ಚಿತ್ರದುರ್ಗ | ರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆ

Date:

Advertisements

ಹೆಣ್ಣು ಮಗುವಿಗೆ ಶಿಕ್ಷಣ, ಆರೋಗ್ಯ, ಸಮಾನತೆ ಹಾಗೂ ಜಾಗೃತಿ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆ

ಹೆಣ್ಣು ಮಗುವಿಗೆ ಶಿಕ್ಷಣ, ಆರೋಗ್ಯ, ಸಮಾನತೆ ಹಾಗೂ ಜಾಗೃತಿ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಘೋಷಣೆ ಮಾಡಿ ಅನುಷ್ಠಾನಕ್ಕೆ ತರಲಾಗಿದೆ ಎಂದು ಚಿತ್ರದುರ್ಗದ ಬಿಆರ್‌ಸಿ ಅಧಿಕಾರಿ ಸಂಪತ್ ಕುಮಾರ್ ಹೇಳಿದರು.

ಚಿತ್ರದುರ್ಗದ ವಿಮುಕ್ತಿ ವಿದ್ಯಾಸಂಸ್ಥೆ, ನಕ್ಷತ್ರ ಬಾಲಕಿಯರ ಪಾರ್ಲಿಮೆಂಟ್ ಸಂಘಟನೆಗಳ ನೇತೃತ್ವದಲ್ಲಿ ಬಿಆರ್‌ಸಿ ಕಚೇರಿ ಮುಂಭಾಗ ರಾಷ್ಟ್ರೀಯ ಹೆಣ್ಣುಮಗು ದಿನಾಚರಣೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

Advertisements

“ಮಹಿಳೆಯರಿಗೆ ವಿಶೇಷವಾಗಿ ಹೆಣ್ಣು ಮಗುವಿಗೆ ಕಾನೂನಾತ್ಮಕವಾದ ರಕ್ಷಣೆ, ಸಮಾನ ನ್ಯಾಯವನ್ನು ಕಲ್ಪಿಸುವುದಾಗಿದೆ. ಸರ್ಕಾರದಿಂದ ಶಾಲಾ ಮಟ್ಟದಲ್ಲಿ ಮಕ್ಕಳ ಪಾರ್ಲಿಮೆಂಟ್‌ಗಳಂತಹ ಮಕ್ಕಳ ಸಭೆಗಳನ್ನು ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವಂತಹ ಕಾರ್ಯವನ್ನು ನಡೆಸಲಾಗುತ್ತದೆ” ಎಂದು ನುಡಿದರು.

ವಿಮುಕ್ತಿ ವಿದ್ಯಾ ಸಂಸ್ಥೆಯ ಅಧ್ಯಕ್ಷೆ ಅನ್ನಪೂರ್ಣ ವಿಶ್ವಸಾಗರ್ ಮಾತನಾಡಿ, “ಬಾಲಕಿಯರ ಹಕ್ಕುಗಳನ್ನು ಜಾಗೃತಿ ಮೂಡಿಸಲು ಮತ್ತು ಅರಿವು ಉಂಟುಮಾಡಲು ಜಾಗೃತಿ ಜಾಥಾ ಮಾಡಲಾಗುತ್ತಿದೆ” ಎಂದು ಹೇಳಿದರು.

ಕರ್ನಾಟಕ ಶಾಂತಿ ಮತ್ತು ಸೌಹಾರ್ದ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್ ಕುಮಾರ್ ಮಾತನಾಡಿ, “2009ರ ಜನವರಿ 24ರಂದು ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯನ್ನು ಘೋಷಣೆ ಮಾಡುವ ಮುಖಾಂತರ ಹೆಣ್ಣು ಮಕ್ಕಳಿಗೆ ಶಾಲಾ, ಕಾಲೇಜುಗಳಲ್ಲಿ ಉತ್ತಮ ಶಿಕ್ಷಣ, ಆರೋಗ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಅವಕಾಶ ಕಲ್ಪಿಸುವುದು ದಿನಾಚರಣೆಯ ಉದ್ದೇಶವಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಸುನೀಲ್ ಅಪಹರಣ, 3 ಕೋಟಿ ರೂ.ಗೆ ಬೇಡಿಕೆ

ಕಾರ್ಯಕ್ರಮಕ್ಕೂ ಮುನ್ನ ಹಳೇ ಮಾಧ್ಯಮಿಕ ಶಾಲಾ ಮೃೆದಾನದಿಂದ ಜನಜಾಗೃತಿ ಜಾಥಾ ಮೂಲಕ ತೆರಳಿದ ವಿದ್ಯಾರ್ಥಿಗಳು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಹೂಮಾಲೆ ಹಾಕಿದ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, “ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಪ್ಯಾಡ್‌ಗಳನ್ನು ವಿತರಣೆ ಮಾಡಬೇಕು ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ಶೌಚಾಲಯಗಳನ್ನು ನಿರ್ಮಾಣ ಮಾಡಬೇಕು” ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಜನಜಾಗೃತಿ ಜಾಥಾದಲ್ಲಿ ವಿಮುಕ್ತಿ ವಿದ್ಯಾ ಸಂಸ್ಥೆಯ ನಿರ್ದೇಶಕ ಆರ್ ವಿಶ್ವ ಸಾಗರ್, ಬೀಬಿಜಾನ್, ನಾಗರತ್ನಮ್ಮ ಅರಣ್ಯ ಸಾಗರ್, ಪೃಥ್ವಿರಾಜ್ ಮತ್ತು ವಿವಿಧ ಶಾಲೆಗಳ ಹೆಣ್ಣು ಮಕ್ಕಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X