ಅಂಬಾನಿ ಒಡೆತನದ ವಂತಾರಾಗೆ 21 ಆನೆಗಳು ರವಾನೆ; ಪ್ರಾಣಿ ಹಕ್ಕು ಹೋರಾಟಗಾರರ ಆಕ್ರೋಶ

Date:

Advertisements

ಅರುಣಾಚಲ ಪ್ರದೇಶದ ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿದ 12 ಆನೆಗಳನ್ನು ಗುಜರಾತ್‌ನಲ್ಲಿರುವ ಅಂಬಾನಿ ಒಡೆತನದ ವಂತಾರಾ ಪ್ರಾಣಿ ಸಂರಕ್ಷಣೆ ಮತ್ತು ಆರೈಕೆ ಕೇಂದ್ರಕ್ಕೆ ರವಾನಿಸಲಾಗಿದೆ. ಆನೆಗಳನ್ನು ಆ್ಯಂಬುಲೆನ್ಸ್‌ಗಳಲ್ಲಿ ಅಸ್ಸಾಂ ಮೂಲಕ ವಂತಾರಾಗೆ ಸಾಗಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆನೆಗಳನ್ನು ವಂತಾರಾಗೆ ರವಾನೆ ಮಾಡುತ್ತಿರುವುದನ್ನು ಪ್ರಾಣಿ ಹಕ್ಕುಗಳ ಹೋರಾಟಗಾರರು ಮತ್ತು ವಿಪಕ್ಷಗಳು ವಿರೋಧಿಸಿವೆ.

ವಂತಾರಾ ಪ್ರಾಣಿ ಸಂರಕ್ಷಣೆ ಮತ್ತು ಆರೈಕೆ ಕೇಂದ್ರವು ರಾಧೇಕೃಷ್ಣ ದೇವಸ್ಥಾನ ಆನೆ ಕಲ್ಯಾಣ ಟ್ರಸ್ಟ್ ಅಡಿಯಲ್ಲಿದ್ದು, ಅದರನ್ನು ಅನಂತ್ ಅಂಬಾನಿ ನಿರ್ವಹಿಸುತ್ತಿದ್ದಾರೆ. ಸೆರೆ ಹಿಡಿಯಲಾದ ಆನೆಗಳನ್ನು ಅರುಣಾಚಲ ಪ್ರದೇಶದ ನಮಸಾಯಿಯಿಂದ ಗುಜರಾತ್‌ನ ಜಾಮ್ ನಗರದಲ್ಲಿರುವ ವಂತಾರಾ ಕೇಂದ್ರಕ್ಕೆ ಕರೆದೊಯ್ದಿರುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆನೆಗಳನ್ನು ಸುಮಾರು 3,500 ಕಿಮೀ ದೂರ ಸಾಗಿಸಲಾಗಿದೆ.

ಅಪ್ಪರ್ ಅಸ್ಸಾಂ ಮತ್ತು ಪೂರ್ವ ಅರುಣಾಚಲ ಪ್ರದೇಶದ ಹಚ್ಚ ಹಸಿರಿನ ಜೀವವೈವಿಧ್ಯತೆಯುಳ್ಳು ಪ್ರದೇಶದಿಂದ ಆನೆಗಳನ್ನು ಸೆರೆ ಹಿಡಿದು ಜಾಮ್‌ನಗರದ ಮರುಭೂಮಿ ಪ್ರದೇಶಕ್ಕೆ ಆನೆಗಳನ್ನು ಸಾಗಿಸಲಾಗಿದೆ. ಆನೆಗಳ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ. 3,500 ಕಿ.ಮೀ ಸಾಗಾಟವು ಪ್ರಕೃತಿಯ ಮೇಲಿನ ಶೋಷಣೆಯನ್ನು ಎತ್ತಿ ತೋರಿಸುತ್ತದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ಆನೆಗಳನ್ನು ಗುಜರಾತ್‌ಗೆ ಸಾಗಿಸಲು ಅವಕಾಶ ನೀಡಿದ ಅಸ್ಸಾಂನ ಬಿಜೆಪಿ ಸರ್ಕಾರದ ವಿರುದ್ಧ ಪ್ರಾಣಿ ಹಕ್ಕುಗಳ ಹೋರಾಟಗಾರರು ಮತ್ತು ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. “ಪ್ರಾಣಿಗಳನ್ನು ತಮ್ಮ ಪ್ರಾಂತ್ಯದಿಂದ ಬೇರೆಲ್ಲಿಗೂ ರವಾನೆ ಮಾಡಲು ಅವಕಾಶ ನೀಡಬಾರದು. ಕೊಂಡೊಯ್ದಿರುವ ಆನೆಗಳನ್ನು ಮರಳಿ ತರಬೇಕು. ಅವುಗಳ ರಕ್ಷಣೆ ಮತ್ತು ಆರೈಕೆಯ ಜವಾಬ್ದಾರಿಯನ್ನು ಅಸ್ಸಾಂ ಸರ್ಕಾರವೇ ಹೊತ್ತುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X