ಕೊಪ್ಪಳ ಜಿಲ್ಲೆಯಾದ್ಯಂತ 32 ಸಾವಿರಕ್ಕಿಂತಲೂ ಹೆಚ್ಚಿನ ನ್ಯಾಯಾಲಯ ಪ್ರಕರಣಗಳು ಬಾಕಿ ಇವೆ ಎಂದು ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ್ ಎಸ್ ದರಗದ ಹೇಳಿದರು.
ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ನೆನ್ನೆ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 8ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಈ ಅದಾಲತ್ನಲ್ಲಿ 6 ರಿಂದ 7 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ. ಸುಳ್ಳು ಪ್ರಕರಣಗಳನ್ನು ಹೊರತುಪಡಿಸಿ ಬ್ಯಾಂಕ್ ಸಾಲ, ಪಾರ್ಟಿಷನ್ ಸೂಟ್, ಪ್ರಿ ಲಿಟಿಗೇಶನ್ ಕೇಸ್, ಕೌಟುಂಬಿಕ ಕಲಹ ಸೇರಿದಂತೆ ಇತರೆ ಹಲವು ವಿಭಾಗಗಳ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಉಳಿದಂತೆ ಎಲ್ಲಾ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ನೇತಾಜಿ ಕನಸಿನ ಭಾರತ ನಿರ್ಮಾಣ ಇಂದಿನ ವಿದ್ಯಾರ್ಥಿಗಳ ಜವಾಬ್ದಾರಿ; ಗಂಗರಾಜ್ ಅಳ್ಳಳಿ
