ರಾಯಚೂರು | ಮೈಕ್ರೋ ಫೈನಾನ್ಸ್ ರಿಕವರಿ ಏಜೆಂಟ್ ಹೆಸರಿನಲ್ಲಿ ವಂಚನೆ; ನಾಲ್ವರ‌ ಬಂಧನ

Date:

Advertisements

ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ರೈತನಿಂದ ಹಣ ವಸೂಲಿ ಮಾಡಲು ತೊಡಗಿದ್ದ ಆರೋಪದ ಮೇಲೆ ರಾಯಚೂರು ಗ್ರಾಮೀಣ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿಸಿದ ಆರೋಪಿಗಳನ್ನು ಫಯಾಜ್, ಶೇಖ್ ಎಂ ಡಿ ಆಯುಬ್, ಸೈಯದ್ ಶಹಬಾಜ್ ಅಹ್ಮದ್, ಅರೋನ್ ರಶೀದ್ ಎಂದು ಗುರುತಿಸಲಾಗಿದೆ.

ಆರೋಪಿಗಳ ಪೈಕಿ ಓರ್ವ ಬಜಾಜ್ ಫೈನಾನ್ಸ್ ರಿಕವರಿ ಸಿಬ್ಬಂದಿಯಾಗಿರುವ ಶೇಕ್ ಎಂ ಡಿ ಅಯುಬ್ ಮೂರು ಜನರೊಂದಿಗೆ ಸೇರಿ ಮೊಬೈಲ್ ಆ್ಯಪ್‌ನಲ್ಲಿ ಫೈನಾನ್ಸ್‌ಗಳ ಸಾಲ ಬಾಕಿ ಇರುವವರನ್ನು ಗುರುತಿಸಿ, ಟಾರ್ಗೆಟ್ ಮಾಡುತ್ತಿದ್ದರು. ರಸ್ತೆ ಮಧ್ಯದಲ್ಲೇ ಬೈಕ್, ವಾಹನಗಳನ್ನು ಅಡ್ಡಗಟ್ಟಿ ಸಾಲ ತೀರಿಸುವಂತೆ ಬೆದರಿಕೆ ಹಾಕುತ್ತಿದ್ದರು ಎಂದು ಹೇಳಲಾಗಿದೆ.

Advertisements
1001882473

ಪ್ರಕರಣದ ಹಿನ್ನೆಲೆ: ದೂರುದಾರ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುಂಡ್ಲೂರು ಗ್ರಾಮದ ಫಯಾಜ್ ಜನವರಿ 17ರಂದು ರಾಯಚೂರಿನ ಮಾರುಕಟ್ಟೆಯಲ್ಲಿ ಹತ್ತಿ ಮಾರಾಟ ಮಾಡಿ ಊರಿಗೆ ಹೋಗುವಾಗ ಯರಮರಸ್ ಸಮೀಪ‌ ಮಹೇಂದ್ರ ಪಿಕಪ್‌ ಗಾಡಿಯನ್ನು ಅಡ್ಡಗಟ್ಟಿದ ಆರೋಪಿಗಳು, ʼನಿಮ್ಮ ಫೈನಾನ್ಸ್ ಹಣ ಬಾಕಿ ಇದೆ ಕಟ್ಟಿ ಗಾಡಿ ವಾಪಸ್ ತಗೊಂಡು ಹೋಗಿʼ ಎಂದು ಮಹೇಂದ್ರ ಪಿಕಪ್ ತೆಗೆದುಕೊಂಡು ಹೋಗಿದ್ದಾರೆ.

1001882561

ಫಯಾಜ್ ಅವರು ತಮ್ಮ ಊರಿಗೆ ಹೋಗಿ‌ ಶಹಪುರದಲ್ಲಿನ ಕನಕದುರ್ಗ ಫೈನಾನ್ಸ್ ಕಂಪನಿಗೆ ಜನವರಿ 21ರಂದು ತಮ್ಮ ಲೋನ್ ಬಾಕಿ ಹಣ ₹56,750 ಕಟ್ಟಿ ಮರಳಿ ರಾಯಚೂರಿಗೆ ಬಂದಿದ್ದಾರೆ. ರಾಯಚೂರಿನ ಚಂದ್ರಬಂಡಾ ರಸ್ತೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬಳಿ ನಿಂತ ಆರೋಪಿಗಳು ಮಹೇಂದ್ರ ಪಿಕಪ್ ನೀಡದೆ ಫಯಾಜ್ ಅವರಿಗೆ ಜೀವಬೆದರಿಕೆ ಹಾಕಿ ₹12,000 ಕೇಳಿ ಬೆದರಿಕೆ ಹಾಕಿದ್ದಾರೆ. ಜನವರಿ 22ರಂದು ಫಯಾಜ್ ಅವರು ರಾಯಚೂರು ಗ್ರಾಮೀಣ‌ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪಿಎಸ್ಐ ಪ್ರಕಾಶ ಡಂಬಲ ನೇತೃತ್ವದ ತಂಡ ತನಿಖೆ ನಡೆಸಿ ಜನವರಿ 23ರಂದು ಆರೋಪಿಗಳನ್ನು ಬಂಧಿಸಿದ್ದಾರೆ.

ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಒಂದೆಡೆಯಾದರೆ, ಇನ್ನೊಂದು ಕಡೆ ನಕಲಿ ಸಾಲ ರಿಕವರಿ ತಂಡ ವಸೂಲಿ ದಂಧೆ ನಡೆಸಿರುವುದು ಬೆಳಕಿಗೆ ಬಂದಿದೆ. ಫೈನಾನ್ಸ್ ಸಾಲ ರಿಕವರಿ ತಂಡದ ಹೆಸರಲ್ಲಿ ಕಿರುಕುಳ ನೀಡುತ್ತಿದ್ದ ನಾಲ್ವರು ಆರೋಪಿಗಳನ್ನು ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

1001882477
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X