ಬೆಳಗಾವಿ | 7 ವರ್ಷದ ಬಾಲಕ ಮಾರಾಟ; ಆರೋಪಿಗಳು ಸೆರೆ

Date:

Advertisements

ಸುಮಾರು ನಾಲ್ಕು ಲಕ್ಷಕ್ಕೆ 7 ವರ್ಷದ ಬಾಲಕನನ್ನು ಮಾರಾಟ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದಾಶಿವ ಶಿವಬಸಪ್ಪ ಮಗದುಮ್, ಲಕ್ಷ್ಮಿ ಗೋಲಬಾಂವಿ, ಕೊಲ್ಲಾಪುರದ ಸಂಗೀತಾ ವಿಷ್ಣು ಸಾವಂತ್, ಕಾರವಾರದ ಅನಸೂಯಾ ಗಿರಿಮಲ್ಲಪ್ಪ ದೊಡ್ಡಮನಿ ಬಂಧಿತ ಆರೋಪಿಗಳು.

ಸುಲ್ತಾನಪುರ ಗ್ರಾಮದ ಸಂಗೀತಾ ಎಂಬಾಕೆ ಎರಡನೇ ಮದುವೆ ಆಗಿದ್ದಳು. ಮದುವೆ ಮಾಡಿಸಿದ್ದ ದಲ್ಲಾಳಿ ಲಕ್ಷ್ಮೀ ಗೋಲಬಾಂವಿ ತನ್ನ ಗೆಳತಿ ಅನಸೂಯಾ ಜೊತೆ ಸೇರಿ ನಾಲ್ಕು ಲಕ್ಷಕ್ಕೆ ಬೆಳಗಾವಿಯ ದಿಲ್ ಶಾನ್ ಎಂಬ ಮಹಿಳೆಗೆ ಸಂಗೀತಾಳ 7 ವರ್ಷದ ಮಗನನ್ನು ಮರಾಟ ಮಾಡಲಾಗಿತ್ತು. ಬಳಿಕ ಆರೋಪಿಗಳು ಮಗು ಖರೀದಿಸಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ಬರೆದುಕೊಡುವಂತೆ ದಿಲ್‌ ಶಾನ್ ಪಟ್ಟು ಹಿಡಿದಿದ್ದಳು.‌ ಪೊಲೀಸರಿಗೆ ಹೆದರಿ ಆರೋಪಿಗಳು ಫೋನ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು. ಮೂರು ತಿಂಗಳ ಬಳಿಕ ಬಾಲಕನ ತಾಯಿ ಸಂಗೀತಾ ಎನ್‌ಜಿಒ ಒಂದರ ಮೂಲಕ ಪೊಲೀಸರಿಗೆ ದೂರು ನೀಡಿ ಮಗು ಪತ್ತೆ ಮಾಡಿಕೊಂಡುವಂತೆ ಮನವಿ ಮಾಡಿದ್ದಳು.

ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಮಲಪ್ರಭಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ನೀರು ಪಾಲು

Advertisements

ಬೈಲಹೊಂಗಲ ತಾಲೂಕಿನ ಗ್ರಾಮವೊಂದರಲ್ಲಿ ಪತ್ತೆಯಾದ ಬಾಲಕನನ್ನು ಮರಳಿ ತಾಯಿಗೆ ಒಪ್ಪಿಸಿದ ಹುಕ್ಕೇರಿ ಪೊಲೀಸರು, ಮಗು ಮಾರಾಟ ತಂಡಕ್ಕೆ ಸಂಗೀತಾ ಎರಡನೇ ಪತಿ ಸಾಥ್ ನೀಡಿದ್ದ ಎನ್ನುವ ವಿಚಾರವನ್ನು ತನಿಖೆಯಲ್ಲಿ ಬಹಿರಂಗಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X