ಚುನಾವಣಾ ಬಾಂಡ್ ಮೂಲಕ 1700 ಕೋಟಿ ದೇಣಿಗೆ ಪಡೆದ ಬಿಜೆಪಿ

Date:

Advertisements

ಬಿಜೆಪಿಯ ಆದಾಯ ಒಂದು ವರ್ಷದಲ್ಲಿ ಶೇಕಡ 83 ಏರಿಕೆ ಕಂಡು 2023-24ನೇ ಹಣಕಾಸು ವರ್ಷದಲ್ಲಿ 4340.5 ಕೋಟಿ ರೂಪಾಯಿಗೆ ಏರಿದೆ. ಈ ಪೈಕಿ 1685.6 ಕೋಟಿ ರೂಪಾಯಿ ಚುನಾವಣಾ ಬಾಂಡ್ ಗಳ ಮೂಲಕ ಬಂದಿದೆ.

2022-23ನೇ ಹಣಕಾಸು ವರ್ಷದಲ್ಲಿ ಪಕ್ಷದ ಆದಾಯ 2360.8 ಕೋಟಿ ರೂಪಾಯಿಗಳಾಗಿತ್ತು. ಪಕ್ಷ ಇತ್ತೀಚೆಗೆ ಚುನಾವಣಾ ಆಯೋಗಕ್ಕೆ ನೀಡಿದ ವಾರ್ಷಿಕ ಪರಿಶೋಧಿತ ವರದಿಯಲ್ಲಿ ಈ ಅಂಕಿ ಅಂಶಗಳು ಸೇರಿವೆ. ಚುನಾವಣಾ ಬಾಂಡ್ ಯೋಜನೆ ಜಾರಿಗೆ ಬಂದ ಬಳಿಕ ಪಕ್ಷ ಗಳಿಸಿದ ಗರಿಷ್ಠ ದೇಣಿಗೆ ಇದಾಗಿದೆ.

ಕಾಂಗ್ರೆಸ್ ಪಕ್ಷದ ಆದಾಯ ಶೇಕಡ ಇದೇ ಅವಧಿಯಲ್ಲಿ 170ರಷ್ಟು ಏರಿಕೆ ಕಂಡು 452.4 ಕೋಟಿ ರೂಪಾಯಿಯಿಂದ 1225 ಕೋಟಿಗೆ ಹೆಚ್ಚಿದೆ. ಕಾಂಗ್ರೆಸ್ ಪಕ್ಷ ಬಾಂಡ್ ಮಾರ್ಗದ ಮೂಲಕ ಪಡೆದ ದೇಣಿಗೆ ಕೂಡಾ ಶೇಕಡ 384 ರಷ್ಟು ಹೆಚ್ಚಳ ಕಂಡಿದೆ. 2023ನೇ ಹಣಕಾಸು ವರ್ಷದಲ್ಲಿ ಚುನಾವಣಾ ಬಾಂಡ್ ಮೂಲಕ ಪಕ್ಷ 171 ಕೋಟಿ ರೂಪಾಯಿ ದೇಣಿಗೆ ಪಡೆದಿದ್ದರೆ, ಮರು ವರ್ಷ ಇದು 828.4 ಕೋಟಿಗೆ ಹೆಚ್ಚಿದೆ. ಬಾಂಡ್ ಗಳ ಮೂಲಕ ಗರಿಷ್ಠ ಆದಾಯ ಪಡೆದ ಎರಡನೇ ಪಕ್ಷವಾಗಿ ಕಾಂಗ್ರೆಸ್ ಹೊರಹೊಮ್ಮಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಸ್‌ಸಿಎಸ್‌ಪಿ / ಟಿಎಸ್‌ಪಿ ಅನುದಾನ ಬಳಕೆಯಾಗುತ್ತಿಲ್ಲವೇಕೆ?

ಬಿಆರ್ ಎಸ್ ಪಕ್ಷ ಒಟ್ಟು 685.5 ಕೋಟಿ ರೂಪಾಯಿ ಆದಾಯವನ್ನು ಘೋಷಿಸಿದ್ದು, ಕಾಂಗ್ರೆಸ್ ಪಕ್ಷ ಅದನ್ನು ಹಿಂದಿಕ್ಕಿದೆ. ಅಂತೆಯೇ ಟಿಎಂಸಿ 2023-24ರಲ್ಲಿ ಬಾಂಡ್ ಮೂಲಕ 612.4 ಕೋಟಿ ರೂಪಾಯಿ ಸ್ವೀಕರಿಸಿದೆ. ಬಿಜೆಪಿಯ ವೆಚ್ಚ ಕೂಡಾ ಶೇಕಡ 62ರಷ್ಟು ಹೆಚ್ಚಿದ್ದು, 2022-23ರಲ್ಲಿ ಇದ್ದ 1361.7 ಕೋಟಿಯಿಂದ 2211.7 ಕೋಟಿಗೆ ಏರಿಕೆಯಾಗಿದೆ. ಈ ಪೈಕಿ 1754 ಕೋಟಿ ರೂಪಾಯಿಗಳನ್ನು ಚುನಾವಣೆ ಮತ್ತು ಸಾಮಾನ್ಯ ಪ್ರಚಾರಕ್ಕೆ ವೆಚ್ಚ ಮಾಡಿದೆ.

ಕಾಂಗ್ರೆಸ್ ಪಕ್ಷದ ವೆಚ್ಚ ಕೂಡಾ ಈ ಅವಧಿಯಲ್ಲಿ ಶೇಕಡ 120ರಷ್ಟು ಏರಿಕೆಯಾಗಿದ್ದು, 467.1 ಕೋಟಿಯಿಂದ 1025.2 ಕೋಟಿಗೆ ಹೆಚ್ಚಿದೆ. ಪಕ್ಷ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ 49.6 ಕೋಟಿ ರೂಪಾಯಿ ವೆಚ್ಚ ಮಾಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X