ಗದಗ | ಮುಂಗಾರು ಹಂಗಾಮು ಪ್ರಾರಂಭ; ಕೃಷಿಕರಿಗೆ ಅಧಿಕಾರಿಗಳಿಂದ ಸಲಹೆ-ಸೂಚನೆ

Date:

Advertisements
  • ಜಿಲ್ಲೆಯಲ್ಲಿ 3,02,690 ಹೆಕ್ಟೆರ್‌ ಪ್ರದೇಶದಲ್ಲಿ ಬಿತ್ತನೆ ಸಾಧ್ಯತೆ
  • ಜಿಲ್ಲೆಯಲ್ಲಿ 18,496 ಮೆಟ್ರಿಕ್‌ ಟನ್ ರಸಗೊಬ್ಬರ ದಾಸ್ತಾನು

ಮುಂಗಾರು ಹಂಗಾಮು ಪ್ರಾರಂಭವಾಗುತ್ತಿರುವ ಹಿನ್ನೆಲೆ ಗದಗ ಜಿಲ್ಲೆಯ ಪ್ರಗತಿಪರ ಕೃಷಿಕರು ಹಾಗೂ ರೈತ ಮುಖಂಡರೊಂದಿಗೆ ಜಂಟಿ ಕೃಷಿ ನಿರ್ದೇಶಕರು ಸಭೆ ನಡೆಸಿದ್ದಾರೆ. ರೈತರಿಗೆ ಮುಂಗಾರು ಬಿತ್ತನೆ ಕುರಿತಂತೆ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಬಿತ್ತನೆ ಕಾರ್ಯ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಅಂದಾಜು 3,02,690 ಹೆಕ್ಟೆರ್‌ ಪ್ರದೇಶದಲ್ಲಿ ಬಿತ್ತನೆ ಆಗುವ ಸಾಧ್ಯತೆ ಇದೆ. ಹೈಬ್ರಿಡ್‌ ಜೋಳ, ಮುಸುಕಿನ ಜೋಳ, ಸಜ್ಜೆ, ಹೆಸರು, ಶೇಂಗಾ, ಸೂರ್ಯಕಾಂತಿ, ಹೈಬ್ರಿಡ್ ಹತ್ತಿ ಬಿತ್ತನೆಗಾಗಿ ಒಟ್ಟಾರೆ 85,989 ಕ್ವಿಂಟಲ್‌ ಬಿತ್ತನೆ ಬೀಜ ಬೇಕಾಗಬಹುದು. ಈಗಾಗಲೇ ಜಿಲ್ಲೆಯಲ್ಲಿ 8,685 ಕ್ವಿಂಟಲ್ ಬಿತ್ತನೆ ಬೀಜ ದಾಸ್ತಾನಿದ್ದು, ಬಿತ್ತನೆಗೆ ಅನುಸಾರವಾಗಿ ಬಿತ್ತನೆ ಬೀಜಗಳ ಸರಬರಾಜು ಆಗಲಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ತಿಳಿಸಿದರು.

ರಸಗೊಬ್ಬರ ದಾಸ್ತಾನು: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಅಗತ್ಯವಿರುವ ಬೀಜ, ರಸಗೊಬ್ಬರಗಳ ದಾಸ್ತಾನು ಮಾಡಿಕೊಳ್ಳಲಾಗಿದ್ದು, ಒಟ್ಟಾರೆ ಯೂರಿಯಾ 7,885 ಮೆಟ್ರಿಕ್‌ ಟನ್, ಡಿ.ಎ.ಪಿ 5,406, ಎಂ.ಓ.ಪಿ. 208, ಎನ್.ಪಿ.ಕೆ.ಎಸ್ 4,861, ಎಸ್.ಎಸ್.ಪಿ. 134 ಸೇರಿದಂತೆ ಒಟ್ಟಾರೆ 18,496 ಮೆಟ್ರಿಕ್‌ ಟನ್ ರಸಗೊಬ್ಬರ ದಾಸ್ತಾನು ಮಾಡಿಟ್ಟುಕೊಳ್ಳಲಾಗಿದೆ. ಬಿತ್ತನ ಪ್ರಮಾಣ ಹಾಗೂ ಅಗತ್ಯಕ್ಕನುಸಾರ ಪೂರೈಕೆಗೆ ಕ್ರಮ ವಹಿಸಲಾಗುವದು. ರೈತರು ಬೆಳೆಯುವ ಬೆಳೆಗೆ ಅನುಸಾರವಾಗಿ ಬಿತ್ತನೆ ಪ್ರಮಾಣಕ್ಕೆ ಅಗತ್ಯವಿರುವ ರಸಗೊಬ್ಬರಗಳನ್ನು ಮಾತ್ರ ಖರೀದಿಸಿ ಬಳಸಬೇಕು ಅನಗತ್ಯ ರಸಗೊಬ್ಬರ ದಾಸ್ತಾನು ಬೇಡ ಎಂದು ಸಲಹೆ ನೀಡಿದರು.

