ಸಾಲ ತೀರಿಸಲು ಪೂರಿ-ಸಬ್ಜಿ ಮಾರಾಟ ಮಾಡಿದ್ದೇನೆ: ಟೀಮ್ ಇಂಡಿಯಾ ಮಾಜಿ ಆಟಗಾರ

Date:

Advertisements

ಭಾರತೀಯ ಕ್ರಿಕೆಟ್‌ ತಂಡದಲ್ಲಿ ಸೇರಿ, ಯಾವುದಾದರು ಒಂದು ಸರನಿಯಲ್ಲಿ ಆಟವಾಡಿದರೆ ಸಾಕು ತಮ್ಮ ಇಡೀ ಜೀವನವೇ ಸೆಟಲ್ ಆಗಿಬಿಡುತ್ತದೆ ಎಂಬ ಮಾತುಗಳು ಕೇಳಿಬರುತ್ತವೆ. ಆದರೆ, ಹಲವಾರು ವರ್ಷಗಳ ಕಾಲ ಟೀಮ್‌ ಇಂಡಿಯಾದಲ್ಲಿ ಆಟವಾಡಿದರೂ, ಉತ್ತಮ ಬದುಕು ಕಟ್ಟಿಕೊಳ್ಳಲಾಗದೆ, ಮಾಡಿದ್ದ ಸಾಲ ತೀರಿಸಲು ಪೂರಿ-ಸಬ್ಜಿ ವ್ಯಾಪಾರ ಮಾಡಿರುವ ಕತೆ ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಮನೋಜ್ ತಿವಾರಿ ಅವರದ್ದು.

ಮನೋಜ್‌ ತಿವಾರಿ ಅವರು ಟೀಮ್‌ ಇಂಡಿಯಾದಲ್ಲಿ ಉತ್ತಮ ನೆಲೆಯನ್ನೂ ಕಂಡಿದ್ದ ಆಟಗಾರ. ಅವರು ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಗೌತಮ್ ಗಂಭೀರ್‌ ಸೇರಿದಂತೆ ಹಲವು ಸ್ಟಾರ್‌ ಆಟಗಾರರೊಂದಿಗೆ ಸ್ಕ್ರೀಸ್‌ ಹಂಚಿಕೊಂಡಿದ್ದಾರೆ. ಟೀಮ್‌ ಇಂಡಿಯಾದಲ್ಲಿ 12 ಏಕದಿನ ಪಂದ್ಯಗಳು ಮತ್ತು ಮೂರು ಟಿ20 ಪಂದ್ಯಗಳನ್ನು ಆಡಿದ್ದಾರೆ. ದಿಗ್ಗಜ ಆಟಗಾರರೊಂದಿಗೆ ಕ್ರೀಸ್ ಶೇರ್ ಮಾಡಿಕೊಂಡಿದ್ದ ಮನೋಜ್ ತಿವಾರಿ ತಮ್ಮ ಸಂಕಷ್ಟದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಮನೋಜ್ ತಿವಾರಿ ಭಾರತದ ಪರ 12 ಏಕದಿನ ಮತ್ತು ಮೂರು ಟಿ 20 ಪಂದ್ಯಗಳನ್ನು ಆಡಿದ್ದಾರೆ. ಮಾತ್ರವಲ್ಲದೆ, 2006-07ರ ರಣಜಿ ಟ್ರೋಫಿ ಸರಣಿಯಲ್ಲಿ ಬಂಗಾಳ ತಂಡವನ್ನು ಮುನ್ನಡೆಸುವ ಜೊತೆಗೆ 99.50 ಸರಾಸರಿಯಲ್ಲಿ 796 ರನ್ ಗಳಿಸಿದ್ದರು.

ಆದರೂ, ಹೆಚ್ಚು ಸಮಯ ಭಾರತೀಯ ತಂಡದಲ್ಲಿ ಉಳಿಯದ ತಿವಾರಿ, ತಮ್ಮ ಮತ್ತು ಕುಟುಂಬದ ಸಾಲವನ್ನು ತೀರಿಸಲು ಕ್ರಿಕೆಟ್‌ ಆಡುವುದರ ಜೊತೆಗೆ ಪೂರಿ-ಸಬ್ಜಿಯನ್ನು ಮಾರಾಟ ಮಾಡಿದ್ದೇನೆಂದು ಹೇಳಿಕೊಂಡಿದ್ದಾರೆ.

Advertisements

ಖಾಸಗಿ ಯೂಟ್ಯೂಬ್ ಚಾನೆಲ್‌ ಜೊತೆ ತಮ್ಮ ಜೀವನ ಬಗ್ಗೆ ಮಾತನಾಡಿರುವ ತಿವಾರಿ, ”ಅವು ಕಷ್ಟಕರ ದಿನಗಳಾಗಿದ್ದವು. ನಾನು ಸಾಲ ತೀರಿಸಬೇಕೆಂಬುದು ಯಾವಾಗಲೂ ಮನಸ್ಸಿನಲ್ಲಿತ್ತು. ಕೋಲ್ಕತ್ತಾದಲ್ಲಿ ನಮ್ಮ ಹೋಟೆಲ್ ಇದೆ. ಅಲ್ಲಿ ನಾನು ಪೂರಿ-ಸಬ್ಜಿ ಮಾರಾಟ ಮಾಡುತ್ತಿದ್ದೆ. ಕೆಲವೊಮ್ಮೆ ಜನರು ಆಹಾರ ತಿಂದು, ಹಣ ಕೊಡದೆ ಹೋಗಿಬಿಡುತ್ತಿದ್ದರು” ಎಂದು ಹೇಳಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X