಜಕೀಯ ಸುಮಾವೇಶ ಆಗದಿರಲಿ” ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ ವಿದ್ಯಾರ್ಥಿ ಸಂಘಟನೆಯು ಒತ್ತಾಯಿಸುತ್ತದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X