ಬೆಳಗಾವಿ | ಸಾರ್ವಜನಿಕರ ಗಮನ ಸೆಳೆದ ಬಾಲಕಿಯ ಗಣರಾಜ್ಯೋತ್ಸವ ಭಾಷಣ

Date:

Advertisements

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಅಂಬೇಡ್ಕರವರ ಸಮ ಸಮಾಜದ ಪರಿಕಲ್ಪನೆ ಮತ್ತು ಐಕ್ಯತೆಯ ಕುರಿತು ಯುಕೆಜಿ ವಿಧ್ಯಾರ್ಥಿನಿ ಮಾತನಾಡಿ ನೆರೆದಿದ್ದ ಸಾರ್ವಜನಿಕರ ಗಮನ ಸೆಳೆದಳು.

ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉತ್ತೇಜನ ಕನ್ನಡ ಪ್ರಾಥಮಿಕ ಶಾಲೆಯ ಯುಕೆಜಿ ವಿಧ್ಯಾರ್ಥಿನಿ ಚೇತನಾ ಕಟಗಿ ಡಾ|| ಬಿ.ಆರ್ ಅಂಬೇಡ್ಕರ್ ಅವರ ಸಮ ಸಮಾಜ, ದೇಶದ ಐಕ್ಯತೆ, ಸೌಹಾರ್ದತೆಯ ಕುರಿತು ಮಾತನಾಡಿದಳು

ನಮ್ಮ ದೇಶದ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ವ್ಯವಸ್ಥಿತವಾದ ಆಡಳಿತ ನೀಡುವುದು ಕಷ್ಟವಾಗಿತ್ತು ಕೋಮುವಾದ,ಬಡತನ‌,ಸಾಮಾಜಿಕ ಅಸಮಾನತೆಗಳು ನಮ್ಮ ದೇಶಕ್ಕೆ ಸವಾಲಾಗಿದ್ದವು ಈ ಸಂದರ್ಭದಲ್ಲಿ ದೇಶಕ್ಕೆ ಸಮ ಸಮಾಜ ಮತ್ತು ಐಕ್ಯತೆಯನ್ನು ಎತ್ತಿ ಹಿಡಿಯುವ ಸಂವಿಧಾನವನ್ನು ಡಾ.ಅಂಬೇಡ್ಕರ್ ಅವರು 3 ವರ್ಷಗಳ ಕಾಲ ಅಧ್ಯಯನ ಮಾಡಿ 1950 ಜನೆವರಿ 26ರಂದು ನಮ್ಮ ದೇಶಕ್ಕೆ ಶ್ರೇಷ್ಠ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ್ದಾರೆ

Advertisements

ನಮ್ಮ ದೇಶದಲ್ಲಿ ಇಂದಿಗೂ ನಾವು ಭ್ರಷ್ಟಾಚಾರ, ಬಡತನ ಮತ್ತು ಕೋಮುವಾದ, ಅಸಮಾನತೆಯ ವಿರುದ್ಧ ಹೋರಾಡುವಂತಹ ಪರಿಸ್ಥಿತಿ ಇದೆ ಇವುಗಳು ನಮ್ಮ ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತಿವೆ. ಆದರೂ ನಾವುಗಳೆಲ್ಲ ಒಂದಾಗಿ ದೇಶದಲ್ಲಿರುವ ಅನೇಕ ಸಮಸ್ಯೆಗಳ ವಿರುದ್ಧ ಹೋರಾಡಿ ಬಲಿಷ್ಠ ಭಾರತವನ್ನು ನಿರ್ಮಿಸೋಣ ಎಂದು ಭಾಷಣ ಮಾಡುವ ಮೂಲಕ ಸಾರ್ವಜನಿಕರಿಗೆ ಸೌಹಾರ್ದತೆ,ಮತ್ತು ಸಮ ಸಮಾಜ ನಿರ್ಮಾಣದ ಕುರಿತಾಗಿ ಅರಿವು ಮೂಡಿಸಿದಳು.

ಈ ಸಂದರ್ಭದಲ್ಲಿ ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಉತ್ತೇಜನ ಶಾಲೆಯ ವಿಧ್ಯಾರ್ಥಿಗಳು ಹಾಗೂ ಶಿಕ್ಷಕ ಸಿಬ್ಬಂದಿಗಳು ಮತ್ತು ಸಾಲಾಪೂರ ಗ್ರಾಮ ಪಂಚಾಯತ ಹಾಗೂ ಪಿಕೆಪಿಎಸ್‌, ಎಸ್ ಡಿ ಎಮ್ ಸಿ ಅಧ್ಯಕ್ಷರು ಸದಸ್ಯರು,ಮತ್ತು ಸಾಲಾಪೂರ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ : ನಾಳೆ ಶಾಲಾ ಕಾಲೇಜು ರಜೆ

ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ನಾಳೆ ಮಂಗಳವಾರ ರಜೆ...

Download Eedina App Android / iOS

X