ಮಣಿಪುರ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ನಿತೀಶ್ ಕುಮಾರ್‌ ನೇತೃತ್ವದ ಜೆಡಿಯು

Date:

Advertisements

ಕೇಂದ್ರದಲ್ಲಿ ಎನ್‌ಡಿಎ ಭಾಗವಾಗಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮಣಿಪುರದ ಎನ್‌ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರದಿಂದ ತನ್ನ ಬೆಂಬಲವನ್ನು ಹಿಂಪಡೆದಿದೆ. ಮಣಿಪುರದ ಏಕೈಕ ಜೆಡಿಯು ಶಾಸಕ ಸರ್ಕಾರದಿಂದ ಬೆಂಬಲ ಹಿಂಪಡೆದು ವಿಪಕ್ಷದ ಪಾಳಯಕ್ಕೆ ಸೇರಿದ್ದಾರೆ.

ಜೆಡಿಯು ಬೆಂಬಲ ಹಿಂಪಡೆದಿರುವುದರಿಂದ ಮಣಿಪುರ ಸರ್ಕಾರದಲ್ಲಿ ಯಾವುದೇ ಮಹತ್ವದ ಬದಲಾವಣೆಯಾಗದಿದ್ದರೂ ಕೂಡಾ ಕೇಂದ್ರದಲ್ಲಿ ಮತ್ತು ಬಿಹಾರದಲ್ಲಿ ಜೆಡಿಯು ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೆ ಇದು ಎಚ್ಚರಿಕೆ ಕರೆಗಂಟೆ ಎಂದರೆ ತಪ್ಪಾಗಲಾರದು.

ಇನ್ನು ತಿಂಗಳುಗಳ ಹಿಂದಷ್ಟೇ ಮೇಘಾಲಯದಲ್ಲಿ ಅಧಿಕಾರ ಹೊಂದಿರುವ ಕಾನ್ರಾಡ್ ಸಂಗ್ಮಾ ನೇತೃತ್ವದ ಎನ್‌ಪಿಪಿ ಮಣಿಪುರ ಬಿಜೆಪಿ ಸರ್ಕಾರದಿಂದ ಬೆಂಬಲವನ್ನು ಹಿಂಪಡೆದಿದೆ.

Advertisements

ಇದನ್ನು ಓದಿದ್ದೀರಾ? ನಿತೀಶ್ ಕುಮಾರ್‌ಗೆ ‘ಭಾರತ ರತ್ನ’ ನೀಡಿ: ಪೋಸ್ಟರ್ ಹಾಕಿದ ಜೆಡಿಯು ನಾಯಕ!

2022ರ ಮಣಿಪುರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು ಆರು ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಆದರೆ ಕೆಲವು ತಿಂಗಳುಗಳಲ್ಲೇ ಆರು ಶಾಸಕರ ಪೈಕಿ ಐವರು ಬಿಜೆಪಿಗೆ ಪಕ್ಷಾಂತರಗೊಂಡಿದ್ದು, ಜೆಡಿಯುನಲ್ಲಿ ಏಕೈಕ ಶಾಸಕರು ಉಳಿದಿದ್ದರು.

ಸದ್ಯ ಬಿಜೆಪಿ 60 ಸದಸ್ಯರ ವಿಧಾನಸಭೆ ಕ್ಷೇತ್ರದಲ್ಲಿ 37 ಸೀಟುಗಳನ್ನು ಹೊಂದಿದ್ದು, ಐವರು ಎನ್‌ಪಿಎಫ್‌ ಶಾಸಕರು, ಮೂವರು ಸ್ವತಂತ್ರ್ಯ ಅಭ್ಯರ್ಥಿಗಳು ಬಿಜೆಪಿ ಬೆಂಬಲಕ್ಕೆ ನಿಂತಿರುವುದರಿಂದ ಇನ್ನೂ ಕೂಡಾ ಸರ್ಕಾರ ಉಳಿದುಕೊಂಡಿದೆ.

“ಮಣಿಪುರದಲ್ಲಿ ಜೆಡಿಯು ಬಿಜೆಪಿ ಸರ್ಕಾರಕ್ಕೆ ಯಾವುದೇ ಬೆಂಬಲ ನೀಡುವುದಿಲ್ಲ. ನಮ್ಮ ಏಕೈಕ ಶಾಸಕ ಅಬ್ದುಲ್ ನಸೀರ್ ವಿರೋಧ ಪಕ್ಷದ ಶಾಸಕರಾಗಿರಲಿದ್ದಾರೆ” ಎಂದು ಪತ್ರದಲ್ಲಿ ಜೆಡಿಯು ತಿಳಿಸಿದೆ.

ಮಣಿಪುರದಲ್ಲಿ ಒಂದು ವರ್ಷಕ್ಕೂ ಅಧಿಕ ಕಾಲದಿಂದ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು, 200ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಹಿಂಸಾಚಾರವನ್ನು ಹತೋಟಿಗೆ ತರುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಈ ಕಾರಣದಿಂದಾಗಿ ಬಿಜೆಪಿಯು ಮಣಿಪುರದಲ್ಲಿ ಬೆಂಬಲವನ್ನು ಕಳೆದುಕೊಳ್ಳುತ್ತಿದೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಈವರೆಗೆ ಒಂದು ಬಾರಿಯೂ ಮಣಿಪುರಕ್ಕೆ ಭೇಟಿ ನೀಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನು ಓದಿದ್ದೀರಾ? ನಿತೀಶ್ ಕುಮಾರ್‌ಗೆ ‘ಭಾರತ ರತ್ನ’ ನೀಡಿ: ಪೋಸ್ಟರ್ ಹಾಕಿದ ಜೆಡಿಯು ನಾಯಕ!

ಇದರೊಂದಿಗೆ ಜೆಡಿಯು ಶಾಸಕರನ್ನು ಬಿಜೆಪಿಯು ತನ್ನೆಡೆಗೆ ಸೆಳೆದುಕೊಂಡಿರುವುದು ಮಣಿಪುರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವೆ ವೈಮನಸ್ಸಿಗೆ ಕಾರಣವಾಗಿದೆ. ಉಭಯ ಪಕ್ಷಗಳು ಕೇಂದ್ರದಲ್ಲಿ ಮಿತ್ರ ಪಕ್ಷಗಳಾಗಿದ್ದರೂ ಮಣಿಪುರದಲ್ಲಿ ವಿಪಕ್ಷಗಳಾಗಿವೆ.

ಮಣಿಪುರ ವಿಧಾಸನಭೆ ಚುನಾವಣೆಯ ಫಲಿತಾಂಶವು 2022ರ ಮಾರ್ಚ್ 10ರಂದು ಹೊರಬಿದ್ದಿದೆ. ರಾಜ್ಯದಲ್ಲಿ ಒಟ್ಟು 60 ವಿಧಾನಸಭೆ ಕ್ಷೇತ್ರಗಳಿದ್ದು, 32ರಲ್ಲಿ ಬಿಜೆಪಿ, 7ರಲ್ಲಿ ಎನ್‌ಪಿಪಿ, ಆರರಲ್ಲಿ ಜೆಡಿಯು ಗೆದ್ದಿದೆ. ಬಳಿಕ ಐವರು ಜೆಡಿಯು ಶಾಸಕರು ಬಿಜೆಪಿ ಸೇರಿದ್ದು, ಬಿಜೆಪಿ ಸಂಖ್ಯಾ ಬಲ 37ಕ್ಕೆ ಏರಿಕೆಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X