ಮೈಕ್ರೋ ಫೈನಾನ್ಸ್‌ಗಳ ಹಾವಳಿ | ರೈತರ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ: ಮುಖ್ಯಮಂತ್ರಿ ಚಂದ್ರು

Date:

Advertisements

ರಾಜ್ಯದಲ್ಲಿ ಇತ್ತೀಚಿನ ಮೈಕ್ರೋ ಫೈನಾ‌ನ್ಸ್‌ಗಳ ವಸೂಲಿ ದಂಧೆಗಳಿಗೆ ರಾಜ್ಯದ ರೈತರು ಆತ್ಮಹತ್ಯೆ ಮಾರ್ಗವನ್ನು ಹಿಡಿದಿರುವುದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಹೊರಬೇಕು ಹಾಗೂ ಕೂಡಲೇ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, “ಅಕ್ರಮ ಕಂಪನಿಗಳು ಸ್ಥಳೀಯ ರಾಜಕಾರಣಿಗಳು ಹಾಗೂ ಪೊಲೀಸ್ ಇಲಾಖೆಯ ಕೃಪಾಕಟಾಕ್ಷದಿಂದಾಗಿ ರೈತಾಪಿ ಮಕ್ಕಳ ಮೇಲೆ ಯಾವುದೇ ಆರ್ ಬಿ ಐ ನಿಯಮಾವಳಿಗಳು ಹಾಗೂ ಈ ನೆಲದ ಕಾನೂನುಗಳನ್ನು ಉಲ್ಲಂಘಿಸಿ ಅಕ್ರಮ ವಸೂಲಿ, ಬೆದರಿಕೆ, ಅಪಮಾನ ದಂತಹ ಕ್ರಿಮಿನಲ್ ಮಾರ್ಗಗಳಿಂದ ಚಕ್ರ ಬಡ್ಡಿ ವಸೂಲಿ ಮಾಡುತ್ತಿರುವುದು ರಾಜ್ಯದಲ್ಲಿ ಪೊಲೀಸ್ ಇಲಾಖೆ ವೈಫಲ್ಯಗೊಂಡಿರುವುದರ ಸಂಕೇತವಾಗಿದೆ” ಎಂದು ಆರೋಪಿಸಿದ್ದಾರೆ.

“ಸ್ಥಳೀಯ ಸಹಕಾರಿ ಸಂಸ್ಥೆಗಳು ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಹಣಕಾಸು ನೆರವು ನೀಡದೆ ಕೇವಲ ಪ್ರಭಾವಿಗಳ- ಸ್ಥಳೀಯ ಶಾಸಕರುಗಳ ಬಿಗಿ ಮುಷ್ಟಿಯಲ್ಲಿ ಸಿಲುಕಿಕೊಂಡಿವೆ. ಮತ್ತೊಂದು ಕಡೆ ಸರ್ಕಾರದಿಂದ ರೈತಾಪಿ ವರ್ಗಗಳಿಗೆ ಬೆಳೆ ನಷ್ಟ ಪರಿಹಾರಗಳಿಗೆ ಪರಿಣಾಮಕಾರಿಯಾದಂತಹ ಯೋಜನೆಗಳು ತಲುಪದೇ ಅನಿವಾರ್ಯವಾಗಿ ರೈತರು ಸಾಲಕ್ಕಾಗಿ ಇಂತಹ ಅಕ್ರಮ ಫೈನಾನ್ಸ್ ಕಂಪನಿಗಳ ಮೊರೆ ಹೋಗಿ ತಮ್ಮ ಜೀವಗಳನ್ನೇ ಬಲಿ ಕೊಡುವಂತಹ ವಾತಾವರಣ ಹಾಗೂ ಸಂದರ್ಭಗಳು ರಾಜ್ಯದಲ್ಲಿ ಸೃಷ್ಟಿಯಾಗಿದೆ” ಎಂದಿದ್ದಾರೆ.

Advertisements

“ರಾಜ್ಯದ ಪೊಲೀಸ್ ಇಲಾಖೆ ಹಾಗೂ ಕೇಂದ್ರದ ಜಾರಿ ನಿರ್ದೇಶನಾಲಯ ಕಣ್ಮುಚ್ಚಿ ಕುಳಿತಿರುವುದು ಬೇಸರದ ಸಂಗತಿಯಾಗಿದೆ. ಆರಂಭದಲ್ಲಿ ಈ ಕಂಪನಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದ್ದಲ್ಲಿ ಈಗಾಗಲೇ ಆತ್ಮಹತ್ಯೆಗೆ ಶರಣಾಗಿರುವ ನೂರಾರು ರೈತರ ಜೀವವನ್ನು ಉಳಿಸಬಹುದಾಗಿತ್ತು. ಆದರೆ ಹಲವು ತಿಂಗಳುಗಳಿಂದ ಸರ್ಕಾರ ಹಾಗೂ ವಿಪಕ್ಷಗಳು ಇಲ್ಲಸಲ್ಲದ ರಾಜಕೀಯ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿಕೊಂಡು ಇಂದು ನೂರಾರು ರೈತರ ಆತ್ಮಹತ್ಯೆಗೆ ತಾವುಗಳೇ ನೇರ ಹೊಣೆ ಹೊರಬೇಕು” ಎಂದು ಆಗ್ರಹಿಸಿದ್ದಾರೆ.

ಈ ಕೂಡಲೇ ಕಾನೂನಿನ ಬಿಗಿ ಕುಣಿಕೆಯನ್ನು ಹಣಕಾಸು ಕಂಪನಿಗಳ ವಿರುದ್ಧ ಪ್ರಯೋಗಿಸಬೇಕು ಹಾಗೂ ಕೇಂದ್ರದ ಜಾರಿ ನಿರ್ದೇಶನಾಲಯಕ್ಕೆ ಕ್ರಮ ತೆಗೆದುಕೊಳ್ಳಲು ಶೀಘ್ರ ಶಿಫಾರಸ್ಸು ಮಾಡಿ ಮುಂಬರುವ ದಿನಗಳಲ್ಲಿ ರೈತರ ಆತ್ಮಹತ್ಯೆಗಳನ್ನು , ಶೋಷಣೆಗಳನ್ನು ತಪ್ಪಿಸಬೇಕು” ಎಂದು ಮುಖ್ಯಮಂತ್ರಿ ಚಂದ್ರು ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X