ಬಾಗಲಕೋಟೆ | ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ; ಆರೋಪಿಗಳ ಗಡಿಪಾರಿಗೆ ದಲಿತ ಸಂಘಟನೆ ಆಗ್ರಹ

Date:

Advertisements

ವಿಜಯಪುರ ನಗರದಲ್ಲಿ ಇಟ್ಟಿಗೆ ಭಟ್ಟಿ ಮಾಲೀಕರಿಂದ ದಲಿತ ಕಾರ್ಮಿಕರ ಮೇಲೆ ನಡೆದ ಹಲ್ಲೆ ಪ್ರಕರಣ ಇಡೀ ರಾಜ್ಯ ತಲೆತಗ್ಗಿಸುವಂತಹ ವಿಚಾರ. ಹಾಗಾಗಿ ಆರೋಪಿಗಳ ಆಸ್ತಿ ಮುಟ್ಟುಗೊಲು ಹಾಕಿಕೊಂಡು ಅವರನ್ನು ಗಡಿಪಾರು ಮಾಡಲು ಒತ್ತಾಯಿಸಿ ಜಮಖಂಡಿಯ ದಲಿತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಮಾಡಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

“ಬಸವ ನಾಡಿನಲ್ಲಿ ಇಂತಹದ್ದೊಂದು ಹೇಯ ಕೃತ್ಯ ನಡೆದಿರುವುದು ನಾಚಿಕೇಡಿನ ಸಂಗತಿ. ಈ ವಿಷಯ ಪ್ರಜ್ಞಾವಂತ ನಾಗರಿಕ ಸಮಾಜದ ವಿರುದ್ಧವಾಗಿದೆ. ಮಾನವೀಯತೆ ಇರುವ ಯಾರೂ ಈ ಕೃತ್ಯವನ್ನು ಒಪ್ಪಿಕೊಳ್ಳಲಾರರು. ಕಷ್ಟಪಟ್ಟು ದುಡಿಯುವ ಅಮಾಯಕ ದಲಿತ ಕೂಲಿ ಕಾರ್ಮಿಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಕಿರಾತಕರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಮುಖ್ಯಮಂತ್ರಿಗಳು ಕೂಡಲೇ ಇಂತಹ ಕೃತ್ಯಕ್ಕೆ ಕಡಿವಾಣ ಹಾಕಬೇಕು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಇಟ್ಟಿಗೆ ಭಟ್ಟಿಗಳನ್ನು ಬಂದ್ ಮಾಡಬೇಕು. ಇಟ್ಟಿಗೆ ಭಟ್ಟಿ ಮಾಲೀಕರು ಎನಿಸಿಕೊಂಡವರ ಮನಸ್ಥಿತಿ ಬದಲಾಗಬೇಕು. ಕಾರ್ಮಿಕರೂ ಮನುಷ್ಯರೇ ಎಂಬುದನ್ನು ಮರೆಯಬಾರದು. ಇಂತಹ ಕೃತ್ಯಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ?: ಮೌಲಾನಾ ಆಝಾದ್ ರಾಷ್ಟ್ರೀಯ ವಿವಿ: ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ ಬಾಗಲಕೋಟೆಯ ಡಾ. ಶಬಾನಾ ಸೂರಿ

Advertisements

ಪ್ರತಿಭಟನೆಯಲ್ಲಿ ಸಿದ್ದು ಮಿಸಿ, ಮುತ್ತಣ್ಣ ಮೇತ್ರಿ, ಸುರೇಶ ನಡುವಿನಮನಿ, ರಮೇಶ್ ಬಾಳೋಲಗಿಡದ, ಪುಟ್ಟು ಪಾಣಿ, ಪ್ರೇಮ್ ಬಾಳೋಲಗಿಡದ, ಸಂಜು ಮುಂಡಗನೂರ, ರಮೇಶ ಪೂಜಾರಿ, ರವಿ ದೊಡ್ಡಮನಿ, ಮಾರುತಿ ಮರೇಗುದ್ದಿ, ಪ್ರಕಾಶ ಹುಗ್ಗಿನ್ನವರ, ಬಸು ಬುದ್ನಿ ಹಾಗೂ ಸಂಗಮೇಶ ಕಾಂಬಳೆ, ಸಿದ್ದು ಸತ್ಯನ್ನವರ, ಸಂತೋಷ ನಾಟಿಕಾರ ಇದ್ದರು.

WhatsApp Image 2025 05 16 at 6.54.26 PM
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X