ಬೆಂಗಳೂರು ಗ್ರಾಮಾಂತರ | ಬಿಆರ್‌ಡಿಸಿಎಯಿಂದ ಗ್ರಾಮೀಣ ಮಕ್ಕಳಿಗೆ ಉಚಿತ ʼಚೆಸ್‌ʼ ತರಬೇತಿ

Date:

Advertisements

ಚದುರಂಗ(ಚೆಸ್‌) ಆಟದಿಂದ ಗ್ರಾಮೀಣ ಪ್ರತಿಭೆಗಳು ವಂಚಿತರಾಗಬಾರದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಚೆಸ್ ಆಸೋಸಿಯೇಷನ್(ಬಿಆರ್‌ಡಿಸಿಎ) ಮಕ್ಕಳಿಗೆ ಚೆಸ್‌ ತರಬೇತಿ ಮತ್ತು ಸ್ಪರ್ಧೆ ಆಯೋಜಿಸುತ್ತಿದೆ.

2005ರಿಂದ ಈವರೆಗೂ ಸುಮಾರು 127 ಚದುರಂಗ ಸ್ಪರ್ಧೆಗಳನ್ನು ಆಯೋಜಿಸಿದ್ದು, ಸುಮಾರು 52 ಸ್ಪರ್ಧಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈವರೆಗೂ 18 ರಿಂದ 20 ರಾಜ್ಯಗಳ ಸುಮಾರು 3 ಲಕ್ಷ ಚೆಸ್ ಆಟಗಾರರಿಗೆ ಹೊಸಕೋಟೆಯ ಬಿಆರ್‌ಡಿಸಿಎ ವೇದಿಕೆ ಒದಗಿಸಿಕೊಟ್ಟಿದೆ. ಸ್ಪರ್ಧೆ ಆಯೋಜನೆ, ನಗದು ಬಹುಮಾನ, ಪ್ರಶಸ್ತಿ, ಪ್ರೋತ್ಸಾಹಧನಕ್ಕಾಗಿ ಬಿಆರ್‌ಡಿಸಿಎ ಈವರೆಗೂ ₹1.50 ಕೋಟಿ ವೆಚ್ಚ ಮಾಡಿದೆ.

ಚದುರಂಗ ಸ್ಪರ್ಧೆಯನ್ನು 2008ರಲ್ಲಿ ಆಯೋಜಿಸಿದಾಗ 100 ರಿಂದ 150 ಮಂದಿ ಮಾತ್ರ ಫಿಡೆ ರೇಟೆಡ್ ಆಟಗಾರರಷ್ಟೆ ಇದ್ದರು. ರೇಟಿಂಗ್ ಟೂರ್ನಿ ಆರಂಭಿಸಿದ ನಂತರ ರಾಜ್ಯದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಮಂದಿ ಇದ್ದಾರೆ. ಅಲ್ಲದೆ ರಾಜ್ಯದ ಎಲ್ಲ ಗ್ರ್ಯಾಂಡ್‌ ಮಾಸ್ಟರ್‌, ಇಂಟರ್‌ ನ್ಯಾಷನಲ್ ಮಾಸ್ಟರ್‌ ಇಲ್ಲಿಯ ಟೂರ್ನಿಗಳಲ್ಲಿ ಆಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಣರಾಜ್ಯೋತ್ಸವದಲ್ಲಿ ಜೈಶ್ರೀರಾಮ್‌ ಘೋಷಣೆ; ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಭಾವಚಿತ್ರ ಇಡದೆ ಅವಮಾನ

“ಬಿಆರ್‌ಡಿಸಿಎ ಆರಂಭವಾದ ದಿನದಿಂದ ಈವರೆಗೆ 120ಕ್ಕೂ ಹೆಚ್ಚು ಮಕ್ಕಳಿಗೆ ಉಚಿತ ತರಬೇತಿ ನೀಡಿದ್ದೇವೆ. ಮುಂದಿನ ತಿಂಗಳು ಹೊಸಕೇಟೆ ತಾಲೂಕಿನ ದೇವನಗೊಂದಿಯ ಬಳಿ ಶಾಲೆಯಲ್ಲಿ ಜಿಲ್ಲಾ ಚಾಂಪಿಯನ್‌ಷಿಪ್‌ಗೆ ಉಚಿತ ತರಬೇತಿ ಕ್ಯಾಂಪ್ ಹಮ್ಮಿಕೊಳ್ಳಲಾಗಿದೆ. ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಚೆಸ್ ಪಟುಗಳ ಎಲ್ಲ ಖರ್ಚುವೆಚ್ಚಗಳನ್ನು ಸಂಸ್ಥೆಯೇ ಭರಸಲಿದೆ” ಎಂದು ಬಿಆರ್‌ಡಿಸಿಎ ಅಧ್ಯಕ್ಷ ಎ ಚಿದಾನಂದ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X