ವಿಜಯಪುರ | ಕಾರ್ಮಿಕರ ಹಲ್ಲೆ ಪ್ರಕರಣ; ಶಿಸ್ತು ಕ್ರಮಕ್ಕೆ ಮನವಿ

Date:

Advertisements

ವಿಜಯಪುರದ ಸಿಂದಗಿ ರಸ್ತೆಯಲ್ಲಿರುವ ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿ, ಅಪರಾಧಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗೆ ಪ್ರಗತಿಪರ ಸಂಘಟನೆಗಳ ವೇದಿಕೆ ಮನವಿ ಸಲ್ಲಿಸಿತು.

ಹೊಟ್ಟೆಪಾಡಿಗಾಗಿ ಬೇರೆ ಕಡೆಗಳಿಂದ ಕೆಲಸಕ್ಕೆ ಬಂದ ಅಮಾಯಕ ಕಾರ್ಮಿಕರಿಗೆ ಮನಬಂದಂತೆ ಥಳಿಸಿದ ಪ್ರಕರಣ ಇಡೀ ಮಾನವ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಶ್ರಮಿಕ ವರ್ಗದ ಮೇಲೆ ಮಾಲೀಕರ ನಿರಂತರ ದೌರ್ಜನ್ಯ ಹೆಚ್ಚತ್ತಲೇ ಇದೆ. ಈಗಾಗಲೇ ಜಿಲ್ಲಾ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸಿರುವುದು ಸ್ವಾಗತಾರ್ಹ. ಮುಂದುವರೆದು ಅಪರಾಧಿಗಳನ್ನು ಸೂಕ್ತ ಕಾನೂನು ಕ್ರಮಕ್ಕೊಳಪಡಿಸಬೇಕು. ಶೋಚನೀಯ ಸ್ಥಿತಿಯಲ್ಲಿರುವ ಕಾರ್ಮಿಕರಿಗೆ ಭದ್ರತೆ ಒದಗಿಸಬೇಕು ಎಂದು ಮನವಿ ವೇದಿಕೆ ಮುಖಂಡರು ಒತ್ತಾಯಿಸಿದರು.

ಆರೋಪಿಗಳ ಪರವಾಗಿ ಯಾರು ಎಷ್ಟೇ ಪ್ರಭಾವ ಬೀರಿದರೂ ಪರಿಗಣಿಸದೆ ಎಲ್ಲ ಆರೋಪಿಗಳಿಗೆ ನಿರ್ದಯನೀಯ ಶಿಕ್ಷೆ ನೀಡಬೇಕು. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸಿದಂತೆ ಜಿಲ್ಲಾ ಕಾರ್ಮಿಕ ಇಲಾಖೆ ಎಚ್ಚರಿಕೆ ವಹಿಸಬೇಕೆಂದು ಪ್ರತಿಭಟನೆ ಮೂಲಕ ವೇದಿಕೆ ಆಗ್ರಹಿಸಿತು.

Advertisements

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಪಠ್ಯದ ಜೊತೆಗೆ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಅವಶ್ಯಕ | ಬಿ ಜಿ ಮೂಲಿಮನಿ

ಪ್ರತಿಭಟನಾ ಸಭೆಯಲ್ಲಿ ವೇದಿಕೆ ಮುಖಂಡ ಸಿ ಎ ಘಂಟೆಪ್ಪಗೊಳ್, ಪ್ರಭುಗೌಡ ಪಾಟಿಲ್, ಶ್ರೀನಾಥ ಪೂಜಾರಿ, ಸಿದ್ದಲಿಂಗ ಬಾಗೇವಾಡಿ, ಹಫೀಜ್ ಸಿದ್ದಿಕಿ, ಸಂಗಮೇಶ ಸಗರ, ಬಾಳು ಜೆವೂರ, ಚೆನ್ನು ಕಟ್ಟಿಮನಿ, ಕರಿಯಪ್ಪ ಗುಡಿಮನಿ, ಶಿವಬಾಳಮ್ಮ ಕೊಂಡಗೂಳಿ, ಅಕ್ಷಯ ಅಜಮನಿ, ರಮೇಶಗೌಡ ಪಾಟೀಲ, ಜಕರಾಯ ಪೂಜಾರಿ, ಮಾದೇವಪ್ಪ ತೇಲಿ, ಎಮ್ ಎಮ್ ಮಾಶಳಕರ್, ಮಹಮದ್ ಇದಾಯತ್, ರೇಷ್ಮಾ ಮುಂತಾದವರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X