ಧಾರವಾಡ | ಚುನಾವಣೆ ಕಾವು; ಉಚಿತ ವಸ್ತು, ನಗದು ಸಾಗಾಟ ತಡೆಯಲು ಚೆಕ್‌ಪೋಸ್ಟ್ ಆರಂಭ

Date:

Advertisements
  • ಪ್ರಮುಖ ಪಟ್ಟಣ, ನಗರಗಳ ಪ್ರವೇಶ ದ್ವಾರಗಳಲ್ಲಿ ಚೆಕ್‌ಪೋಸ್ಟ್‌ ಆರಂಭ
  • ತೇಗೂರು ಚೆಕ್‌ಪೋಸ್ಟ್ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ 53 ಲಕ್ಷ ರೂ. ವಶ

ಚುನಾವಣೆ ಸಂದರ್ಭದಲ್ಲಿ ಲೆಕ್ಕಕ್ಕೆ ಸಿಗದ ಹಣ, ಅಕ್ರಮ ಮದ್ಯ ಮತ್ತು ಉಚಿತ ಸಾಮಗ್ರಿಗಳ ಹರಿವನ್ನು ತಡೆಯಲು ಧಾರವಾಡ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆದಿದೆ.

ಜಿಲ್ಲೆಯಲ್ಲಿ ಏಳು ಪೊಲೀಸ್ ಚೆಕ್ ಪೋಸ್ಟ್‌ಗಳು ಮತ್ತು ಐದು ಜಂಟಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ತಿಳಿಸಿದ್ದಾರೆ.

“ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸ್ ಸಿಬ್ಬಂದಿ ಇರಲಿದ್ದು, ಜಂಟಿ ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸ್, ಕಂದಾಯ, ಆರ್‌ಟಿಒ, ವಾಣಿಜ್ಯ ತೆರಿಗೆ, ಅಬಕಾರಿ ಮತ್ತು ಇತರ ಇಲಾಖೆಗಳ ಸಿಬ್ಬಂದಿ ಇರುತ್ತಾರೆ. ಅವರು ಜಿಲ್ಲೆಯ ಪ್ರಮುಖ ಪಟ್ಟಣಗಳು ಮತ್ತು ನಗರಗಳ ಪ್ರವೇಶ ದ್ವಾರಗಳಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಅವರ ಸ್ಥಳವು ಕಾಲಕಾಲಕ್ಕೆ ಬದಲಾಗುತ್ತದೆ” ಎಂದು ಎಸ್‌ಪಿ ಹೇಳಿದರು.

Advertisements

“ಚೆಕ್‌ಪೋಸ್ಟ್‌ಗಳ ಮೂಲಕ ಹಾದುಹೋಗುವ ವಾಹನಗಳನ್ನು ಪರಿಶೀಲಿಸಲು ಈಗಾಗಲೇ ಸಿಬ್ಬಂದಿಗಳು ಕಾರ್ಯ ಪ್ರಾರಂಭಿಸಿದ್ದು, ನಿಷಿದ್ಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಶುಕ್ರವಾರ ರಾತ್ರಿ ತೇಗೂರು ಚೆಕ್‌ಪೋಸ್ಟ್ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ 53 ಲಕ್ಷ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

“ಚುನಾವಣಾ ಆಯೋಗವು ರಾಜ್ಯ ವಿಧಾನಸಭೆಗೆ ಅಧಿಕೃತವಾಗಿ ಚುನಾವಣೆಗಳನ್ನು ಘೋಷಿಸಿದ ನಂತರ ಎಲ್ಲ ವಾಹನಗಳನ್ನು ಪರಿಶೀಲಿಸಲಾಗುವುದು. ಬಳಿಕ ಈ ಅಭಿಯಾನವನ್ನು ತೀವ್ರಗೊಳಿಸಲಾಗುವುದು” ಎಂದು ಎಸ್‌ಪಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಜೆಡಿಎಸ್ ಯಾತ್ರೆಯಲ್ಲಿ ಉಳಿದ ಆಹಾರ ಸೇವಿಸಿ…

“ಅಬಕಾರಿ ನಿಯಮಗಳು ವೈಯಕ್ತಿಕ ಬಳಕೆಗಾಗಿ ಹಲವು ಬ್ರಾಂಡ್‌ಗಳ ಮದ್ಯವನ್ನು ಸಾಗಿಸಲು ನಿರ್ದಿಷ್ಟ ಪ್ರಮಾಣವನ್ನು ಸೂಚಿಸುತ್ತವೆ. ನಿಗದಿತ ಪ್ರಮಾಣದ ಮಿತಿಯನ್ನು ಮೀರಿದ್ದರೆ, ಅಂತಹ ಸರಕನ್ನು ವಶಪಡಿಸಿಕೊಕೊಳ್ಳಲಾಗುತ್ತದೆ” ಎಂದು ಎಸ್‌ಪಿ ಸ್ಪಷ್ಟಪಡಿಸಿದರು.

“ಮುಕ್ತ ಮತ್ತು ನ್ಯಾಯಸಮ್ಮತ ರೀತಿಯಲ್ಲಿ ಚುನಾವಣೆ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ. ಚುನಾವಣೆಗೆ ಅಧಿಸೂಚನೆ ಹೊರಡಿಸಿದ ನಂತರ, ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ಚೆಕ್‌ಪೋಸ್ಟ್‌ ಸಿಬ್ಬಂದಿ ಹದ್ದಿನಂತೆ ಕಣ್ಣಿಡುತ್ತಿದ್ದಾರೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಬಗ್ಗೆ ಸಿವಿಜಿಲ್ ಅಪ್ಲಿಕೇಶನ್ ಮೂಲಕ ದೂರು ದಾಖಲಿಸಲು ಸಾರ್ವಜನಿಕರಿಗೆ ಅಧಿಕಾರ ನೀಡಲಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿರುವುದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X