ಕೊಪ್ಪಳ | ಕುಲುಷಿತ ನೀರು ಕುಡಿದು ವೃದ್ಧೆ ಸಾವು

Date:

Advertisements

ಕಲುಷಿತ ನೀರು ಸೇವಿಸಿ ಜನರು ಸಾವು-ನೋವು ಅನುಭವಿಸಿದ ಪ್ರಕರಣಗಳು ರಾಯಚೂರಿನಲ್ಲಿ ವರದಿಯಾಗುತ್ತಿದ್ದವು. ಇದೀಗ, ಕೊಪ್ಪಳ ಜಿಲ್ಲೆಯಲ್ಲಿಯೂ ಕಲುಷಿತ ನೀರಿನಿಂದ ಸಮಸ್ಯೆಗಳು ಎದುರಾಗುತ್ತಿದ್ದು, ಮಂಗಳವಾರ ಜಿಲ್ಲೆಯ ವೃದ್ಧೆಯೊಬ್ಬರ ಸಾವನ್ನಪ್ಪಿದ್ದಾರೆ.

ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ್ದ ಮೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. 10ಕ್ಕು ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಮಹಿಳೆಯನ್ನು ಹೊನ್ನಮ್ಮ (65) ಎಂದು ಗುರುತಿಸಲಾಗಿದೆ. ಕುಲುಷಿತ ನೀರು ಕುಡಿದ ಗ್ರಾಮಸ್ಥರಲ್ಲಿ ಹಲವರಿಗೆ ಮೂರು ದಿನಗಳ ಹಿಂದೆಯೇ ವಾಂದಿ-ಭೇದಿ ಕಾಣಿಸಿಕೊಂಡಿತ್ತು. ಅವರೆಲ್ಲರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ವೃದ್ಧ ಮಹಿಳೆ ಸಾವನ್ನಪ್ಪಿದ್ದಾರೆ.

Advertisements

ಗ್ರಾಮ ಪಂಚಾಯತ್ ಕಲುಷಿತ ನೀರು ಪೂರೈಕೆ ಮಾಡುತ್ತಿದೆ. ಪಂಚಾಯತಿ ಅಧಿಕಾರಿಗಳ ನಿರ್ಲಕ್ಷವೇ ಗ್ರಾಮದಲ್ಲಿ ಈ ಪರಿಸ್ಥಿತಿ ನಿರ್ಮಾಣವಾಗಲು ಕಾರಣವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ವೃದ್ಧ ಸಾವನ್ನಪ್ಪಿದ್ದು, ಹಲವರು ಆಸ್ಪತ್ರೆ ಸೇರಿದಿದ್ದಾರೆ. ಆದರೂ, ಯಾವುದೇ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿಲ್ಲ. ಪರಿಶೀಲನೆ ನಡೆಸಿಲ್ಲ ಎಂದು ಕಿಡಿಕಾರಿದ್ದಾರೆ.

ಸದ್ಯ ತಾಲೂಕು ಆಡಳಿತ ಎಚ್ಚೆತ್ತುಕೊಂಡಿದ್ದು, ಸರ್ಕಾರಿ ಆಸ್ಪತ್ರೆಗಲ್ಲಿ ಅಸ್ವಸ್ಥಗೊಂಡವರ ಚಿಕಿತ್ಸೆಗೆ ವ್ಯವಸ್ಥೆ ಮಾಡುತ್ತಿದೆ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X