ಕೊಪ್ಪಳ | ಸಂವಿಧಾನ ಬದಲಿಸಬೇಕೆನ್ನುವ ಮನುವಾದಿಗಳ ವಿರುದ್ಧ ಹೋರಾಟ ಅಗತ್ಯ: ಕಾಮ್ರೆಡ್ ಭಾರದ್ವಾಜ್

Date:

Advertisements

ಡಾ. ಬಿ ಆರ್‌ ಅಂಬೇಡ್ಕರ್‌ ಅವರು ರಚಿಸಿರುವ ಸಂವಿಧಾನವನ್ನೇ ಬದಲಿಸಬೇಕು ಎಂದು ಬಹಿರಂಗವಾಗಿ ಹೇಳಿಕೆ ಕೊಡುವ ಮನುವಾದಿಗಳ ವಿರುದ್ಧ ನಾವು ಹೋರಾಟ ಮಾಡುವುದು ಪ್ರಸ್ತುತ ಅತ್ಯಗತ್ಯವಾಗಿದೆ ಎಂದು ಹಿರಿಯ ಹೋರಾಟಗಾರ ಕಾಮ್ರೆಡ್‌ ಭಾರದ್ವಾಜ್ ಅಭಿಪ್ರಾಯಪಟ್ಟರು.

ಗಂಗಾವತಿಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಅಂಬೇಡ್ಕರ್ ಸರ್ಕಲ್‌ನಲ್ಲಿ ಎದ್ದೇಳು ಕರ್ನಾಟಕ ಹಾಗೂ ಸಂವಿಧಾನ ಸಂರಕ್ಷಣಾ ಪಡೆ ವತಿಯಿಂದ ನಡೆದ ʼಸಂವಿಧಾನ ಯಾನʼಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಈ ದೇಶಕ್ಕೆ ಸಂವಿಧಾನ ಬರುವ ಪೂರ್ವದಲ್ಲಿ ದಲಿತ, ಶೋಷಿತ ಸಮುದಾಯಗಳ ಧ್ವನಿಯನ್ನು, ಸಮಾನತೆಯನ್ನ ಹಾಗೂ ಪ್ರಶ್ನಿಸುವ ಹಕ್ಕನ್ನು ಕಿತ್ತುಕೊಳ್ಳಲಾಗಿತ್ತು. ಇವತ್ತು ಸಂವಿಧಾನ ನಮಗೆ ಸಮಾನತೆಯ ಜೊತೆಗೆ ಸಾಮಾಜಿಕವಾಗಿ, ನ್ಯಾಯಕ್ಕಾಗಿ ಹೋರಾಡುವ ಹಕ್ಕನ್ನು ಕೊಟ್ಟಿದೆ. ಸಂವಿಧಾನ ಬದಲಿಸಲು ಸಂಚು ನಡೆದಿರುವುದು ಇಂದು ನಿನ್ನೆಯದಲ್ಲ. ಜಾರಿ ಬಂದ ದಿನದಿಂದಲೇ ನಡೆದಿದೆ. ಇಂತಹ ಕುತಂತ್ರಗಳ ವಿರುದ್ಧ ಒಗ್ಗಾಟಾಗಿ ಹೋರಾಟ ಮಾಡಬೇಕು” ಎಂದು ಕರೆ ನೀಡಿದರು.

ಎದ್ದೇಳು ಕರ್ನಾಟಕ ಸಂಘಟನೆಯ ಜಿಲ್ಲಾ ಸಂಚಾಲಕ ಸಿರಾಜ್ ಅಹ್ಮದ್ ಮಾತನಾಡಿ, “ಭಾರತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ. ಸಂವಿಧಾನ, ರೈತ, ಸೈನಿಕ, ದೇಶದ ಸುರಕ್ಷತೆ ಹೆಸರಿನಲ್ಲಿ ಅಧಿಕಾರಕ್ಕೆ ಬಂದ‌ ಕೇಂದ್ರ ಸರ್ಕಾರದ ಸಚಿವರು, ಪಕ್ಷದ ನಾಯಕರು ಬಹಿರಂಗವಾಗಿ ಸಂವಿಧಾನ ಬದಲಿಸುವುದಕ್ಕೆ ನಾವು ಬಂದಿರುವುದು ಎಂದು ಹೇಳಿಕೆ ಕೊಡುತ್ತಿವೆ. ಇವರ ಮನುವಾದ ಕಾನೂನು ಜಾರಿಗೆ ತಂದು ಈ ದೇಶದ ಮೂಲ ನಿವಾಸಿಗಳನ್ನ ಗುಲಾಮರನ್ನಾಗಿ ಮಾಡುವುದು ಅವರ ಸ್ಪಷ್ಟ ಉದ್ದೇಶವಾಗಿದೆ. ಹಾಗಾಗಿ ನಾವು ಇಂದಿನ ಸಂವಿಧಾನ ವಿರೋಧಿಗಳ ವಿರುದ್ಧ ಬೀದಿಗೆ ಬಂದು ಹೋರಾಡಲು ಸಿದ್ಧವಾಗಬೇಕು” ಎಂದು ತಿಳಿಸಿದರು.

