ಬಳ್ಳಾರಿ | ಕೂಡ್ಲಿಗಿಯನ್ನು ಮಾದರಿ ಕ್ಷೇತ್ರವನ್ನಾಗಿಸುವೆ; ಶಾಸಕ ಶ್ರೀನಿವಾಸ್ ಎನ್ ಟಿ ಭರವಸೆ

Date:

Advertisements

ಕೊಟ್ಟೂರು ತಾಲೂಕು ವ್ಯಾಪ್ತಿಯಲ್ಲಿರುವ ಕೂಡ್ಲಿಗಿ ವಿಧಾನಸಭಾ ಕ್ಷೇತ್ರವನ್ನು ಸಕಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಮಾದರಿ ಕ್ಷೇತ್ರವನ್ನಾಗಿ ಮಾಡುವೆ ಎಂದು ಕ್ಷೇತ್ರದ ಶಾಸಕ ಡಾ ಶ್ರೀನಿವಾಸ್‌ ಎನ್ ಟಿ ಭರವಸೆ ನೀಡಿದರು.

ತಾಲೂಕಿನ ಉಜ್ಜಯಿನಿ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ, ತೂಲಹಳ್ಳಿ ಗ್ರಾಮದಲ್ಲಿ ಆರೋಗ್ಯ ಕೇಂದ್ರ ಕಟ್ಟಡ, ರಸ್ತೆ ಅಭಿವೃದ್ಧಿ ಹಾಗೂ ಡಾಂಬರೀಕರಣ, ಹುಣಸೆಕಟ್ಟೆ ಗ್ರಾಮದಲ್ಲಿ ಶಾಲಾ ಕೊಠಡಿ, ಹಾರಕನಾಳು, ನಡುಮಾವಿನಹಳ್ಳಿ ಗ್ರಾಮಗಳಲ್ಲಿ ರಸ್ತೆ ಕಾಮಗಾರಿ ಸೇರಿದಂತೆ ಅಂದಾಜು ₹10 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ʼಕ್ಷೇತ್ರ ವ್ಯಾಪ್ತಿಯಲ್ಲಿನ ಹಳ್ಳಿಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಅಂತಹ ಹಳ್ಳಿಗಳನ್ನು ಗುರುತಿಸಿ ಅಗತ್ಯ ಇರುವೆಡೆ ಮೂಲಭೂತ ಸೌಕರ್ಯ ಕಲ್ಪಿಸಿ ಕ್ಷೇತ್ರವನ್ನು ರಾಜ್ಯದ ಮಾದರಿ ಕ್ಷೇತ್ರವನ್ನಾಗಿಸಲು ಶ್ರಮಿಸುತ್ತೇನೆ. ಕ್ಷೇತ್ರದ ಜನರ ಆರೋಗ್ಯ, ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತೇನೆʼ ಎಂದರು.

ʼಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೆ ಖುದ್ದು ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ತಿಳಿಯುವುದರ ಜೊತೆಗೆ ಸಾರ್ವಜನಿಕರಿಂದಲೂ ಕುಂದು ಕೊರತೆ ಆಲಿಸುತ್ತಿರುವೆ. ಜನತೆ ಸಲ್ಲಿಸುವ ಮನವಿಗಳನ್ನು ಪರಿಶೀಲಿಸಿ ಆಯಾ ಇಲಾಖೆ ಮೂಲಕ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ.  ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದ್ದು ಕ್ಷೇತ್ರದಾದ್ಯಂತ 50 ಸರ್ಕಾರಿ ಶಾಲೆಗಳಿಗೆ ನೂರು ಕೊಠಡಿಗಳ ದುರಸ್ತಿ ಹಾಗೂ ಉನ್ನತೀಕರಣಗೊಳಿಸಲು ಮುಂದಾಗಿರುವೆʼ ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ₹6 ಕೋಟಿ ಮೌಲ್ಯದ 24 ಸಾವಿರ ಕ್ವಿಂಟಾಲ್ ಜೋಳದಲ್ಲಿ ಹುಳು ಪತ್ತೆ; ನ್ಯಾಯಬೆಲೆ ಅಂಗಡಿಗಳಿಗೆ ಪೂರೈಕೆ

ಈ ವೇಳೆ ಕೂಡ್ಲಿಗಿ ತಹಸೀಲ್ದಾರ್ ಜಿ ಕೆ ಅಮರೇಶ್, ಮುಖಂಡರಾದ ಜಿ. ಗುರುಸಿದ್ದನಗೌಡ, ಸಾವಜ್ಜಿ ರಾಜೇಂದ್ರ ಪ್ರಸಾದ, ಕೆ ಎಂ ಶಶಿಧರ್, ವಿವಿಧ ಇಲಾಖಾಧಿಕಾರಿಗಳು, ಗ್ರಾಮ ಪಂಚಾಯ್ತಿ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X