ಗದಗ | ಕನ್ನಡ ಶಾಲೆಗಳನ್ನು ಉಳಿಸಲು ನಾವೆಲ್ಲರೂ ಬದ್ಧರಾಗಬೇಕು: ಸಮ್ಮೇಳನಾಧ್ಯಕ್ಷ ಪ್ರೊ. ಚಂದ್ರಶೇಖರ ವಸ್ತ್ರದ

Date:

Advertisements

“ಸರಕಾರ ಕನ್ನಡ ಅನುದಾನಿತ ಶಾಲೆಗಳಿಗೆ ಅನುದಾನ ಕೊಡದ ಕಾರಣ ಕನ್ನಡ ಶಾಲೆಗಳು, ಕನ್ನಡ ಭಾಷೆ ಕ್ಷೀಣವಾಗುತ್ತಿದೆ. ಕನ್ನಡ ಶಾಲೆಗಳನ್ನು ಉಳಿಸಲು ನಾವೆಲ್ಲರೂ ಬದ್ಧರಾಗಬೇಕು” 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ. ಚಂದ್ರಶೇಖರ ವಸ್ತ್ರದ ಒತ್ತಾಯಿಸಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದ 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷಿಯ ಭಾಷಣದಲ್ಲಿ ಮಾತನಾಡಿದರು.

“ಮಾತೃ ಭಾಷೆಯಾದ ಕನ್ನಡ ಭಾಷೆ ನಶಿಸುತ್ತಿದೆ. ಕಾಸರಗೋಡು ಪ್ರದೇಶವು ಕೇರಳ ಪಾಲಾಯಿತು. ಬೆಳಗಾವಿ ಬೀದರ್ ನಲ್ಲಿ ಮರಾಠಿ ಭಾಷಿಕರ ಸಂಖ್ಯೆ ಹೆಚ್ಚತ್ತಿದೆ. ರಾಯಚೂರು ಭಾಗವು ತೆಲುಗು ಭಾಷಿಕರ ಪಾಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

ಸಿ.ಎನ್. ಪಾಟೀಲ ರಚಿಸಿದ ತಾಯಿ ಭುವನೇಶ್ವರಿ ಭಾವಚಿತ್ರವೇ ಕನ್ನಡ ತಾಯಿಯ ಅಧಿಕೃತ ಭಾವಚಿತ್ರವಾಗಬೇಕು. ಈ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಲಿ. ಕನ್ನಡ ಸಾಹಿತ್ಯ ಸಮ್ಮೇಳನಗಳು ಸೀಮಾತೀತ ಅಂತಃಕರಣ ಉಂಟುಮಾಡುತ್ತವೆ. ಇಂಥ ಅಕ್ಷರ ಗೋಷ್ಠಿಗಳು ನಿರಂತರವಾಗಿ ಮಾಡಬೇಕು. ಅದೇ ರೀತಿ ರಾಜ್ಯದಲ್ಲಿ 1965ರಿಂದ ಸರಕಾರ ಕನ್ನಡ ಶಾಲೆ ಆರಂಭಿಸಲಾಗಿದೆ. ಆದರೆ ಸರಕಾರ ಕನ್ನಡ ಅನುದಾನಿತ ಶಾಲೆಗಳಿಗೆ ಅನುದಾನ ಕೊಡದ ಕಾರಣ ಕನ್ನಡ ಶಾಲೆಗಳು, ಕನ್ನಡ ಭಾಷೆ ಕ್ಷೀಣವಾಗುತ್ತಿದೆ” ಎಂದರು.

“ಆಧುನಿಕ ಕವಿ ಚನ್ನವೀರ ಕಣವಿ ನಿಧನರಾಗಿ ವರ್ಷಗಳೆ ಗತಿಸಿದರೂ ಅವರ ಕುರಿತಾದ ಯಾವುದೇ ಕಾರ್ಯಕ್ರಮ ಗದಗದಲ್ಲಿ ನಡೆದಿಲ್ಲ. ಎಲ್ಲಿಯ ವರೆಗೆ ಕನ್ನಡ ಸಾಹಿತ್ಯ ಶ್ರೇಷ್ಠರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯುವುದಿಲ್ಲವೋ ಅಲ್ಲಿಯ ವರೆಗೆ ಹುಯಿಲಗೋಳ ನಾರಾಯಣರು ಬರೆದ ಉದಯವಾಗಲಿ ಚೆಲುವ ಕನ್ನಡ ನಾಡು ಗೀತೆಯನ್ನೇ ಹಾಡಬೇಕು” ಎಂದರು.

‘ಪಕ್ಕದ ಧಾರವಾಡ ಜಿಲ್ಲೆಯಲ್ಲಿ ಒಂಬತ್ತು ಪ್ರತಿಷ್ಠಾನಗಳಿವೆ. ನಮ್ಮಲ್ಲಿ ಒಂದು ಕೂಡ ಇಲ್ಲ. ರನ್ನ ಪ್ರತಿಷ್ಠಾನ ಅದ್ಭುತ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿ ಚಾಮರಸನ ಬಗ್ಗೆ ಸಂಶೋಧನೆ, ಚೆನ್ನವೀರ ಕಣವಿ, ಅಂದಾನಪ್ಪ ದೊಡ್ಡಮೇಟಿ ಅವರ ಸ್ಮಾರಕ ಸ್ಥಾಪನೆ ಆಗಬೇಕಿದೆ. ಎಂದರು.

ನಮ್ಮಲ್ಲಿ ಚಾಮರಸನನ್ನು ಮುಟ್ಟುವರರಿಲ್ಲ. ಪ್ರಭುಲಿಂಗಲೀಲೆ ಧಾರ್ಮಿಕ ಕಾವ್ಯ ಅಲ್ಲ. ಯಾವುದೇ ದೇಶದವರು ಅದನ್ನು ಓದಿದರೂ ತಮ್ಮ ಬದುಕನ್ನು ಎತ್ತರಿಸಿಕೊಳ್ಳಬಹುದು. ಪ್ರತಿವರ್ಷ ಒಂದು ದಿನವಾದರೂ ವಿಚಾರ ಸಂಕಿರಣ ನಡೆಸಬೇಕು’ ಎಂದು ಪ್ರೊ. ಚಂದ್ರಶೇಖರ ವಸ್ತ್ರದ ಆಶಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X