ನೂತನ ದಾಖಲೆ ಹೊಸ್ತಿಲಿನಲ್ಲಿ ಸಿಎಂ ಸಿದ್ದರಾಮಯ್ಯ; ಜುಲೈ 3ರಿಂದ ಬಜೆಟ್ ಅಧಿವೇಶನ

Date:

Advertisements
  • ಜುಲೈ 3ರಿಂದ ಕಾಂಗ್ರೆಸ್ ಸರ್ಕಾರದ ಬಜೆಟ್ ಅಧಿವೇಶನ
  • ಮೊದಲ ದಿನ ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರ ಭಾಷಣ

ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಜುಲೈ 3ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದ ಐದನೇ ದಿನ, ಅಂದರೆ ಜುಲೈ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

ಈ ಬಜೆಟ್ ಮಂಡನೆ ಮೂಲಕ ಸಿಎಂ ಸಿದ್ದರಾಮಯ್ಯ ರಾಜ್ಯದ ಪರ ಅತೀ ಹೆಚ್ಚು ಬಜೆಟ್ ಮಂಡಿಸಿದ ಹಣಕಾಸು ಸಚಿವರಾಗಲಿದ್ದಾರೆ.

ಇಂದು ದಾವಣಗೆರೆಯಲ್ಲಿ ಮಾಧ್ಯಮಗಳಿಗೆ ಈ ವಿಚಾರ ತಿಳಿಸಿದ ಸಿಎಂ ಸಿದ್ದರಾಮಯ್ಯ ಜುಲೈ3ರಿಂದ ಸದನ ಆರಂಭವಾಗಲಿದೆ. ಮೊದಲ ದಿನ ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಮೂರು ದಿನಗಳ ಕಾಲ ಇದರ ಮೇಲೆ ಚರ್ಚೆ ನಡೆಯಲಿದೆ. ಇದಾದ ಬಳಿಕ ನಾನು ಬಜೆಟ್ ಮಂಡನೆ ಮಾಡಲಿದ್ದೇನೆ ಎಂದು ಹೇಳಿದರು.

Advertisements

ರಾಜ್ಯವನ್ನು ಅಭಿವೃದ್ದಿ ಹಳಿಗೆ ತೆಗೆದುಕೊಂಡು ಹೋಗುವ ಹಾಗೂ ಜನಪ್ರಗತಿಶೀಲ ಬಜೆಟ್ ಮಂಡನೆ ಮಾಡುವ ಉದ್ದೇಶವನ್ನು ನಮ್ಮ ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?:ಬಿಜೆಪಿ ವಿದ್ಯುತ್ ದುರುಪಯೋಗ ಮಾಡುವಂತೆ ಕುಮ್ಮಕ್ಕು ಕೊಡುತ್ತಿದೆ, ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲವೆಂಬ ಭರವಸೆ ಇದೆ : ಸಿಎಂ

ಇದೇ ವೇಳೆ ಪಶು ಸಂಗೋಪನಾ ಸಚಿವ ವೆಂಕಟೇಶ್ ನೀಡಿದ್ದ ಗೋ ವಧೆ ವಿಚಾರದ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ, ನಮಗೂ ದನಕರುಗಳ ಮೇಲೆ ಗೌರವವಿದೆ. ಆದರೆ ಹನ್ನೆರಡು ವರ್ಷ ಮೀರಿದ ರಾಸುಗಳನ್ನು ವಧೆ ಮಾಡಲು ಅವಕಾಶವನ್ನು ಕಾನೂನು ಕಲ್ಪಿಸಿದೆ.

1964ರ ಕಾಯ್ದೆ ಉಲ್ಲೇಖ ಮಾಡದೆ ವೆಂಕಟೇಶ್ ಹಾಗೆಯೇ ಮಾಹಿತಿ ಕೊಟ್ಟಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿ ಗೋ ವಧೆ ಕಾನೂನು ಹಿಂಪಡೆಯುವುದರ ಬಗ್ಗೆ ಚರ್ಚಿಸುವುದಾಗಿ ಅವರು ಸ್ಪಷ್ಟೀಕರಣ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X