ಅವಧೇಶ್‌ ರಾಯ್‌ ಹತ್ಯೆ ಪ್ರಕರಣ | ಮುಖ್ತಾರ್‌ ಅನ್ಸಾರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ವಾರಾಣಸಿ ಕೋರ್ಟ್‌

Date:

Advertisements
  • 1991ರಲ್ಲಿ ಅವಧೇಶ್ ರಾಯ್‌ ಹತ್ಯೆ ಮಾಡಿದ್ದ ಮುಖ್ತಾರ್‌ ಅನ್ಸಾರಿ
  • ಅಜಯ್ ರಾಯ್ ಅವರ ನಿವಾಸದ ಎದುರು ಅವಧೇಶ್‌ ರಾಯ್‌ ಹತ್ಯೆ

ಕಾಂಗ್ರೆಸ್ ನಾಯಕ ಅವಧೇಶ್ ರಾಯ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಶಾಸಕ, ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿ ದೋಷಿ ತೀರ್ಮಾನಿಸಿರುವ ವಾರಾಣಸಿ ಸಂಸದರು ಶಾಸಕರ ನ್ಯಾಯಾಲಯ ಸೋಮವಾರ (ಜೂನ್ 5) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಮೂವತ್ತು ವರ್ಷಗಳಿಂದ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿತ್ತು.

1991ರ ಆಗಸ್ಟ್ 3 ರಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಅಜಯ್ ರಾಯ್ ಅವರ ಸಹೋದರ ಅವಧೇಶ್ ರಾಯ್ ಅವರನ್ನು ವಾರಾಣಸಿಯ ಅವರ ಲಾಹುರಬೀರ್ ನಿವಾಸದ ಎದುರೇ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

Advertisements

ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮುಖ್ತಾರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದರು.

“ಮುಖ್ತಾರ್ ಅನ್ಸಾರಿ ಅವರನ್ನು 1991ರ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ದೋಷಿ ಎಂದು ತೀರ್ಮಾನಿಸಲಾಗಿದೆ. ದಿನದ ಬಳಿಕ ನ್ಯಾಯಾಲಯ ಪ್ರಕರಣದ ತೀರ್ಪು ಪ್ರಕಟಿಸಲಿದೆ” ಎಂದು ವಾರಾಣಸಿಯಲ್ಲಿ ವಕೀಲರೊಬ್ಬರು ಸುದ್ದಿಗಾರರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗೃಹ ಸಚಿವ ಅಮಿತ್ ಶಾ ಭೇಟಿಯಾದ ಕುಸ್ತಿಪಟುಗಳು | ತ್ವರಿತ ಕ್ರಮ, ನಿಷ್ಪಕ್ಷಪಾತ ತನಿಖೆಗೆ ಆಗ್ರಹ

“ಹಲವು ವರ್ಷಗಳ ನಮ್ಮ ಕಾಯುವಿಕೆ ಇಂದು ಕೊನೆಗೊಂಡಿದೆ. ನ್ಯಾಯಕ್ಕಾಗಿ ನಾನು, ನನ್ನ ತಂದೆ ತಾಯಿ, ಅವಧೇಶನ ಮಗಳು ಮತ್ತು ಇಡೀ ಕುಟುಂಬ ತಾಳ್ಮೆಯಿಂದ ಕಾಯುತ್ತಿದ್ದೆವು. ಸರ್ಕಾರಗಳು ಬಂದವು, ಹೋದವು, ಆದರೆ ಮುಖ್ತಾರ್ ಗೆ ಶಿಕ್ಷೆಯಾಗಲಿಲ್ಲ” ಎಂದು ಅಜಯ್ ರಾಯ್ ಹೇಳಿದರು.

“ಆದರೆ ನಾವು ಧೃತಿಗೆಡಲಿಲ್ಲ. ನಮ್ಮ ವಕೀಲರ ಸತತ ಪ್ರಯತ್ನದಿಂದ ಇಂದು ನನ್ನ ಸಹೋದರನ ಹತ್ಯೆ ಪ್ರಕರಣದಲ್ಲಿ ಮುಖ್ತಾರ್ ಅನ್ಸಾರಿ ಆರೋಪಿಯನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿರುವುದು ಸಂತಸವಾಗಿದೆ” ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಮುಖ್ತಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಅವಧೇಶ್‌ ರಾಯ್‌ ಕುಟುಂಬ ಸ್ವಾಗತಿಸಿದೆ. “ಸತ್ಯ ಒಂದಲ್ಲ ಒಂದು ದಿನ ಬೆಳಕಿಗೆ ಬರಬೇಕು. ಈಗ ನಮಗೆ ನ್ಯಾಯ ದೊರಕಿದೆ. ಅಪರಾಧಿಗೆ ಶಿಕ್ಷೆ ದೊರೆತಿದೆ ಇದಕ್ಕೆ ನ್ಯಾಯಾಲಯ ಮತ್ತು ನಮ್ಮ ಪರವಾಗಿ ಹೋರಾಡಿದ ವಕೀಲರಿಗೆ ಧನ್ಯವಾದ” ಎಂದು ಅಜಯ್‌ ರಾಯ್‌ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X