ಕಲಬುರಗಿ | ಪರಿಸರ ಸಂರಕ್ಷಣೆ ಎಲ್ಲರ ಹೊಣೆ; ಸಂಜಯ ಪಾಟೀಲ

Date:

Advertisements

ಭವಿಷ್ಯದಲ್ಲಿ ಜೀವ ಸಂಕುಲದ ಉಳಿವು, ಬೆಳವಣಿಗೆಗಾಗಿ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ಕಲಬುರಗಿ ಜಿಲ್ಲೆಯ ಆದರ್ಶ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಸಂಜಯ ಪಾಟೀಲ ಅಭಿಪ್ರಾಯಪಟ್ಟರು.

ಆಳಂದ ಪಟ್ಟಣದ ಆದರ್ಶ ಶಾಲೆಯಲ್ಲಿ ಇಂದು ಇಕೋ ಕ್ಲಬ್ ವತಿಯಿಂದ ಏರ್ಪಡಿಸಿದ್ದ ʼಪರಿಸರ ಜಾಗೃತಿʼ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಅತೀ ವೃಷ್ಟಿ, ಅನಾವೃಷ್ಟಿ, ಜಾಗತಿಕ ತಾಪಮಾನ, ಭೂಕಂಪ, ಅಪಾಯಕಾರಿ ವೈರಸ್ ಹರಡುವಿಕೆಗೆ ಪರಿಸರದ ಅಸಮತೋಲನವೇ ಮುಖ್ಯ ಕಾರಣ. ಹಿಂದೆ ನಡೆದ ಸುನಾಮಿ, ಭೂಕಂಪಗಳಿಂದ ಆದ ಹಾನಿಯಿಂದ ಪರಿಸರ ಇನ್ನೂ ಚೇತರಿಸಿಕೊಳ್ಳಲಾಗಿಲ್ಲ. ಪ್ರಾಕೃತಿಕ ಸಂಪತ್ತು ಸಮೃದ್ಧವಾಗಿದ್ದರೆ ಮಾತ್ರ ನಾವೂ ಸುರಕ್ಷಿತರಾಗಿರುತ್ತೇವೆ” ಎಂದು ತಿಳಿಸಿದರು.

“ಗಿಡಮರಗಳ ಸಂರಕ್ಷಣೆ ಕಾರ್ಯ ಅರಣ್ಯ ಇಲಾಖೆ ಅಧಿಕಾರಿಗಳ ಜವಾಬ್ದಾರಿಗೆ ಮಾತ್ರ ಸೀಮಿತವಲ್ಲ. ಇಕೋ ಕ್ಲಬ್, ಹಸಿರು ಸೇನೆ, ಪರಿಸರ ಸಂಘಗಳ ಮೂಲಕವು ನಮ್ಮ ಸುತ್ತಲಿನ ಪ್ರಾಕೃತಿಕ ಸಂಪತ್ತು ಸಂವರ್ಧನೆಗೆ ಪೂರಕವಾಗುವಂತಹ ಚಟುವಟಿಕೆಗಳನ್ನು ಶಾಲಾ ಹಂತದಲ್ಲಿಯೇ ಕೈಗೊಂಡು ಮಕ್ಕಳಲ್ಲಿ ಪರಿಸರ ಸಂರಕ್ಷಣೆಯ ಪ್ರಾಮುಖ್ಯತೆ ಬೆಳೆಸುವುದು ಇಂದಿನ ದಿನಗಳಲ್ಲಿ ಅತ್ಯಗತ್ಯವಾಗಿದೆ” ಎಂದರು.

Advertisements

ಇಕೋ ಕ್ಲಬ್ ಸಂಯೋಜಕಿ ಕೆ ಸೀಮಂತನಿ ಮಾತನಾಡಿ, ಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ಗಿಡ ಮರ ಬೆಳೆಸುವುದು, ನೀರಿನ ಅಪವ್ಯಯ ತಡೆಯುವುದು ಹಾಗೂ ಸ್ವಚ್ಛತೆ ಬಗ್ಗೆ ಕಾಳಜಿ ಬೆಳೆಸಿಕೊಂಡು ಪರಿಸರ ಸ್ನೇಹಿಯಾದ ಜೀವನ ಶೈಲಿ ರೂಢಿಸಿಕೊಳ್ಳಬೇಕು” ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಕಲಬುರಗಿ | ವಿಜಯ ವಿದ್ಯಾಲಯದಲ್ಲಿ ಗುರುವಂದನಾ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಸೂರ್ಯಕಾಂತ ಕಾಂಬಳೆ, ಶಿಕ್ಷಕರಾದ ಸಿದ್ದಣ್ಣ ಮಾಹಿ, ಅಪ್ರೋಜಾ ಜರ್ದಿ, ಗೀತಾ ಬಲ್ಲಿದವ, ರಮೇಶ, ರಾಜೇಶ್ವರಿ ಲವಟೆ, ವಿಜಯಕುಮಾರ್, ಮಕ್ಕಳು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X