ಚಿಕ್ಕಮಗಳೂರು | ಮಗಳ ಸಂಭ್ರಮದ ಮಧ್ಯೆಯೇ ಅಪ್ಪ ಮೃತ್ಯು: ವಿಷಯ ಮುಚ್ಚಿಟ್ಟು ಮದುವೆ ಮಾಡಿಸಿದ ಸಂಬಂಧಿಕರು!

Date:

Advertisements

ಅಪಘಾತದಲ್ಲಿ ತಂದೆ ಮೃತಪಟ್ಟಿದ್ದು, ವಿಷಯವೇ ಗೊತ್ತಿಲ್ಲದ ಮಗಳು ಹಸೆಮಣೆ ಏರಿದ ಮನಕಲಕುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ.

ಭಾನುವಾರ ಹಾಗೂ ಸೋಮವಾರ ತರೀಕೆರೆ ಪಟ್ಟಣದ ನಾಗಪ್ಪ ಕಾಲೋನಿ ನಿವಾಸಿ ಚಂದ್ರು ಅವರ ಮಗಳ ಮದುವೆ ನಿಶ್ಚಯವಾಗಿತ್ತು. ಆದರೆ ಆಪ್ತಮಿತ್ರನಿಗೆ ಲಗ್ನಪತ್ರಿಕೆ ಕೊಡಲು ಹೋದ ತಂದೆ ಮಾರ್ಗಮಧ್ಯೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಂಬಂಧಿಕರು ತಂದೆಯ ಸಾವಿನ ಸುದ್ದಿಯನ್ನು ಮುಚ್ಚಿಟ್ಟು ಮದುವೆ ಕಾರ್ಯ ಮಾಡಿ ಮುಗಿಸಿದ್ದಾರೆ.

ಚಂದ್ರು ಅವರು ತಮ್ಮ ಕೊನೆಯ ಮಗಳ ಮದುವೆ ಎಂದು ಮದುವೆ ಕಾರ್ಯವನ್ನು ಅದ್ಧೂರಿಯಾಗಿ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಆದರೆ, ಮಗಳ ಮದುವೆ ಆರತಕ್ಷತೆ ದಿನ ಆತ್ಮೀಯ ಸ್ನೇಹಿತನಿಗೆ ಲಗ್ನ ಪತ್ರಿಕೆ ಕೊಟ್ಟಿಲ್ಲವೆಂದು ತರೀಕೆರೆ ತಾಲೂಕು ಹುಲಿ ತಿಮ್ಮಾಪುರಕ್ಕೆ ಹೋಗಿದ್ದರು. ಲಗ್ನಪತ್ರಿಕೆ ನೀಡಿ ಮನೆಗೆ ಬರುವ ವೇಳೆ ಮಾರ್ಗ ಮಧ್ಯೆ ಬೈಕ್ ಅಪಘಾತವಾಗಿದೆ.

Advertisements
tarikere 1

ಅಪಘಾತದಿಂದ ತೀವ್ರ ಗಾಯಗೊಂಡಿದ್ದ ಚಂದ್ರು ಅವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಚಂದ್ರು ಭಾನುವಾರ ಮಧ್ಯಾಹ್ನವೇ ಮೃತಪಟ್ಟಿದ್ದರು.

ಚಂದ್ರು ಮೃತಪಟ್ಟಿರುವ ವಿಷಯ ಮನೆಯವರಿಗೆ ತಿಳಿಸಿದರೆ ಮದುವೆ ಕಾರ್ಯ ನಿಲ್ಲುತ್ತದೆ ಎಂದು ಕುಟುಂಬಸ್ಥರು ಚಂದ್ರು ಪತ್ನಿ ಮತ್ತು ಮಗಳು ದೀಕ್ಷಾ ಅವರಿಗೆ ತಿಳಿಸಿಲ್ಲ. ‘ಅಪಘಾತವಾಗಿ ಆಸ್ಪತ್ರೆಯಲ್ಲಿದ್ದಾರೆ, ಜೀವಕ್ಕೇನೂ ತೊಂದರೆ ಇಲ್ಲ, ಚೆನ್ನಾಗಿದ್ದಾನೆ’ ಎಂದು ಹೇಳಿ ಭಾನುವಾರ ಆರತಕ್ಷತೆ ಮುಗಿಸಿ, ಸೋಮವಾರ ನಿಗದಿಯಾಗಿದ್ದ ಮುಹೂರ್ತದಲ್ಲಿ ಮದುವೆ ಕಾರ್ಯವನ್ನೂ ಮಾಡಿ ಮುಗಿಸಿದ್ದಾರೆ.

ಮದುವೆ ಕಾರ್ಯ ಮುಗಿಯುತ್ತಿದ್ದಂತೆ ಕುಟುಂಬಸ್ಥರು ಚಂದ್ರು ನಿಧನವಾಗಿರುವ ಸುದ್ದಿಯನ್ನು ಪತ್ನಿ ಹಾಗೂ ಮದುಮಗಳು ದೀಕ್ಷಾಗೆ ತಿಳಿಸಿದ್ದಾರೆ.

nnn

ಈ ವೇಳೆ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಬೀರೂರು ಪಟ್ಟಣದ ತರಳಬಾಳು ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯ ಮುಗಿಸಿಕೊಂಡು ಮನೆಗೆ ಬರುವ ವೇಳೆಗೆ ತಂದೆಯ ಮೃತದೇಹ ಕೂಡ ಮನೆಗೆ ಬಂದಿತ್ತು. ಈ ದೃಶ್ಯವನ್ನು ಕಂಡ ನೆರೆದಿದ್ದ ಸ್ಥಳೀಯ ಜನರು ಕಣ್ಣೀರು ಹಾಕಿದ್ದಾರೆ. ಇಡೀ ಕುಟುಂಬವೇ ಶೋಕ ಸಾಗರದಲ್ಲಿ ಮುಳುಗಿತ್ತು.

ಇದನ್ನು ಓದಿದ್ದೀರಾ? ಮಂಗಳೂರು | ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮೃತ ಚಂದ್ರು ಅವರಿಗೆ ಮೂರು ಜನ ಹೆಣ್ಣುಮಕ್ಕಳು. ಮೊದಲ ಮಗಳ ಮದುವೆ ವೇಳೆ ಕೋವಿಡ್‌ನಿಂದಾಗಿ ಸರಳವಾಗಿ ಮದುವೆ ಮಾಡಿದ್ದರು. ಹಾಗಾಗಿ ಕೊನೆಯ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂದು ಶಕ್ತಿಮೀರಿ ಸಿದ್ಧತೆಗಳನ್ನು ಮಾಡಿ ಕೊಂಡಿದ್ದರು. ಆದರೆ, ವಿಧಿ ಆಟವೇ ಬೇರೆಯಾಗಿತ್ತು. ಮಗಳನ್ನು ಸಂತೋಷವಾಗಿ ಧಾರೆ ಎರೆದುಕೊಡಬೇಕಾದ ಅಪ್ಪ ಮಗಳ ಕೊನೆಯ ಕ್ಷಣದಲ್ಲಿ ಹಾಗೂ ಮದುವೆಗೂ ಮುಂಚೆಯೇ ಸಾವಿನ ಮನೆ ಸೇರುವಂತಾಗಿದ್ದು ವಿಧಿಯಾಟವೇ ಸರಿ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X