ರಾಯಚೂರು | ₹60 ಲಕ್ಷದ ಭತ್ತ ಖರೀದಿಸಿ ವಂಚನೆ; ರೈತರಿಂದ ದೂರು ದಾಖಲು

Date:

Advertisements

ರೈತರಿಂದ ಭತ್ತ ಖರೀದಿಸಿ ಸುಮಾರು ₹60 ಲಕ್ಷ ಮೊತ್ತವನ್ನು ಕೊಡದೆ ಮೋಸವೆಸಗಿ ಪರಾರಿಯಾದ ವ್ಯಾಪಾರಿ ವಿರುದ್ಧ ರೈತರು ರಾಯಚೂರು ಜಿಲ್ಲೆಯ ಸಿಂಧನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪರಾರಿಯಾಗಿರುವ ವ್ಯಾಪಾರಿ ಮಲ್ಲೇಶ ಎಂಬಾತನ ವಿರುದ್ಧ ರೈತರು ದೂರು ನೀಡಿದ್ದಾರೆ. ಸಿಂಧನೂರು ತಾಲೂಕಿನ ಉಪ್ಪಳ ಮತ್ತು ದಢೇಸುಗೂರು ಗ್ರಾಮದ ರೈತರಿಂದ 4,500 ಚೀಲ ಭತ್ತ ಖರೀದಿಸಿದ ವ್ಯಾಪಾರಿಯೊಬ್ಬ ರೈತರಿಗೆ ₹60 ಲಕ್ಷ ಪಾವತಿಸದೇ ಪರಾರಿಯಾಗಿದ್ದಾನೆ.

ಕಾರಟಗಿಯಲ್ಲಿ ‘ಮಹಾಮಲ್ಲೇಶ್ವರ ಟ್ರೇಡಿಂಗ್’ ಹೆಸರಿನಲ್ಲಿ ಕಮಿಷನ್ ಏಜೆಂಟ್‍ರಾಗಿ ವ್ಯವಹಾರ ಮಾಡುತ್ತಿದ್ದ ಮಲ್ಲೇಶಗೆ ಉಪ್ಪಳ ಗ್ರಾಮದ ಸೂರ್ಯಬಾಬು 460 ಚೀಲ, ಕೆ ಎಂ ಬಸವರಾಜ 170 ಚೀಲ, ಬಸವರಾಜ ಸಂಗಟಿಯಿಂದ 200, ರಾಮರಾವ್ 1800 ಚೀಲ, ಜಿ ಗೋವಿಂದ 250 ಚೀಲ ಸೇರಿದಂತೆ 30 ಮಂದಿ ರೈತರು ಡಿಸೆಂಬರ್‌ ಮೊದಲ ವಾರದಲ್ಲಿ ಆರ್‌ಎನ್‍ಆರ್ ತಳಿಯ ಭತ್ತವನ್ನು ಮಾರಾಟ ಮಾಡಿದ್ದರು.

Advertisements

75 ಕೆಜಿ ಭತ್ತಕ್ಕೆ ₹1800, ಪ್ರತಿ ಕ್ವಿಂಟಲ್‍ಗೆ ₹2400 ಬೆಲೆ ನಿಗದಿ ಪಡಿಸಿ 15 ದಿನಗಳಲ್ಲಿ ಹಣ ಪಾವತಿಸುವುದಾಗಿ ಮಲ್ಲೇಶ ಭರವಸೆ ನೀಡಿದ್ದ. ಅವಧಿ ಮುಗಿದ ನಂತರ ರೈತರು ಅಂಗಡಿಗೆ ಬಂದಾಗ ಬೀಗ ಹಾಕಲಾಗಿತ್ತು. ಎರಡ್ಮೂರು ದಿನಗಳಿಂದ ಅಲೆದಾಡಿದರೂ ಅಂಗಡಿ ಮಾಲೀಕರ ಪತ್ತೆಯಾಗಿಲ್ಲ.

ಈ ಸುದ್ದಿ ಓದಿದ್ದೀರಾ? ಲೈನ್ ಮೆನ್‌ಗಳ ಕೊರತೆ | ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್‌ಗಳ ನೇಮಕ: ಸಚಿವ ಕೆ ಜೆ ಜಾರ್ಜ್‌

“ಉಪ್ಪಳದ ಭೀಮಯ್ಯ ಅವರ ಜೊತೆಯಲ್ಲಿ ಪಾಲುದಾರನಾಗಿ ಮೂರು ವರ್ಷಗಳಿಂದ ಕಾರಟಗಿಯ ಮಲ್ಲೇಶ ವ್ಯಾಪಾರ ಮಾಡುತ್ತಿದ್ದರಿಂದ ರೈತರಿಗೆ ಪರಿಯಚವಾಗಿದ್ದ. ಮಲ್ಲೇಶ ಕಳೆದ ವರ್ಷ ಇದೇ ರೀತಿ ಉದ್ರಿ ಪಡೆದು ಹೇಳಿದ ಮಾತಿನಂತೆ ಹಣ ಕೊಟ್ಟಿದ್ದನು. ಆದರೆ ಈಗ ಓಡಿ ಹೋಗಿದ್ದಾನೆ” ಎಂದು ಉಪ್ಪಳದ ರೈತರಾದ ರಾಮರಾವ್, ಸೂರ್ಯಬಾಬು ಅಳಲು ತೋಡಿಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X