Advertisements

ರೈತ ಮುಖಂಡ ಶಂಕರ್ ಪಾಟೀಲ್ ಮಾತನಾಡಿ, “ಸಂವಿಧಾನ ನಮಗೆ ಶಿಕ್ಷಣದ ಹಕ್ಕು, ಸಂಘಟಿಸುವ ಹಕ್ಕು, ಹೋರಾಟದ ಹಕ್ಕೂ ಕೊಟ್ಟಿದೆ. ಅದು ಅಂಬೇಡ್ಕರ್ ಅವರ ಶ್ರಮದ ಫಲ. ನಮ್ಮ ಹಕ್ಕಿಗಾಗಿ ಹೋರಾಡುವ ರೈತರನ್ನ ದೇಶದ್ರೋಹಿಗಳು, ಖಲಿಸ್ತಾನಿಗಳು ಎಂದು ಕರೆದು ಅನ್ನದಾತನಿಗೆ ಕೇಂದ್ರ ದ್ರೋಹ ಬಗೆಯುತ್ತಿದೆ. ಅವೈಜ್ಞಾನಿಕ ಕಾನೂನು ಜಾರಿಗೆ ತರುವುದರ ಮೂಲಕ ಸಂವಿಧಾನಕ್ಕೆ ಅನ್ಯಾಯ ಮಾಡಿದೆ. ನಿರಂತರ ಸಂವಿಧಾನ ಒಪ್ಪಿಗೆ ಇಲ್ಲ ಅಂತ ಹೇಳುವ ಮೂಲಕ ಸಮಾನತೆ ಕೊಟ್ಟ ಸಂವಿಧಾನದ ಪ್ರತಿ ಸುಡುತ್ತಿದ್ದಾರೆ. ಎಲ್ಲರೂ ಎಚ್ವರಗೊಳ್ಳುವ ಕಾಲ ಇದು” ಎಂದರು.

WhatsApp Image 2025 01 27 at 10.09.13 AM

ಜಮಾ ಅತೆಯ ಎಮ್ ಆರ್ ರಾಜಾ ಸಾಬ್ ಮಾತನಾಡಿ, “ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚಿಸುವಾಗ ಯಾವುದೇ ಒಂದು ಸಮುದಾಯ, ಜಾತಿ, ಧರ್ಮದ ಉದ್ಧಾರಕ್ಕೆ ರಚನೆ ಮಾಡಲಿಲ್ಲ. ಎಲ್ಲರನ್ನೊಳಗೊಂಡು ಸಮಾನ ಹಕ್ಕು ಕೊಟ್ಟರು. ಅಂಬೇಡ್ಕರ್ ಸಂವಿಧಾನ ‘ಸತ್ತವರ ಚರಿತ್ರೆಯಲ್ಲ, ಬದುಕಿದವರ ಬದುಕು’ ಎಂದರು. ಮೂಲ ನಿವಾಸಿಗಳ ಬದುಕನ್ನೇ ತುಳಿಯುವ ಮತಾಂಧರಿಂದ ಸಂವಿಧಾನ ರಕ್ಷಿಸಬೇಕಿದೆ. ಸಂವಿಧಾನದಲ್ಲಿ ಕೇವಲ ಅಕ್ಷರಗಳಿಲ್ಲ, ಭಾಷೆಯಿಲ್ಲ ಭಾರತದ ಮೂಲ ನಿವಾಸಿಗಳ ಬದುಕು, ಉಸಿರು ಇದೆ” ಎಂದು ಹೇಳಿದರು.

ಜನಶಕ್ತಿ ರಾಜ್ಯ ಸಂಚಾಲಕ ರಾಜನಾಯ್ಕ್ ಕುಷ್ಟಗಿ ಮಾತನಾಡಿ, “ಸಂವಿಧಾನದ ಮೂಲ ಆಶಯ, ಉದ್ದೇಶವನ್ನು ಎದ್ದೇಳು ಕರ್ನಾಟಕದ ಮೂಲಕ ಹಳ್ಳಿಯ ಮುಗ್ದ ಜನರವರೆಗೂ ತಲುಪಿಸಬೇಕು. ಸಂವಿಧಾನ ಸಂರಕ್ಷಣೆ ಮಾಡಿಕೊಳ್ಳುವಲ್ಲಿ ಯುವಕರನ್ನ ಸಂಘಟಿಸಿ ನಮ್ಮ ಹಕ್ಕುಗಳಿಗಾಗಿ ನಾವು ಹೋರಾಡುವ ಅಗತ್ಯ ಇದೆ. ಸಂವಿಧಾನ ಮೂಲ ಆಶಯ ಕಿತ್ತೊಗೆದರೆ ಭಾರತ ಸಂಪೂರ್ಣ ಸಂಕಷ್ಟದಲ್ಲಿ ಸಿಲುಕಲಿದೆ ಎಂಬುದನ್ನು ಮನದಟ್ಟು ಮಾಡಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಶಾದಿ ಮಹಲ್ ಬಾಡಿಗೆ ಕಡಿಮೆ ಮಾಡಿ; ಸಚಿವ ಜಮೀರ್ ಅಹ್ಮದ್‌ಗೆ ಮನವಿ

ಈ ವೇಳೆ ದುರ್ಗೇಶ ಬರಗೂರು, ಯುಮನೂರು ಇಳೆಗನೂರು, ಲಕ್ಷ್ಮೀ ಹೊಸಕೇರಿ, ಯಮುನಾ ಚೇಳೂರು, ಚೈತ್ರ ಗಬ್ಬೂರ, ಮಾರುತಿ, ಸುನೀಲ್, ಶೋಭಾ ರಾಂಪೂರ, ಜಾಂಭವಿ ರಾಂಪೂರ, ಕಾ ವಿಜಯ, ಅನುಪಮ್, ಶರಣು, ಶ್ರೀದೇವಿ ಬರಗೂರು, ಮುಂತಾದವರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X