‘ನನ್ನ ಕಿಡ್ನಿ ಮಾರಿದ್ದೇನೆ, ಮಕ್ಕಳ ಕಿಡ್ನಿಯನ್ನೂ ಮಾರುವಂತೆ ಒತ್ತಾಯಿಸುತ್ತಿದ್ದಾರೆ’; ಮೈಕ್ರೋಫೈನಾನ್ಸ್‌ ಕಿರುಕುಳ ಬಿಚ್ಚಿಟ್ಟ ಮಹಿಳೆ

Date:

Advertisements

ಮೈಕ್ರೋಫೈನಾನ್ಸ್‌ನಿಂದ ಪಡೆದಿದ್ದ ಸಾಲ ತೀರಿಸಲು ನಾನು ನನ್ನ ಕಿಡ್ನಿ ಮಾರಿದ್ದೇನೆ. ಆದರೂ, ಸಾಲದಾತರು ಸಾಲ ಮುಗಿದಿಲ್ಲ ಎನ್ನುತ್ತಿದ್ದಾರೆ. ನನ್ನ ಇಬ್ಬರು ಹೆಣ್ಣುಮಕ್ಕಳ ಕಿಡ್ನಿಗಳನ್ನೂ ಮಾರಾಟ ಮಾಡಿ, ಹಣ ಪಾವತಿಸುವಂತೆ ಮೈಕ್ರೋಫೈನಾನ್ಸ್‌ ಏಜೆಂಟರು ಒತ್ತಾಯಿಸುತ್ತಿದ್ದಾರೆ ಎಂದು ರಾಮನಗರ ಜಿಲ್ಲೆಯ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಜಿಲ್ಲೆಯ ಮಾಗಡಿ ಪಟ್ಟದ ನಿವಾಸಿ, ಕೃಷಿ ಕಾರ್ಮಿಕ ಮಹಿಳೆ ಗೀತಾ ಅವರು ಮೈಕ್ರೋಫೈನಾನ್ಸ್‌ ನೀಡುತ್ತಿರುವ ಕಿರುಕುಳದ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. “2013ರಲ್ಲಿ ತನ್ನ ಪತಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆಗ, ಮೈಕ್ರೋಫೈನಾನ್ಸ್‌ ನಡೆಸುತ್ತಿದ್ದ ಮಂಜುನಾಥ್ ಎಂಬಾತ ತಮಗೆ 2.5 ಲಕ್ಷ ರೂ. ಸಾಲ ನೀಡಿದ್ದರು. ಆದರೆ, ಚಿಕಿತ್ಸೆ ಫಲಿಸದೆ ತಮ್ಮ ಪತಿ ಸಾವನ್ನಪ್ಪಿದರು. ಜೀವನ ನಡೆಸುವುದೇ ಕಷ್ಟವಾಗಿತ್ತು. ಹೀಗಿದ್ದರೂ, ಕಷ್ಟದಿಂದ ದುಡಿತು ಇಬ್ಬರು ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿಸಿ, ಮದುವೆ ಮಾಡಿದ್ದೇನೆ” ಎಂದು ಮಹಿಳೆ ಹೇಳಿದ್ದಾರೆ.

“ಸಾಲ ನೀಡಿದ್ದ ಮಂಜುನಾಥ್ ಸಾಲ ಮರುಪಾವತಿ ಮಾಡುವಂತಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ಸಾಲ ತೀರಿಸಲು ಕಿಡ್ನಿ ಮಾರುವಂತೆ ಒತ್ತಾಯಿಸಿದರು. ಅವರೇ ಆಸ್ಪತ್ರೆಗೆ ಕರೆದೊಯ್ದು ಕಡ್ನಿ ಮಾರಿಸಿದರು. ಮೂರು ವರ್ಷಗಳ ಹಿಂದೆ, ನನ್ನ ಒಂದು ಕಿಡ್ನಿಯನ್ನು 2.5 ಲಕ್ಷ ರೂ.ಗೆ ಮಾರಾಟ ಮಾಡಿ, ಸಾಲ ಮರುಪಾವತಿ ಮಾಡಿದ್ದೇನೆ. ಆದರೆ, ಈಗ ಕೆಲವು ವಾರಗಳಿಂದ ಮಂಜುನಾಥ್ ಮತ್ತೆ ಹಣ ಪಾವತಿ ಮಾಡಬೇಕೆಂದು ಕೇಳುತ್ತಿದ್ದಾರೆ” ಎಂದು ಮಹಿಳೆ ಆರೋಪಿಸಿದ್ದಾರೆ.

Advertisements

“ನಾನು ಇನ್ನಾವುದೇ ಹಣವನ್ನು ನೀಡುವುದಿಲ್ಲ ಎಂದು ಪ್ರತಿಭಟಿಸಿದೆ. ಆದರೆ, ಅವರು ನನ್ನ ಇಬ್ಬರು ವಿವಾಹಿತ ಹೆಣ್ಣುಮಕ್ಕಳಿಗೆ ಅವರ ಕಿಡ್ನಿಯನ್ನು ಮಾರಾಟ ಮಾಡಲು ಮನವೊಲಿಸುವಂತೆ ಒತ್ತಡ ಹಾಕುತ್ತಿದ್ದಾರೆ. ಆದರೆ, ನಾನು ಅವರೊಂದಿಗೆ ಜಗಳ ಮಾಡಿದ್ಧೇನೆ. ಇನ್ನಾವುದೇ ಸಾಲವೂ ಉಳಿದಿಲ್ಲವೆಂದು ನಿರಕಾರಿಸಿದ್ದೇನೆ” ಎಂದು ಮಹಿಳೆ ಹೇಳಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X