ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ | ನನ್ನ ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ: ಬಸನಗೌಡ ಪಾಟೀಲ್‌ ಯತ್ನಾಳ್

Date:

Advertisements

ಬಿ ವೈ ವಿಜಯೇಂದ್ರ ಅವರ ಬದಲಾವಣೆಗೆ ಬಿಜೆಪಿಯ ಒಂದು ಬಣ ತೀವ್ರ ಆಗ್ರಹಪಡಿಸುತ್ತಿದೆ. ಪ್ರತಿದಿನ ವಿಜಯೇಂದ್ರ ವಿರುದ್ಧ ಶಾಸಕ ಯತ್ನಾಳ್ ಬಹಿರಂಗ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಸೃಷ್ಟಿಸುತ್ತಿದ್ದಾರೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಸಂಬಂಧಿಸಿದಂತೆ ತಾವೂ ಆಕಾಂಕ್ಷಿ ಎಂದು ಬಸನಗೌಡ ಪಾಟೀಲ್‌ ಯತ್ನಾಳ್ ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, “ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ನಮ್ಮದೊಂದು ಕೋರ್‌ ಕಮಿಟಿ ನಿರ್ಣಯಿಸಿದರೆ ಸ್ಪರ್ಧೆ ಮಾಡುತ್ತೇವೆ. ಅಲ್ಲಿ ನನ್ನ ಹೆಸರೇ ಅಂತಿಮವಾದರೆ ನಾನೇ ಸ್ಪರ್ಧಿಸುತ್ತೇನೆ, ಗೆಲುವು ನಿಶ್ಚಿತ, ಠೇವಣಿ ಉಚಿತ”ಎಂದು ತಿಳಿಸಿದರು.

“ಉಸ್ತುವಾರಿ ಸಭೆಗೆ ನಾನು ಹೋಗಿಲ್ಲ. ಅಲ್ಲಿ 600 ಶಾಸಕರ ಬೆಂಬಲವಿದೆ. ಅಲ್ಲಿ ನಮಗೇನು ಕೆಲಸ. ವಿಜಯೇಂದ್ರ ಅವರಿಗೆ 600 ಶಾಸಕರು, 1500 ಸಂಸದರು, 2000 ಎಂಎಲ್‌ಸಿಗಳ ಬೆಂಬಲವಿದೆ. ಯತ್ನಾಳ್, ಜಾರಕಿಹೊಳಿ ಹಿಂದೆ ಯಾರಿದ್ದಾರೆ? ಅದಕ್ಕೆ ನಾವು ಹೋಗಿಲ್ಲ” ಲೇವಡಿ ಮಾಡಿದರು.

Advertisements

“ರಾತ್ರಿ ಡಿ ಕೆ ಶಿವಕುಮಾರ್‌ ಮನೆ, ಬೆಳಿಗ್ಗೆ ಸಿದ್ದರಾಮಯ್ಯ ಮನೆ, 11ಕ್ಕೆ ಬೋಲೋ ಭಾರತ್‌ ಮಾತಾ ಕೀ ಜೈ. ಹೀಗಾದರೆ ಹೇಗೆ?” ಎಂದು ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ಕುಟುಕಿದರು.

ರೆಡ್ಡಿ-ರಾಮುಲು ಒಂದಾಗಬೇಕು

“ರೆಡ್ಡಿ-ರಾಮುಲು ಜಗಳವಾಡಬಾರದು. ಇಬ್ಬರು ಒಂದಾಗಿರಬೇಕು. ರೆಡ್ಡಿ-ಶ್ರೀರಾಮುಲು ಮಧ್ಯೆ ಕೆಲವರು ಹುಳಿ ಹಿಂಡಿದ್ದಾರೆ. ಇಲ್ಲ-ಸಲ್ಲದ್ದನ್ನೆಲ್ಲ ಹೇಳಿ ಇಬ್ಬರ ನಡುವೆ ಬೆಂಕಿ ಹಚ್ಚಿದ್ದಾರೆ. ಅವರಿಬ್ಬರೂ ಒಂದಾಗಿರಬೇಕು. ಕಷ್ಟದಿಂದ ಬಂದಿರುವ ಅವರಿಬ್ಬರೂ ಒಂದಾಗಿರಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X