ಕೊಪ್ಪಳ | ನೇತಾಜಿ ಕನಸಿನ ಭಾರತ ನಿರ್ಮಾಣ ಇಂದಿನ ವಿದ್ಯಾರ್ಥಿಗಳ ಜವಾಬ್ದಾರಿ; ಗಂಗರಾಜ್ ಅಳ್ಳಳಿ

Date:

Advertisements

ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಕನಸಿನ ಭಾರತವನ್ನು ನಿರ್ಮಾಣ ಮಾಡುವುದು ಇಂದಿನ ವಿದ್ಯಾರ್ಥಿಗಳ ಜವಾಬ್ದಾರಿಯಾಗಿದೆ ಎಂದು ಕೊಪ್ಪಳದ ವಿದ್ಯಾರ್ಥಿ ಸಂಘಟನೆ ನಾಯಕ ಗಂಗರಾಜ ಅಳ್ಳಳಿ ಅಭಿಪ್ರಾಯಪಟ್ಟರು.

ಕೊಪ್ಪಳದ ಜಿಲ್ಲಾ ಕ್ರಿಡಾಂಗಣದಲ್ಲಿ ಎಐಡಿಎಸ್‌ಒ, ಎಐಎಂಎಸ್‌ಎಸ್ ಮತ್ತು ಎಐಡಿವೈಒ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128 ನೇ ಜನ್ಮ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನೇತಾಜಿಯವರ ಆದರ್ಶಗಳು ಇಂದಿಗೂ ಪ್ರಸ್ತುತ, ಇಂದಿನ ಯುವ ಸಮೂಹ ಒಟ್ಟಾಗಿ ಕೈ ಜೋಡಿಸಿ ಅವರ ಕನಸಿನ ಆದರ್ಶವಾದ ದೇಶವನ್ನು ಕಟ್ಟಬೇಕು. ಇದನ್ನು ಸಾಕಾರಗೊಳಿಸಲು ನಾವೆಲ್ಲರೂ ನೇತಾಜಿಯವರ ವಿಚಾರಗಳನ್ನು ಗಾಢವಾಗಿ ಅಭ್ಯಾಸ ಮಾಡಬೇಕು ಹಾಗೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಹೇಳಿದರು.

ಮಹಿಳಾ ಸಂಘಟನೆ ಜಿಲ್ಲಾ ಮುಖಂಡರಾದ ಶಾರದ ಗಡ್ಡಿ ಮಾತನಾಡಿ, “ಪ್ರಪಂಚದ ಇತಿಹಾಸದಲ್ಲಿಯೇ ವಿಶೇಷ ಎನಿಸುವ, ಮಹಿಳಾ ರೆಜಿಮೆಂಟನ್ನು ಸ್ಥಾಪನೆ ಮಾಡಿ, ಸ್ವತಂತ್ರ ಸಂಗ್ರಾಮದಲ್ಲಿ ಪುರುಷರಷ್ಟೇ ಸಮಾನವಾಗಿ ಮಹಿಳೆಯರೂ ಹೋರಾಡಬಲ್ಲರು ಎಂದು ತೋರಿಸಿದ ಖ್ಯಾತಿ ನೇತಾಜಿಯವರದ್ದು. ಅವರು ಸ್ಥಾಪಿಸಿದ ಐಎನ್ಎ ನೇತೃತ್ವದಲ್ಲಿ ನಡೆದ ರಾಜಿ ರಹಿತ ಹೋರಾಟ ಭಾರತಕ್ಕೆ ಸ್ವಾತಂತ್ರ್ಯ ಲಭಿಸುವಲ್ಲಿ ಮುಖ್ಯವಾದ ಪಾತ್ರ ವಹಿಸಿತ್ತು. ಅದೇ ರೀತಿ ನಾವುಗಳೆಲ್ಲರೂ ಸೇರಿ ಅವರ ಕನಸನ್ನು ಸಾಕಾರಗೊಳಿಸುವಲ್ಲಿ ಸಾಗಬೇಕು” ಎಂದು ಹುರಿದುಂಬಿಸಿದರು.

Advertisements

ಯುವಜನ ಸಂಘಟನೆಯ ಜಿಲ್ಲಾ ಮುಖಂಡ ದೇವರಾಜ್ ಹೊಸಮನಿ ಮಾತನಾಡಿ, “ನೇತಾಜಿ ಅವರ ಕನಸು ಶೋಷಣಾ ರಹಿತವಾದ ಸಮಾಜದ ಸ್ಥಾಪನೆ ಮಾಡುವುದಾಗಿತ್ತು. ಆದರೆ, ಇಂದು ಪ್ರಾಮಾಣಿಕವಾಗಿ ದುಡಿಯುವ ಜನರು ಬೀದಿಯಲ್ಲಿ ನಿಲ್ಲುವಂತಾಗಿದೆ. ಶಿಕ್ಷಣ, ಆರೋಗ್ಯ ಸೌಲಭ್ಯಗಳು ದುಬಾರಿಯಾಗಿವೆ. ನಿರುದ್ಯೋಗ ಹೆಚ್ಚುತ್ತಿದೆ. ಮತ್ತೊಂದೆಡೆ ಲೂಟಿಕೋರರು, ಭ್ರಷ್ಟರು, ಇನ್ನೊಬ್ಬರ ಶ್ರಮವನ್ನು ಲೂಟಿ ಹೊಡೆಯುವ ದೊಡ್ಡ ಮಾಲೀಕರು ಐಷಾರಾಮಿ ಜೀವನ ನಡೆಸುವಂತಹ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ. ಇದರ ವಿರುದ್ಧ ಯುವಜನರು, ವಿದ್ಯಾರ್ಥಿಗಳು ಪ್ರಜ್ಞಾವಂತ ನಾಗರಿಕರು ಹೋರಾಟಕ್ಕೆ ಮುನ್ನಡೆಯುವುದೇ ನಾವು ನೇತಾಜಿಯವರಿಗೆ ಸಲ್ಲಿಸುವ ನಿಜವಾದ ಗೌರವ” ಎಂದರು.

WhatsApp Image 2025 01 24 at 1.31.47 PM

ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್ ಮಾತನಾಡಿ, “ನೇತಾಜಿ ಅವರ ವಿಚಾರಗಳನ್ನು ಜಿಲ್ಲೆಯಾದ್ಯಂತ ವಿದ್ಯಾರ್ಥಿ ಯುವಕರಿಗೆ ತಿಳಿಸುವ ಕೆಲಸವನ್ನು ನಮ್ಮ ಸಂಘಟನೆಗಳು ನಿರಂತರವಾಗಿ ಮಾಡುತ್ತಿವೆ. ಎಲ್ಲಾ ಕಾರ್ಯಕ್ರಮಗಳು ಜನ ಬೆಂಬಲದಿಂದ ನಡೆಯುತ್ತಿವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ರಾತ್ರೋರಾತ್ರಿ ಕೆರೆ ಮಣ್ಣು ಕಳ್ಳತನ; ಗುತ್ತಿಗೆದಾರ ವಿಶ್ವನಾಥ ಕುಂಬಾರನ ವಿರುದ್ಧ ಸೂಕ್ತ ಕ್ರಮವಾಗುವುದೇ?

ಕಾರ್ಯಕ್ರಮದಲ್ಲಿ ಸದಾಶಿವ ಮುನಿರಾಬಾದ್, ಸುಭಾನ್ ನೀರಲಗಿ, ವಿದ್ಯಾರ್ಥಿ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು, ಕೊಪ್ಪಳ ನಾಗರಿಕರು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X