ವಿಜಯಪುರ | ಕಾನೂನು ಅರಿವು, ಹಕ್ಕುಗಳ‌ ಬಗ್ಗೆ ಜ್ಞಾನ ಹೊಂದುವುದು ಅಗತ್ಯ: ಡಿವೈಎಸ್‌ಪಿ ಬಲ್ಲಪ್ಪ ನಂದಗಾಂವ್

Date:

Advertisements

ವಿದ್ಯಾರ್ಥಿಗಳು ತಮ್ಮ ನಿತ್ಯದ ಓದಿನೊಂದಿಗೆ ಕಾನೂನು ಅರಿವು ಹಾಗೂ ಹಕ್ಕುಗಳ ಬಗ್ಗೆ ಜ್ಞಾನ ಹೊಂದಿರುವುದು ಅಗತ್ಯವಾಗಿದೆ ಎಂದು ಡಿವೈಎಸ್‌ಪಿ ಬಲ್ಲಪ್ಪ ನಂದಗಾಂವ್ ಹೇಳಿದರು.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದೌರ್ಜನ್ಯ ಸಮಿತಿಯ ಜಿಲ್ಲಾ ಸದಸ್ಯ ಬೀಜ್ಜುರೊ ಗ್ರಾಮದ ಮಲ್ಲು ತಳವಾರ ಅವರ ಮನವಿ ಮೇರೆಗೆ ಸ್ಪಂದಿಸಿ ಹಮ್ಮಿಕೊಂಡಿದ್ದ ಮಕ್ಕಳಿಗಾಗಿ ಕಾನೂನು ಅರಿವು ಹಾಗೂ ಹಕ್ಕುಗಳ ಕುರಿತು ಮಾತನಾಡಿದರು.

“ಕೇವಲ ಪುಸ್ತಕದ ಚಟುವಟಿಕೆಗಳಿಗೆ ಒತ್ತುಕೊಡದೆ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಕಾನೂನಿನ ಅರಿವು ಅಗತ್ಯವಿದೆ. ಇತ್ತೀಚಿನ ಬದಲಾದ ಸ್ಥಿತಿಯಲ್ಲಿ ಕಾನೂನು ಹಾಗೂ ಅನ್ಯಾಯದ ವಿರುದ್ಧ ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಪೋಕ್ಸೊ ಕಾಯಿದೆ. ಮೂಲಭೂತ ಹಕ್ಕುಗಳು, ಮಾನವ ಕಳ್ಳ ಸಾಗಣೆ, ಸಮಾಜದಲ್ಲಿ ಉಂಟಾಗುವ ಅಶಾಂತಿಯಂತ ಘಟನೆಗಳನ್ನು ತಡೆಯುವಲ್ಲಿ ಕಾನೂನಿನಲ್ಲಿ ಏನು ಹೇಳಲಾಗಿದೆ ಎನ್ನುವ ಅರಿವು ಮೂಡಿಸಿಕೊಳ್ಳಬೇಕು. ಮಕ್ಕಳು ಶೈಕ್ಷಣಿಕವಾಗಿಯೂ ಒಂದು ಹೆಜ್ಜೆ ಮುಂದುಬಂದು ಶಾಲೆಯಲ್ಲಿ ಹಿಂದಿನ ವರ್ಷದ ಫಲಿತಾಂಶದ ದಾಖಲೆಯನ್ನು ಮುರಿಯುತ್ತೇನೆ ಎನ್ನುವ ಛಲದಿಂದ ಮುನ್ನುಗ್ಗಬೇಕು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ತೋಟಗಾರಿಕೆ ಬೆಳೆ ಜತೆಗೆ ಉಪಕಸಬು ಮಾಡಿ ಆದಾಯ ವೃದ್ಧಿಸಿಕೊಳ್ಳಬೇಕು: ಡಾ. ರವೀಂದ್ರ ಬೆಳ್ಳಿ

ದೌರ್ಜನ್ಯ ಸಮಿತಿಯ ಜಿಲ್ಲಾ ಸದಸ್ಯರಾದ ಮಲ್ಲು ತಳವಾರ, ಗಿಮಠ, ಗೀತಾ ಹೂಗಾರ, ಎಸ್ ಎಚ್ ಲಮಾಣಿ, ಫಾರೂಕ್ ಇನಾಮ್‌ದಾರ್, ಎಸ್ ಐ ಸಜ್ಜನ, ಪ್ರಕಾಶ ಕಡಕೋಳ, ಎಸ್ ಪಿ ಹಂಡರಗಲ್, ಜೆ ಎನ್ ಚೌಧರಿ, ಕೆ ಆ‌ರ್ ಜಾಧವ್, ಎ ಕೆ ಹಿರೇಮಠ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X