ಚಳಿಗಾಲದಲ್ಲೂ ಮಳೆ ಅಬ್ಬರ; ಕರ್ನಾಟಕದ 11 ಜಿಲ್ಲೆಗಳಲ್ಲಿ ಫೆ.2ರಿಂದ ಮಳೆ: ಹವಾಮಾನ ಇಲಾಖೆ

Date:

Advertisements

ರಾಜ್ಯದ್ಯಂತ ತೀವ್ರ ಚಳಿ ಇದ್ದು, ಬೆಳಗ್ಗಿನ ಸಮಯದಲ್ಲಿ ಮನೆಯಿಂದ ಹೊರಬರುವುದೇ ಕಷ್ಟ ಎನ್ನುತ್ತಿದ್ದಾರೆ ಜನರು. ಆದರೂ, ದಿನನಿತ್ಯದ ಕೆಲಸಕ್ಕಾಗಿ, ಬದುಕಿನ ಬವಣೆ ನೀಗಿಸುವುದಕ್ಕಾಗಿ ಕೊರೆಯುವ ಚಳಿಯಲ್ಲೂ ತಮ್ಮ ಕೆಲಸ-ಕಾರ್ಯಗಳಲ್ಲಿ ತೊಡಗುತ್ತಿದ್ದಾರೆ. ಈ ನಡುವೆ, ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫೆಬ್ರವರಿ 2ರಿಂದ ಕರ್ನಾಟಕದ 11 ಜಿಲ್ಲೆಗಳಲ್ಲಿ ಮತ್ತೆ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೆಳಿದೆ.

ಇನ್ನು, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ ತುಮಕೂರು, ಶಿವಮೊಗ್ಗ, ಕೋಲಾರ, ದಾವಣಗೆರೆ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಚಳಿ ಹೆಚ್ಚಿರಲಿದೆ ಎಂದು ತಿಳಿಸಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X