ಬೆಳಗಾವಿ | ಜಿಲ್ಲೆಯಲ್ಲಿ ಮತ್ತೊಂದು ಮಕ್ಕಳ ಮಾರಾಟ ಜಾಲ ಪತ್ತೆ

Date:

Advertisements

ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಮಕ್ಕಳ ಮಾರಾಟ ಜಾಲ ಪತ್ತೆಯಾಗಿದ್ದು, ಹುಕ್ಕೇರಿ ಠಾಣೆಯ ಪೋಲಿಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಮಹಾರಾಷ್ಟ್ರ ಮೂಲದ ಆರೋಪಿಗಳಾದ ಸಂಗೀತಾ ಗೌಳಿ, ಸಂಗೀತಾ ತಾವಡೆ, ಮೋಹನ್ ತಾವಡೆ ಬಂಧಿತ ಆರೋಪಿಗಳಾಗಿದ್ದು, ಉಳಿದ ಆರೋಪಿಗಳಾದ ನಂದಕುಮಾರ ಡೋರಲೇಕರ, ನಂದಿನಿ ಡೋರಲೇಕರಿಗಾಗಿ ಪೋಲಿಸರು ಹುಡುಕಾಟ ನಡೆಸಿದ್ದಾರೆ.

ಮಕ್ಕಳ ಮಾರಾಟ ಗ್ಯಾಂಗ್ ​ವಿದವೆ ಮಹಿಳೆಯರನ್ನು ಟಾರ್ಗೆಟ್​ ಮಾಡುತ್ತದೆ. ಮಗು ಇದ್ದು ಗಂಡನಿಲ್ಲದ ಮಹಿಳೆಯರಿಗೆ ಎರಡನೇ ಮದುವೆ ಮಾಡಿಸುತ್ತಾರೆ. ಹುಕ್ಕೇರಿ ತಾಲೂಕಿನ ಸುಲ್ತಾನಪುರ ಗ್ರಾಮದ ಅರ್ಚನಾ ಎಂಬುವರನ್ನು ರಾಜು ಮಗ್ದುಮ‌ ಎನ್ನುವವರ ಜೊತೆ ಎರಡನೇ ಮದುವೆ ಮಾಡಿಸಿತ್ತು. ಅರ್ಚನಾ ಅವರ ಮೊದಲ ದಾಂಪತ್ಯದ ಸಾಕ್ಷಿಯಾಗಿ ಗಂಡು ಮಗು ಜನಿಸಿತ್ತು. ಈ ಗಂಡು ಮಗು ಅರ್ಚನಾ ಅವರ ಬಳಿ ಇದೆ. ಆದರೆ, ಈ ಮಗು ಅನಾರೋಗ್ಯದಿಂದ ಬಳಲುತ್ತಿತ್ತು ಮಗುವಿಗೆ ಚಿಕಿತ್ಸೆ ಕೊಡಿಸುವುದಾಗಿ ಹೇಳಿ ಆರೋಪಿಗಳಾದ ತಾವಡೆ ದಂಪತಿ ಮಗುವನ್ನು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಗಡಹಿಂಗ್ಲಜ್​ಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ, ಸಂಗೀತಾ ಗೌಳಿ ಮನೆಯಲ್ಲಿ ನಂದಕುಮಾರ ಡೋರಲೇಕರ ದಂಪತಿಗೆ 3 ಲಕ್ಷ ರೂ.ಗೆ ಮಗು ಮಾರಾಟ ಮಾಡಿದ್ದರು. ಮಗು ಮಾರಾಟದಿಂದ ಬಂದ ಹಣವನ್ನು ಮೂವರು ಆರೋಪಿಗಳು ಹಂಚಿಕೊಂಡಿದ್ದರು. ಈ ಸಂಬಂಧ ಹುಕ್ಕೇರಿ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಮೂವರನ್ನು ಬಂಧಿಸಿದ್ದಾರೆ. ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

ವಾರದ ಹಿಂದೆ ಇದೇ ಊರಲ್ಲಿ ಸಂಗೀತಾ ಎಂಬುವರ ಮಗು ಮಾರಾಟವಾಗಿತ್ತು. ಸಂಗೀತಾ ಅವರಿಗೂ ಕೂಡ ಎರಡನೇ ಮದುವೆ ಮಾಡಿಸಿ, ಅವರ ಮೊದಲ ಮಗುವನ್ನು 4 ಲಕ್ಷ ರೂ.ಗೆ ಮಾರಾಟ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಹುಕ್ಕೇರಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.

Advertisements

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X