ಬೀದರ್‌ | ಅಪ್ರಾಪ್ತರು ವಾಹನ ಚಲಾಯಿಸಿದರೆ ಪೋಷಕರಿಗೆ ₹25 ಸಾವಿರ ದಂಡ

Date:

Advertisements

18 ವರ್ಷದೊಳಗಿನ ಮಕ್ಕಳಿಗೆ ವಾಹನ ಚಲಾಯಿಸಲು ಕೊಟ್ಟರೆ ಪೋಷಕರಿಗೆ ₹25 ಸಾವಿರ ದಂಡ ಹಾಗೂ 6 ತಿಂಗಳು ಜೈಲು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಪ್ರಾದೆಶೀಕ ಸಾರಿಗೆ ಅಧಿಕಾರಿ ಜಿ.ಕೆ.ಬಿರಾದರ್ ಹೇಳಿದರು.

ಔರಾದ್ ತಾಲ್ಲೂಕಿನ ಸಂತಪೂರ ಗ್ರಾಮದ ಸಿದ್ದರಾಮೇಶ್ವರ ಪಿಯು ಕಾಲೇಜಿನಲ್ಲಿ ಸಂತಪೂರ ಪೊಲೀಸ್‌ ಠಾಣೆ ಹಾಗೂ ಬೀದರ್ ಮೋಟಾರ್ ವಾಹನ ತರಬೇತಿ ಶಾಲೆ ಸಂಘದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ʼಅಪಘಾತ ರಹಿತ ವಾಹನ ಚಲಾಯಿಸಲು ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಬೇಕು. ವಾಹನ ಪರವಾನಿಗೆ ಇಲ್ಲದೇ ವಾಹನ ಚಲಾಯಿಸುವುದು ಹಾಗೂ ಮದ್ಯ ಕುಡಿದು ವಾಹನ ಚಲಾಯಿಸುವುದು ಅಪರಾಧʼ ಎಂದು ತಿಳಿಸಿದರು.

Advertisements

ಸಂತಪೂರ ಠಾಣೆ ಪಿಎಸ್‌ಐ ನಂದಕುಮಾರ ಮಾತನಾಡಿ, ʼದ್ವಿಚಕ್ರ ವಾಹನದ ಮೇಲೆ ಇಬ್ಬರಿಗಿಂತ ಹೆಚ್ಚು ಜನ ಕೂಡುವಂತಿಲ್ಲ. ವಾಹನ ಚಲಾಯಿಸುವಾಗ ಮೊಬೈಲ್ ಬಳಸಬಾರದು. ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುವಾಗ ಯಾವುದೇ ತೊಂದರೆಯಾದರೆ ಕೂಡಲೇ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಬಹುದುʼ ಎಂದು ಸಲಹೆ ನೀಡಿದರು.

ಹಿರಿಯ ಮೋಟಾರ್ ವಾಹನ ನಿರೀಕ್ಷಕ ಡಿ.ನಾಗರಾಜ ಮಾತನಾಡಿ, ʼವಾಹನ ಚಾಲನೆ ಮಾಡುವಾಗ ವೇಗ ಮಿತಿಯಲ್ಲಿ ಇರಬೇಕು ಹಾಗೂ ಪುಟ್ಟ ಕೆಲಸಗಳಿಗೆ ವಾಹನ ಉಪಯೋಗಿಸಬಾರದುʼ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜು ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಮಾತಾನಾಡಿ, ʼಸಂಚಾರ ನಿಯಮಗಳ ಪಾಲನೆ ಕುರಿತು ಆಯೋಜಿಸಿರುವ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು. ರಸ್ತೆ ಸುರಕ್ಷತೆಯ ನಿಯಮಗಳನ್ನು ಎಲ್ಲರೂ ಪಾಲಿಸೋಣʼ ಎಂದು ಹೆಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ತೊಗರಿ ಬೆಲೆ ಕುಸಿತದಿಂದ ರೈತರು ಕಂಗಾಲು : ಸ್ಪಂದಿಸುವುದೇ ಸರ್ಕಾರ?

ಕಾರ್ಯಕ್ರಮದಲ್ಲಿ ಮೋಟಾರ್ ವಾಹನ ನಿರೀಕ್ಷಕ ಅಶ್ವಿನ ರೆಡ್ಡಿ, ಬೀದರ್ ಮೋಟಾರ್ ವಾಹನ ತರಬೇತಿ ಶಾಲೆ ಸಂಘದ ಅಧ್ಯಕ್ಷ ಪ್ರಕಾಶ ಗುಮ್ಮೆ‌, ರಾಜ್ಯ ಸಂಘಟನೆ ಕಾರ್ಯದರ್ಶಿ ಶಿವರಾಜ ಜಮಾದರ, ವಿದ್ಯಾರ್ಥಿ ಮುಖಂಡ ರತ್ನದೀಪ ಕಸ್ತೂರೆ ಸೇರಿದಂತೆ ಕಾಲೇಜಿನ ಬೋಧಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X