ವಿಜಯಪುರ | ಹಲ್ಲೆಗೋಳಗಾದ ದಲಿತ ಕಾರ್ಮಿಕರಿಗೆ ಸೂಕ್ತ ರಕ್ಷಣೆ ನೀಡಿ : ಗೋಪಾಲ ಕಟ್ಟಿಮನಿ

Date:

Advertisements

ಸಂಕ್ರಾಂತಿ ಹಬ್ಬಕ್ಕೆ ಹೋದವರು ತಡವಾಗಿ ಮರಳಿ ಬಂದಿದ್ದಕ್ಕೆ ಇಟ್ಟಂಗಿ ಬಟ್ಟಿ ಮಾಲೀಕ ದಲಿತ ಕಾರ್ಮಿಕ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಹಳ್ಳೆಗೋಳಾಗದ ದಲಿತ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಒದಗಿಸಬೇಕು” ಎಂದು ಅಂಬೇಡ್ಕರ್ ಸೇನೆ ತಾಲ್ಲೂಕು ಅಧ್ಯಕ್ಷ ಗೋಪಾಲ ಕಟ್ಟಿಮನಿ ಒತ್ತಾಯಿಸಿದರು.

ವಿಜಯಪುರ ಪಟ್ಟಣದ ಗಾಂಧಿನಗರದಲ್ಲಿ ಇಟ್ಟಂಗಿ ಭಟ್ಟಿಯಲ್ಲಿ ಕೆಲಸ ಮಾಡುತ್ತಿರುವ ಮೂವರು ದಲಿತ ಕಾರ್ಮಿಕರ ಮೇಲೆ ಮಾಲೀಕ ಮಾಡಿದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಅಂಬೇಡ್ಕರ್ ಸೇನೆ ವತಿಯಿಂದ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲ್ಲೂಕಿನ ಸಿರಸ್ತೆದಾರ ಜೆ.ಆರ್. ಜೈನಾಪೂರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಇಟ್ಟಂಗಿ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದ ಕಾರ್ಮಿಕರ ಮೇಲೆ ಒಂದು ಸಣ್ಣ ಕಾರಣಕ್ಕಾಗಿ ಹಲ್ಲೆ ಮಾಡಿರುವುದು ಖಂಡನೀಯ. ಹಲ್ಲೆ ಮಾಡಿದ ಮಾಲೀಕ ಕೇಮು ರಾಠೋಡ ತನ್ನ ಸಹಚರರೊದಿಗೆ ಸೇರಿ ದಲಿತ ಸಮಾಜದ ಕಾರ್ಮಿಕರಾದ ಸದಾಶಿವ ಮಾದರ್, ಸದಾಶಿವ ಬಬಲಾರಿ ಹಾಗೂ ಉಮೇಶ ಮಾದರ್ ಈ ಮೂವರ ಮೇಲೆ ಪೈಮಗಳನ್ನು ಬಳಸಿ ಮಾರಣಾಂತಿಕ ಹಲ್ಲೆಯನ್ನು ಮಾಡಿದ್ದಾನೆ. ಎಂದರು.

Advertisements

“ಈ ಘಟನೆ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಯಾಗಿದೆ. ಈಗಾಗಲೇ ಈ ಹಲ್ಲೆಕೋರರನ್ನು ಪೊಲೀಸರು ಬಂದಿಸಿದ್ದಾರೆ. ಹಲ್ಲೆಗೆ ಒಳಗಾದವರಿಗೆ ಕಾರ್ಮಿಕ ಇಲಾಖೆಯವರು ಸೂಕ್ತ ಭದ್ರತೆ ಒದಗಿಸಬೇಕು” ಎಂದು ಗೋಪಾಲ ಕಟ್ಟಿಮನಿ ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು, ಶಾಲಾ ಕಾಲೇಜು ಹಾಸ್ಟೆಲುಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಒತ್ತಾಯ

ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆ ಜಿಲ್ಲಾ ಉಪಾಧ್ಯಕ್ಷ ಬಸ್ತು ಕಟ್ಟಿಮನಿ, ಕಾರ್ಯದರ್ಶಿ ಮಹದೇವ ಆಸ್ತಿ, ಮುಖಂಡರು ಪರಶುರಾಮ ತಳವಾರ, ಯಮನಪ್ಪ ನಾಡೋಣ, ಪದಾಧಿಕಾರಿಗಳ ಶೇಖಪ್ಪ ಕಟ್ಟಿಮನಿ, ದ್ಯಾಮಣ್ಣ ಸೋಮನಾಳ, ಮಡು ಚಲವಾದಿ ಮತ್ತೀತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X