Advertisements
ಗದಗ 01

ರಸಗೊಬ್ಬರಗಳನ್ನು ನಿಗದಿತ ಬೆಲೆಗೆ ಮಾರಾಟ ಮಾಡಬೇಕು ಹೆಚ್ಚಿನ ದರದಲ್ಲಿ ರಸಗೊಬ್ಬರರ ಮಾರಾಟ ಮಾಡುತ್ತಿರುವದು ಕಂಡುಬಂದಲ್ಲಿ ದೂರು ನೀಡಲು ತಿಳಿಸಿದರು.

ಜಿಲ್ಲೆಯಲ್ಲಿ ಇನ್ನು 37,900 ರೈತರು ಈ ಕೆವೈಸಿ ಮಾಡಿಸಲು ಬಾಕಿ ಇದ್ದು, ಗ್ರಾಮಗಳಲ್ಲಿನ ನಾಗರಿಕ ಸೇವಾ ಕೇಂದ್ರ ಮತ್ತು ಗ್ರಾಮ ಓನ್ ಕೇಂದ್ರದ ಮುಖಾಂತರ ತುರ್ತಾಗಿ ಈಕೆವೈಸಿ ಮಾಡಿಸಿಕೊಳ್ಳಬೇಕು. ಮುಂದಿನ 14 ನೇ ಕಂತಿನ ಅನುದಾನ ಬಾಕಿ ಇರುವ ರೈತರು ಈಕೆವೈಸಿ ಮಾಡಿಸಿಕೊಳ್ಳಲು ಸುಚಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಶಾಸಕಿ ಕರೆಮ್ಮಗೆ ನಿಂದನೆ ಆರೋಪ; ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ಮುಂಗಾರು ಮಳೆ ಆರಂಭವಾಗಲಿದ್ದು ರೈತರು ಬಿತ್ತನೆಗೆ ಅಗತ್ಯ ಸಿದ್ಧತೆಗಳನ್ನು, ಬೀಜೊಪಚಾರ ಮಾಡಿಟ್ಟುಕೊಳ್ಳಬೇಕು. ಮಳೆ ಹಾಗೂ ವಾತಾವರಣಕ್ಕೆ ಅನುಗುಣವಾಗಿ ಯಾವ ಬೆಳೆ ಬೆಳೆಯಬೇಕು ಹಾಗೂ ಬೀಜೊಪಚಾರ ಯಾವ ಹಂತದಲ್ಲಿ ಮಾಡಬೇಕು ಎನ್ನುವದರ ಬಗ್ಗೆ ರೈತರು ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆದು ಬಿತ್ತನೆ ಕಾರ್ಯ ಕೈಗೊಳ್ಳಬೇಕು. ಬಿತ್ತನೆ ಕಾರ್ಯದ ನಂತರ ತಾವು ಬೆಳೆದ ಬೆಳೆಗೆ ರೈತರೆಲ್ಲರೂ ಬೆಳೆ ವಿಮೆ ಮಾಡಿಸಬೇಕು. ಇದರಿಂದ ಒಂದು ವೇಳೆ ಬೆಳೆ ಹಾನಿಯಾದಲ್ಲಿ ಬೆಳೆ ವಿಮೆ ಆಸರೆಯಾಗಲಿದೆ ಎಂದರು.

ಸಭೆಯಲ್ಲಿ ಪ್ರಗತಿಪರ ರೈತರು, ರೈತ ಮುಖಂಡರು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ

ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ...

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

Download Eedina App Android / iOS

X