ಬೀದರ್‌ | ಸ್ವಾತಂತ್ರ್ಯದ ಪ್ರಥಮ ಕಿಡಿ ಹೊತ್ತಿಸಿದ ಸುಭಾಷ ಚಂದ್ರ ಬೋಸ್ : ಓಂಪ್ರಕಾಶ ರೊಟ್ಟೆ

Date:

Advertisements

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟದ ಕಿಡಿ ಹೊತ್ತಿಸಿದವರಲ್ಲಿ ನೇತಾಜಿ ಸುಭಾಷ ಚಂದ್ರ ಬೋಸ್‌ ಅವರು ಪ್ರಥಮರಾಗಿದ್ದಾರೆ ಎಂದು ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಅಭಿಪ್ರಾಯಪಟ್ಟರು.

ಭಾಲ್ಕಿ ಪಟ್ಟಣದ ಸುಭಾಷ ಚಂದ್ರಬೋಸ್ ವೃತ್ತದಲ್ಲಿ ಗುರುವಾರ ನೇತಾಜಿ ಅಭಿಮಾನಿ ಬಳಗ ಹಾಗು ವಿಶ್ವಕ್ರಾಂತಿ ದಿವ್ಯಪೀಠದ ಸಹಯೋಗದಲ್ಲಿ ಆಯೋಜಿಸಿದ ನೇತಾಜಿ ಸುಭಾಷ ಚಂದ್ರಬೋಸ್ ಜಯಂತಿ ಮಹೋತ್ಸವದಲ್ಲಿ ಅವರು ಮಾತನಾಡಿದರು.

ಸುಭಾಷಚಂದ್ರ ಬೋಸ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಆಜಾದ್ ಹಿಂದ್ ಫೌಜ್ ಸ್ಥಾಪಿಸಿದರು. ದೇಶದ ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ ನೇತಾಜಿಯವರು ಇಂಗ್ಲೀಷರಿಗೆ ಸಿಂಹ ಸ್ವಪ್ನವಾಗಿದ್ದರು. ಅವರ ಹೋರಾಟದ ಫಲವಾಗಿಯೇ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಇಂದಿನ ಯುವ ಸಮೂಹ ಗಾಂಧೀಜಿ, ಚಂದ್ರಶೇಖರ್‌ ಆಜಾದ್‌, ನೇತಾಜಿ, ಭಗತ್‌ ಸಿಂಗ್‌ ಸೇರಿದಂತೆ ಅನೇಕ ಮಹಾತ್ಮರ ಆದರ್ಶಗಳು ಪಾಲಿಸಬೇಕುʼ ಎಂದು ತಿಳಿಸಿದರು.

Advertisements

ಭಾಲ್ಕಿ ಪುರಸಭೆ ಸದಸ್ಯ ಪಾಂಡುರಗ ಯಾದವರಾವ ಕನಸೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಸ್ವಾಮಿ ವಿವೇಕಾನಂದರ ವಿಚಾರಧಾರೆಗಳಿಂದ ಪ್ರಭಾವಿತರಾದ ನೇತಾಜಿ ಸುಭಾಷ ಚಂದ್ರಬೋಸ್ ಅವರು ಭಾರತದ ಸ್ವಾತಂತ್ರ್ಯಕ್ಕಾಗಿಯೇ ಹಗಲಿರಳು ಹೋರಾಡಿದರು.ಇಂತಹ ಮಹಾನ್ ವ್ಯಕ್ತಿಯ ತತ್ವಾದರ್ಶಗಳನ್ನು ನಾವು ಮುನ್ನಡೆಸಬೇಕುʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಪರಿಚಿತ ವಾಹನ ಡಿಕ್ಕಿ : ಮಹಾರಾಷ್ಟ್ರ ಮೂಲದ ಇಬ್ಬರ ಸಾವು

ಕಾರ್ಯಕ್ರಮದಲ್ಲಿ ಕನ್ನಡಪರ ಸಂಘಟನೆಯ ಮುಖಂಡ ಜಯರಾಜ ಕೊಳ್ಳಾ ಹಾಗೂ ಪ್ರಮುಖರಾದ ಗೋವಿಂದರಾವ ಬಿರಾದಾರ್‌, ಪ್ರಭು ಡಿಗ್ಗೆ,ಸಂತೋಷ ಹಡಪದ, ವೆಂಕಟರಾವ್‌ ಬಿರಾದರ್‌, ಇಂಧ್ರಜಿತ್‌ ಪಾಂಚಾಳ, ರಾಜೇಂದ್ರ ಪಾಟೀಲ್‌, ಸಂತೋಷ ಪಾಟೀಲ್‌, ದೀಪಕ ಸಿಂಧೆ, ಸಂತೋಷ ಬಿಜಿ ಪಾಟೀಲ್‌, ಪ್ರಭಾಕರ ಬೆಳಕೆರೆ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X