ಮಹಾರಾಷ್ಟ್ರ | ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಕನಿಷ್ಠ ಆರು ಮಂದಿ ದುರ್ಮರಣ

Date:

Advertisements

ಉತ್ತರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಬುಧವಾರ ಸಂಜೆ ಕರ್ನಾಟಕ ಎಕ್ಸ್‌ಪ್ರೆಸ್‌ ಡಿಕ್ಕಿಯಾಗಿ ಕನಿಷ್ಠ ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ಪುಷ್ಪಕ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂಬ ವದಂತಿ ಹರಡುತ್ತಿದ್ದಂತೆ ಪ್ರಯಾಣಿಕರು ರೈಲಿನಿಂದ ಹೊರಕ್ಕೆ ಜಿಗಿದು ಹಳಿಯಲ್ಲಿ ನಿಂತಿದ್ದರು. ಈ ವೇಳೆ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಪ್ರಯಾಣಿಕರ ಮೇಲೆ ಹರಿದಿದೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ‘ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು?’; ರೈಲು ಅಪಘಾತಗಳ ಬಗ್ಗೆ ಎಚ್ಚೆತ್ತುಕೊಳ್ಳದ ಕೇಂದ್ರದ ವಿರುದ್ಧ ರಾಹುಲ್ ಕಿಡಿ

Advertisements

ಸಂಜೆ ಸುಮಾರು ಐದು ಗಂಟೆ ಸುಮಾರಿಗೆ ಯಾರೋ ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನ ಚೇನ್ ಎಳೆದಿದ್ದು ಪ್ರಯಾಣಿಕರು ಕೆಳಗಿಳಿದಿದ್ದಾರೆ. ಈ ವೇಳೆ ಕರ್ನಾಟಕ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದಿದೆ ಎಂದು ಕೇಂದ್ರ ರೈಲ್ವೆಯ ಮುಖ್ಯ ವಕ್ತಾರ ಸ್ವಪ್ನಿಲ್ ನೀಲಾ ತಿಳಿಸಿದ್ದಾರೆ.

ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನು ಹಲವು ಮಂದಿ ಗಾಯಗಳಾಗಿದ್ದು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.

ಇನ್ನು ಪುಷ್ಪಕ್ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂಬ ವದಂತಿಯನ್ನು ನಂಬಿ ಸುಮಾರು 30ಕ್ಕೂ ಅಧಿಕ ಮಂದಿ ರೈಲಿನಿಂದ ಜಿಗಿದಿದ್ದರು. ಬಹುತೇಕರಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ. ಹಲವು ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X