ಗುಬ್ಬಿ ಕಸಬ ವಿಎಸ್ಎಸ್ಎನ್ ಅಧ್ಯಕ್ಷರಾಗಿ ಜಿ.ಡಿ.ಸುರೇಶ್ ಗೌಡ, ಉಪಾಧ್ಯಕ್ಷರಾಗಿ ಜಿ.ಆರ್.ಚನ್ನಬಸವಣ್ಣ ಅವಿರೋಧ ಆಯ್ಕೆ

Date:

Advertisements

ಗುಬ್ಬಿ ತಾಲೂಕಿನ ಕಸಬ ಹೋಬಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿ.ಡಿ.ಸುರೇಶ್ ಗೌಡ ಹಾಗೂ ಉಪಾಧ್ಯಕ್ಷರಾಗಿ ಜಿ.ಆರ್.ಚನ್ನಬಸವಣ್ಣ ಅವಿರೋಧ ಆಯ್ಕೆಯಾದರು.

ಪಟ್ಟಣದ ಎಂ.ಜಿ.ರಸ್ತೆಯಲ್ಲಿರುವ ವಿಎಸ್ಎಸ್ಎನ್ ಸೊಸೈಟಿ ಆವರಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಈ ಇಬ್ಬರು ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಹಿನ್ನಲೆ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಡಿ.ಸುರೇಶ್ ಗೌಡ ಮಾತನಾಡಿ ಕಸಬ ವಿಎಸ್ಎಸ್ಎನ್ ಚುನಾವಣೆ ನಿಲ್ಲಿಸಲು ಕೆಲ ದುಷ್ಟ ಶಕ್ತಿಗಳು ಪ್ರಯತ್ನ ಮಾಡಿದ್ದವು. ಆದರೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಸಹಕಾರದಿಂದ ಚುನಾವಣೆ ಸುಸೂತ್ರವಾಗಿ ನಡೆದಿದೆ. ಎಲ್ಲಾ ನಿರ್ದೇಶಕರು ಅವಿರೋಧ ಆಯ್ಕೆ ನಡೆದು ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಮರು ಆಯ್ಕೆ ಮಾಡಿದ್ದಾರೆ. ಎಲ್ಲಾ ನಿರ್ದೇಶಕರ ವಿಶ್ವಾಸ ಹಾಗೂ ಕೆ.ಎನ್.ರಾಜಣ್ಣ ಅವರ ಆಶೀರ್ವಾದದಿಂದ ಮತ್ತೇ ಅಧ್ಯಕ್ಷನಾಗಿ ಅಯ್ಕೆಯಾಗಿದ್ದೇನೆ.

Advertisements

ರೈತರ ಕೃಷಿ ಅನುಕೂಲಕ್ಕೆ ತಕ್ಕಂತೆ ಸೊಸೈಟಿ ಕೆಲಸ ಮಾಡಲಿದೆ. ಈಗಾಗಲೇ ಬಡ್ಡಿ ರಹಿತ ಸಾಲವನ್ನು ಮೂರು ಕೋಟಿ ನೀಡಿದ್ದೇವೆ. ಮತ್ತೊಮ್ಮೆ ಮೂರು ಕೋಟಿ ಸಾಲ ನೀಡಲು ರಾಜಣ್ಣನವರ ಸಹಕಾರ ಕೋರಿದ್ದೇವೆ. ಬಡ್ಡಿ ರಹಿತ ಸಾಲ ನೀಡಿ ಕೃಷಿಕರಿಗೆ ಬೆಂಬಲವಾಗಿ ನಿಲ್ಲುತ್ತೇವೆ ಎಂದರು.

ನೂತನ ಉಪಾಧ್ಯಕ್ಷ ಜಿ.ಆರ್.ಚನ್ನಬಸವಣ್ಣ ಮಾತನಾಡಿ ರೈತರ ಅಭಿವೃದ್ಧಿಗೆ ಪೂರಕ ಯೋಜನೆ ಹಾಗೂ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದು ಆರ್ಥಿಕ ವಹಿವಾಟು ಸಹ ನಡೆಸಿದ್ದೇವೆ. ಕೃಷಿ ಪರಿಕರ ಖರೀದಿ ಹಾಗೂ ಕೃಷಿ ಸಾಲ ನೀಡುತ್ತಾ ಈ ರೈತರ ನೆರವಿಗೆ ನಿಂತ ಈ ಸಂಘವನ್ನು ಉತ್ತಮ ಬ್ಯಾಂಕ್ ಆಗಿ ಮೇಲ್ದರ್ಜೆಗೇರಿಸುವ ಆಲೋಚನೆ ಇದೆ. ಎಲ್ಲಾ ಸದಸ್ಯರ ಒಮ್ಮತದಲ್ಲಿ ಸಹಕಾರ ಸಚಿವ ರಾಜಣ್ಣ ಅವರ ಸಹಕಾರದಲ್ಲಿ ಸಂಘ ಅಭಿವೃದ್ದಿ ಪಡಿಸುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಸಂಘದ ಸದಸ್ಯರಾದ ನರಸಿಂಹಮೂರ್ತಿ, ಜಗದೀಶ್, ಡಿ.ರಘು, ಗೋವಿಂದರಾಜು, ಕುಂಭಣ್ಣ, ನಾಗರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾರನಹಳ್ಳಿ ಪ್ರಭಣ್ಣ, ಪಪಂ ಸದಸ್ಯ ರಂಗಸ್ವಾಮಿ ಸೇರಿದಂತೆ ಹಲವು ಮುಖಂಡರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X