ಕೋಮು ಭಾವನೆ ಕೆರಳಿಸುವ ಪೋಸ್ಟ್‌ ; ವಿವಾದವಾಗುತ್ತಲೇ ಡಿಲೀಟ್‌ ಮಾಡಿ ಕ್ಷಮೆ ಕೇಳಿದ ಕ್ರಿಕೆಟಿಗ

Date:

ಕಳೆದ ವಾರ ಮುಕ್ತಾಯಕಂಡ ಐಪಿಎಲ್‌ನಲ್ಲಿ, ಸತತ ಐದು ಸಿಕ್ಸರ್‌ ಚಚ್ಚಿಸಿಕೊಂಡು ಸುದ್ದಿಯಾಗಿದ್ದ ಗುಜರಾತ್‌ ಟೈಟನ್ಸ್‌ ತಂಡದ ಬೌಲರ್‌ ಯಶ್‌ ದಯಾಳ್‌, ಇದೀಗ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ದೆಹಲಿಯಲ್ಲಿ ಇತ್ತೀಚಿಗೆ ಸಾಕ್ಷಿ ಎಂಬ ಬಾಲಕಿಯನ್ನು 20 ವರ್ಷದ ಸಾಹಿಲ್ ಖಾನ್ ಎಂಬಾತ 21 ಬಾರಿ ಚಾಕುವಿನಿಂದ ಚುಚ್ಚಿ ನಂತರ ಕಲ್ಲಿನಿಂದ ತಲೆಯನ್ನು ಜಜ್ಜಿ ಅತ್ಯಂತ ಭೀಕರವಾಗಿ ಕೊಲೆ ಮಾಡಿದ್ದ. ಸಾಹಿಲ್ ಖಾನ್ ಹೋಲಿಕೆಯ ಪೋಸ್ಟರ್‌ವೊಂದರನ್ನು ಯಶ್‌ ದಯಾಳ್ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿದ್ದರು. ಇದು ವಿವಾದವಾಗುತ್ತಲೇ ಆ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿ, ಕ್ಷಮೆ ಯಾಚಿಸಿದ್ದಾರೆ.

ಯಶ್​ ದಯಾಳ್​ ಶೇರ್ ಮಾಡಿದ್ದ ಪೋಸ್ಟರ್​​​ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಟ್ವಿಟರ್‌ ನಲ್ಲಿ ಹಲವರು, ಬಿಸಿಸಿಐ ಮತ್ತು ಗುಜರಾತ್​ ಟೈಟಾನ್ಸ್​ ಖಾತೆಗೆ ಟ್ಯಾಗ್​ ಮಾಡಿ ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇನ್ನು ಹಲವು ನೆಟ್ಟಿಗರು ಯಶ್ ದಯಾಳ್ ಅವರ ಮನಸ್ಥಿತಿಯನ್ನು ಟೀಕಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಸ್ಲಿಮರ ಕುರಿತು ಅಪನಂಬಿಕೆ ಹೊಂದಿರುವ ನೀನು, ಸಹ ಆಟಗಾರರಾದ ಮುಹಮ್ಮದ್‌ ಶಮಿ, ರಶೀದ್‌ ಖಾನ್‌, ನೂರ್‌ ಅಹ್ಮದ್‌ ಜೊತೆ ಎರಡು ತಿಂಗಳು ಜೊತೆಯಾಗಿ ಕಳೆದಿದ್ದರೂ ಹೇಗೆ ಎಂದು ಹಲವರು ಪ್ರಶ್ನಿಸಿದ್ದಾರೆ.

ತನ್ನ ಪೋಸ್ಟ್‌ ವಿವಾದವಾಗುತ್ತಲೇ ಎಚ್ಚೆತ್ತ ಯುವ ಬೌಲರ್‌, ತನ್ನ ಇನ್​ಸ್ಟಗ್ರಾಮ್​ ಸ್ಟೋರಿಯನ್ನು ಡಿಲೀಟ್​ ಮಾಡಿದ್ದಾನೆ.ಬಳಿಕ ಹಿಂದೆ ಪೋಸ್ಟ್​ ಮಾಡಿದ್ದ ಸ್ಟೇಟಸ್​ಗಾಗಿ ಕ್ಷಮೆ ಯಾಚಿಸಿದ್ದಾರೆ ʻಸ್ನೇಹಿತರೇ, ನಾನು ತಪ್ಪಾಗಿ ಈ ಹಿಂದಿನ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದೆ. ಇದ್ಕಕಾಗಿ ನಿಮ್ಮಲ್ಲಿ ಕ್ಷಮೆ ಕೋರುತ್ತಿದ್ದೇನೆ. ದಯವಿಟ್ಟು ದ್ವೇಷವನ್ನು ಹರಡಬೇಡಿ. ಧನ್ಯವಾದಗಳು. ನಾನು ಎಲ್ಲಾ ಸಮುದಾಯಗಳ ಭಾವನೆಗಳನ್ನು ಗೌರವಿಸುತ್ತೇನೆʼ ಎಂದು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿ ಗೆದ್ದು ಇತಿಹಾಸ ನಿರ್ಮಿಸಿದ 17ರ ಹರೆಯದ ಭಾರತೀಯ ಡಿ ಗುಕೇಶ್

ಭಾರತದ 17 ವರ್ಷದ ಗ್ರ್ಯಾಂಡ್‌ ಮಾಸ್ಟರ್ ಡಿ ಗುಕೇಶ್ ಟೊರೊಂಟೊದಲ್ಲಿ ನಡೆದ...

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...