ಬೆಂಗಳೂರು | ಹೊಸಕರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ; ಅಧಿಕಾರಿಗಳ ಅಮಾನತು

Date:

Advertisements
  • ಅಧಿಕಾರಿಗಳನ್ನು ಅಮಾನತು ಮಾಡುವಂತೆ ತಾಕೀತು ಮಾಡಿದ್ದ ಡಿಕೆಶಿ
  • ಸೋಮವಾರ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಡಿಸಿಎಂ

ಬೆಂಗಳೂರಿನ ಹೊಸಕೆರೆಹಳ್ಳಿ ಕೆರೆಯ ಮಧ್ಯಭಾಗದಲ್ಲಿ ರಸ್ತೆ ನಿರ್ಮಿಸಲಾಗಿದ್ದು, ಕೆರೆ ಮೂಲ ರಚನೆಗೆ ಚ್ಯುತಿ ಉಂಟುಮಾಡಲಾಗಿದೆ. ಈ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ ಇಬ್ಬರು ಇಂಜಿನಿಯರ್‌ಗಳನ್ನು ಅಮಾನತುಗೊಳಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.

ಘನ ತ್ಯಾಜ್ಯ ನಿರ್ವಹಣೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಎಚ್.ಎಸ್ ಮೇಘಾ ಹಾಗೂ ಸಹಾಯಕ ಎಂಜಿನಿಯರ್ ಶಿಲ್ಪಾ ಅವರನ್ನು ಬಿಬಿಎಂಪಿ ಆಯುಕ್ತರು ಅಮಾನತುಗೊಳಿಸಿದ್ದಾರೆ.

ವಿಧಾನಸೌಧದಲ್ಲಿ ಬಿಬಿಎಂಪಿ ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೋಮವಾರ ಸಭೆ ನಡೆಸಿದ್ದಾರೆ. ಈ ವೇಳೆ, ಹೊಸಕೆರೆಹಳ್ಳಿ ಕೆರೆಯಲ್ಲಿ ರಸ್ತೆ ನಿರ್ಮಾಣಕ್ಕೆ ಕಾರಣರಾದವರ ಕುರಿತು ಮಾಹಿತಿ ಕೇಳಿದ್ದರು. ಅವರ ಪ್ರಶ್ನೆಗೆ ಉತ್ತರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದರು. ಅಧಿಕಾರಿಗಳ ವರ್ತನೆ ನೋಡಿದ ಡಿ.ಕೆ ಶಿವಕುಮಾರ್, ‘ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ತಕ್ಷಣವೇ ಅಮಾನತು ಮಾಡಬೇಕು’ ಎಂದು ಸೂಚನೆ ನೀಡಿದ್ದರು.

Advertisements

ಈ ಸುದ್ದಿ ಓದಿದ್ದೀರಾ?: ಜೂನ್‌ 12 ಅಥವಾ 14 ರಂದು ಸಿಇಟಿ ಪ್ರವೇಶ ಪರೀಕ್ಷೆಯ ಫಲಿತಾಂಶ

ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಿಕೊಡುವ ಉದ್ದೇಶದಿಂದ ಕೆರೆ ಮಧ್ಯೆ ರಸ್ತೆ ನಿರ್ಮಾಣದ ಯೋಜನೆ ರೂಪಿಸಿ, ರಸ್ತೆ ನಿರ್ಮಾಣ ಮಾಡಿದ್ದಾರೆ. ಯೋಜನೆ ರೂಪಿಸಿದ ಮತ್ತು ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳನ್ನು ವಜಾಗೊಳಿಸಬೇಕು ಎಂದು ಡಿ.ಕೆ ಶಿವಕುಮಾರ್‌ ತಾಕೀತು ಮಾಡಿದ್ದರು.

ಅದರಂತೆ, ಇಬ್ಬರು ಇಂಜಿನಿಯರ್‌ಗಳನ್ನು ಅಮಾನತುಗೊಳಿಸಿ ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X